ಕಾರ್ಪೊರೇಟರ್ ಗೋವಿಂದರಾಜುಗೆ ಜಾಮೀನು

HC relief to Congress corporator L Govindaraju
ಬೆಂಗಳೂರು, ಡಿ.3: ಲಂಚ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷ ಜೈಲು ಶಿಕ್ಷೆ ಪಡೆದಿದ್ದ ಕಾಂಗ್ರೆಸ್ ಬಿಬಿಎಂಪಿ ಸದಸ್ಯ ಎಲ್ ಗೋವಿಂದರಾಜು ಅವರಿಗೆ ರಿಲೀಫ್ ಸಿಕ್ಕಿದೆ.ಗೋವಿಂದರಾಜು ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಸೋಮವಾರ (ಡಿ.3) ಜಾಮೀನು ನೀಡಿದೆ.

ಕೋರ್ಟ್ ಅನುಮತಿ ಇಲ್ಲದೆ ರಾಜ್ಯ ಬಿಟ್ಟು ತೆರಳುವಂತಿಲ್ಲ. ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. 2 ಲಕ್ಷ ರು ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಸಲ್ಲಿಸಬೇಕು. ತಮ್ಮ ವಿರುದ್ಧ ಅರ್ಜಿಸಲ್ಲಿಸಿರುವ ಉದಯ್ ಕುಮಾರ್ ಸೇರಿದಂತೆ ಇತರೆ ಸಾಕ್ಷಿಗಳಿಗೂ ಬೆದರಿಕೆ ಒಡ್ಡುವಂತಿಲ್ಲ ಎಂಬ ಷರತ್ತು ವಿಧಿಸಿ ಹೈಕೋರ್ಟ್ ನ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

ಲಂಚ ಪಡೆದ ಆರೋಪ ಸಾಬೀತಾಗಿದ್ದರಿಂದ ಗೋವಿಂದರಾಜು ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಕಠಿಣ ಶಿಕ್ಷೆ ವಿಧಿಸಿ ಬುಧವಾರ (ನ.28) ಆದೇಶ ಹೊರಡಿಸಿತ್ತು. ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಸೆಕ್ಷನ್ 7 ಹಾಗೂ 13 ರ ಅಡಿಯಲ್ಲಿ ಆರೋಪ ಸಾಬೀತಾಗಿತ್ತು. ಕಠಿಣ ಸಜೆಗೂ ಕೂಡಾ ತಾತ್ಕಾಲಿಕ ತಡೆ ನೀಡಲಾಗಿದೆ.

ಸರ್ಕಾರಿ ಹುದ್ದೆಯಲ್ಲಿರುವವರು ಸಾರ್ವಜನಿಕರ ಹಕ್ಕು ರಕ್ಷಿಸಬೇಕು. ಅದು ಬಿಟ್ಟು ಗೂಂಡಾಗಿರಿ ವರ್ತನೆ ಮಾಡುವುದು ಸರಿಯಲ್ಲ. ಇದು ಬೇರೆಯವರಿಗೆ ಪಾಠವಾಗಬೇಕು. ಈ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ದಂಡದ ಮೊತ್ತ ಪಾವತಿಸಲು ಸಾಧ್ಯವಾಗದಿದ್ದರೆ ಹೆಚ್ಚುವರಿಯಾಗಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಲೋಕಾಯುಕ್ತ ಕೋರ್ಟ್ ಎಚ್ಚರಿಸಿತ್ತು

ಪದ್ಮನಾಭನಗರ ಅಸೆಂಬ್ಲಿ ಕ್ಷೇತ್ರದಲ್ಲಿರುವ ಗಣೇಶ ಮಂದಿರ ಬಿಬಿಎಂಪಿ ವಾರ್ಡ್ (ನಂ.165) ನ ಕಾಂಗ್ರೆಸ್ ಸದಸ್ಯ ಗೋವಿಂದರಾಜು ಗುತ್ತಿಗೆದಾರರೊಬ್ಬರಿಂದ 2 ಲಕ್ಷ ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.

4 ವರ್ಷ ಕಠಿಣ ಶಿಕ್ಷೆ, 90 ಸಾವಿರ ರು ದಂಡ ವಿಧಿಸಿರುವ ಲೋಕಾಯುಕ್ತ ಕೋರ್ಟ್ ಆದೇಶ ಪ್ರಶ್ನಿಸಿ ಗೋವಿಂದರಾಜು ಪರ ವಕೀಲರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟಿನಲ್ಲಿ ಸೋಮವಾರ(ಡಿ.3) ಜಾಮೀನು ಮಂಜೂರಾಗಿದೆ.

ಪ್ರಕರಣದ ಹಿನ್ನೆಲೆ: ಕತ್ರಿಗುಪ್ಪೆಯಲ್ಲಿ ಉದಯ್ ಕುಮಾರ್ ಎಂಬುವವರು ಪಾಲಿಕೆಯಿಂದ ನಕ್ಷೆ ಮಂಜೂರಾತಿ ಪಡೆದು ಬಹುಮಹಡಿ ನಿರ್ಮಿಸುತ್ತಿದ್ದರು. ಗೋವಿಂದರಾಜು ಸದಸ್ಯರಾದ ನಂತರ ಕಟ್ಟಡ ಪರಿಶೀಲಿಸಿದ್ದರು. ನಕ್ಷೆ ಮತ್ತು ಬೈಲಾ ಉಲ್ಲಂಘಿಸಲಾಗಿದೆ ಎಂದು ಹೇಳಿ ನಿರ್ಮಾಣ ಸ್ಥಗಿತಕ್ಕೆ ಆದೇಶಿಸಲಾಗಿತ್ತು.

ಕಾಮಗಾರಿ ಮುಂದುವರಿಯಬೇಕಾದರೆ 8 ಲಕ್ಷ ರುಪಾಯಿಗಳನ್ನು ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ, 5 ಲಕ್ಷ ರುಪಾಯಿಗೆ ಡೀಲ್ ಕುದುರಿತ್ತು. ತಿಂಗಳ ಹಿಂದೆ ಉದಯ್ ಕುಮಾರ್ ಅವರು ಗೋವಿಂದರಾಜು ಅವರಿಗೆ 2 ಲಕ್ಷ ರುಪಾಯಿಗಳನ್ನು ನೀಡಿದ್ದರು.

ಉಳಿದ ಹಣ ನೀಡುವಂತೆ ಉದಯ್ ಕುಮಾರ್ ಅವರಿಗೆ ಗೋವಿಂದರಾಜು ಪದೆಪದೇ ದೂರವಾಣಿ ಮಾಡುತ್ತಿದ್ದರು. ಇದರಿಂದ ಬೇಸತ್ತ ಉದಯ್ ಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದರು.

ನಂತರ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರ ತಂಡ ದಾಳಿ ನಡೆಸಿ ಬಿಬಿಎಂಪಿ ಸದಸ್ಯ ಗೋವಿಂದರಾಜು ಅವರನ್ನು ಜುಲೈ 17, 2010 ರಂದುಲಂಚ ಸ್ವೀಕರಿಸುವಾಗ ಹಿಡಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+