ಕನ್ನಡಿಗರು, ತಮಿಳರು ನಾವೆಲ್ಲಾ ಒಂದೇ: ಕರುಣಾನಿಧಿ

Cauvery row, Karunanidhi appeals both the states for calm
ಚೆನ್ನೈ, ಡಿ 4: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಉಂಟಾಗಿರುವ ವಿವಾದ ಎರಡೂ ರಾಜ್ಯದ ಜನರ ನಡುವೆ ದ್ವೇಷದ ವಾತಾವರಣ ಬಿತ್ತದಿರಲಿ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಹೇಳಿಕೆ ನೀಡಿದ್ದಾರೆ.

ಎರಡೂ ರಾಜ್ಯದ ಜನತೆ ಸಹೋದರ, ಸಹೋದರಿಯರಂತೆ ಬದುಕ ಬೇಕೆನ್ನುವುದು ನನ್ನ ಆಶಯ. ಕಾವೇರಿ ಸಮಸ್ಯೆಯನ್ನು ಮುಂದಿಟ್ಟುಕೊಂಡು ಎರಡೂ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳುವುದು ಬೇಡ ಎಂದು ಹಿರಿಯ ಡಿಎಂಕೆ ಮುಖಂಡ ಕರುಣಾನಿಧಿ ಸಲಹೆ ನೀಡಿದ್ದಾರೆ.

ಕಾವೇರಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗಲೂ ಈ ಮಾತನ್ನು ಹೇಳಿಕೊಂಡು ಬರುತ್ತಿದ್ದೇನೆ. ಸಮಸ್ಯೆ ಪರಿಹರಿಸಿಕೊಳ್ಳಲು ಕಾಳಜಿ ಬೇಕು, ಎರಡೂ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾವೇರಿ ಸಮಸ್ಯೆ ಪರಿಹಾರ ಕಾಣಲಿ ಎಂದು ಕರುಣಾನಿಧಿ ಆಶಿಸಿದ್ದಾರೆ.

ಕರ್ನಾಟಕದಲ್ಲಿರುವ ಬಿಜೆಪಿ ಸರಕಾರ ಮತ್ತು ತಮಿಳುನಾಡಿನಲ್ಲಿರುವ ಎಐಡಿಎಂಕೆ ಸರಕಾರ ಮಾತುಕತೆ ಮೂಲಕ ಸಮಸ್ಯಗೆ ಸೂಕ್ತ ಪರಿಹಾರ ಕಂಡುಕೊಳ್ಳಲಿ ಎಂದು ಕರುಣಾನಿಧಿ ಹೇಳಿದ್ದಾರೆ.

ಈ ಮಧ್ಯೆ, ತಮಿಳುನಾಡಿನ ಈರೋಡಿನಲ್ಲಿ ಕರ್ನಾಟಕ ನೋಂದಣಿ ವಾಹನಗಳನ್ನು ತಡೆಗಟ್ಟಿ, ಜಪ್ತಿ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ತಮಿಳುನಾಡು ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಜಪ್ತಿಯಾದ ವಾಹನಗಳನ್ನು ಬಿಡುಗಡೆಗೊಳಿಸಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಸುಮಾರು 600 ತಮಿಳು ಕುಟುಂಬವನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಖಾಲಿ ಮಾಡಿಸಿದ್ದಾರೆಂದು ಬಂದ ವರದಿ ಹಿನ್ನಲೆಯಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಈ ಮೇಲಿನ ಹೇಳಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+