ನಾರ್ವೆ: ಆಂಧ್ರದ ಟಿಸಿಎಸ್ ಟೆಕ್ಕಿ ದಂಪತಿ ಸೆರೆ

ಈಗಿನ ಪ್ರಕರಣ ಏನೆಂದರೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ದೊಂಡಪಡು ಮೂಲದ ವಿ ಚಂದ್ರಶೇಖರ್ ಮತ್ತು ಅವರ ಪತ್ನಿ ಅನುಪಮಾ ಅವರು ಓಸ್ಲೊ ಕಂಪನಿಯೊಂದರಲ್ಲಿ ಸಾಫ್ಟವೇರ್ ಇಂಜಿನಿಯರುಗಳಾಗಿದ್ದಾರೆ. ಈ ದಂಪತಿ ತಮ್ಮ 6 ವರ್ಷದ ಮಗನಿಗೆ ಶಿಸ್ತು ಕಲಿಸಲು ಕಠಿಣ ಶಿಕ್ಷೆ ನೀಡಿದ್ದಾರೆ ಎಂಬುದು ಆರೋಪ.
ಪಾಲಕರು ತನ್ನನ್ನು ಭಾರತಕ್ಕೆ ಕಳುಹಿಸುವ ಬೆದರಿಕೆ ಹಾಕಿದ್ದಾರೆ ಎಂದು ಈ ದಂಪತಿಯ 6 ವರ್ಷದ ಮಗ ಸಾಯಿ ಶ್ರೀರಾಮ್ ಶಾಲಾ ಶಿಕ್ಷಕರಿಗೆ ದೂರು ನೀಡಿದ್ದ. ಅದಾದ 9 ತಿಂಗಳ ನಂತರ ಆತನ ಪೋಷಕರನ್ನು ಬಂಧಿಸಲಾಗಿದೆ ಎಂದು ಚಂದ್ರಶೇಖರ್ ಅವರ ಸಹೋದರನ ಪುತ್ರ ವಿ ಶೈಲೇಂದರ್ ಅಲವತ್ತುಕೊಂಡಿದ್ದಾರೆ.
ಚಂದ್ರಶೇಖರ್ ಅವರ ಮಗ ಶಾಲಾ ಬಸ್ನಲ್ಲಿ ಮೂತ್ರ ಮಾಡುತ್ತಿದ್ದ ಎನ್ನಲಾಗಿದೆ. ಆತ ಶಾಲೆಯಿಂದ ಆಟಿಕೆಗಳನ್ನು ಮನೆಗೆ ತರುತ್ತಿದ್ದ. ಈ ವಿಚಾರವನ್ನು ಶಾಲಾ ಆಡಳಿತ ಮಂಡಳಿ ದಂಪತಿಯ ಗಮನಕ್ಕೆ ತಂದಿತ್ತು. ಇದರಿಂದ ಬೇಸತ್ತ ಆರೋಪಿ ದಂಪತಿಯು 'ಸರಿಯಾಗಿ ವರ್ತಿಸದಿದ್ದಲ್ಲಿ ಭಾರತಕ್ಕೆ ಕಳುಹಿಸುವುದಾಗಿ ಮಗನಿಗೆ ಎಚ್ಚರಿಸಿದ್ದರು' ಎನ್ನಲಾಗಿದೆ.
ಬಾಧಿತ ಮಗು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಚಂದ್ರಶೇಖರ್ ದಂಪತಿಯನ್ನು ಓಸ್ಲೊ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಡಿಸೆಂಬರ್ 3ರಂದು ತೀರ್ಪು ಹೊರಬೀಳಲಿದ್ದು, ಆರೋಪ ಸಾಬೀತಾದರೆ ತಾಯಿಗೆ ಒಂದೂ ಕಾಲು ವರ್ಷ ಮತ್ತು ತಂದೆಗೆ ಒಂದೂವರೆ ವರ್ಷ ಜೈಲು ಶಿಕ್ಷೆಯಾಗಲಿದೆ.
ಈ ಮಧ್ಯೆ, ನಾರ್ವೆ ಅಧಿಕಾರಿಗಳು ದಂಪತಿಯ ಬಂಧನದ ವಿಚಾರವನ್ನು ತಮಗೆ ಅಧಿಕೃತವಾಗಿ ತಿಳಿಸಿಲ್ಲ. ಈ ವಿಚಾರದಲ್ಲಿ ಭಾರತ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಚಂದ್ರಶೇಖರ್ ಅವರ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications