ರಾಹುಲ್ ಗಾಂಧಿಗೆ ಪ್ರಧಾನಿ ಸಾಮರ್ಥ್ಯ ಇಲ್ಲ: ತಿವಾರಿ
ಲಖ್ನೋ,ಡಿ.4: ರಾಹುಲ್ ಗಾಂಧಿಗೆ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲವೆಂದು ಎಲ್ಲೆಡೆ ಸಂಶಯಗಳು ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ಹಿರಿಯ ಕಾಂಗ್ರೆಸ್ಸಿಗ ಎನ್ ಡಿ ತಿವಾರಿ ಅವರೂ 'ರಾಹುಲ್ ಗೆ ಆ ಸಾಮರ್ಥ್ಯ ಇಲ್ಲ ಬಿಡಿ' ಎಂದಿದ್ದಾರೆ.
ಈ ಬಗ್ಗೆ ತಮ್ಮದೇ ಆದ ಸಂದೇಹಗಳನ್ನು ವ್ಯಕ್ತಪಡಿಸಿರುವ ತಿವಾರಿ 'ರಾಹುಲ್ ಪ್ರಧಾನಿಯಾಗುವುದು ಭವಿಷ್ಯವೇ ಹೇಳಬೇಕಷ್ಟೇ' ಎಂದು ವ್ಯಂಗ್ಯವಾಡಿದ್ದಾರೆ. ನಾಲ್ಕು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರನ್ನು ಹತ್ತಿರದಿಂದ ಬಲ್ಲ ತಿವಾರಿ ಅದೇ ಗಾಂಧಿ ಕುಡಿಯಾದ ರಾಹುಲ್ ಬಗ್ಗೆ ಅಪಸ್ವರವೆತ್ತಿರುವುದು ಕುತೂಹಕಾರಿಯಾಗಿದೆ.

ಇನ್ನೂ ಕುತೂಹಲದ ಸಂಗತಿಯೆಂದರೆ ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶ ಸರಕಾರದಲ್ಲಿ ಸಕ್ರಿಯವಾಗಿರುವ ತಿವಾರಿ, ಮುಲಾಯಂ ಸಿಂಗ್ ಒಬ್ಬ ರಾಜಕೀಯ ಮುತ್ಸದ್ದಿ, ಸಮರ್ಥ ನಾಯಕ. ಅವರೊಬ್ಬ ಪ್ರಧಾನಿ ಅಭ್ಯರ್ಥಿ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.
ರಾಹುಲ್ ಪ್ರಧಾನಿ ಅಭ್ಯರ್ಥಿಯಾಗುವುದನ್ನು ತಳ್ಳಿಹಾಕಿದ ಮರುಘಳಿಗೆಯಲ್ಲೇ ತಿವಾರಿ ಹೇಳಿದ್ದೇನೆಂದರೆ 'ಅಖಿಲೇಶ್ ಯಾದವ್ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತರಪ್ರದೇಶವನ್ನು ಮುನ್ನಡೆಸಿದರೆ ಅವರಪ್ಪ ಮುಲಾಯಂ ಅವರು ಪ್ರಧಾನಿಯಾಗಿ ಭಾರತವನ್ನು ಮುನ್ನಡೆಸಬಲ್ಲರು' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಬಗ್ಗೆ ಏನು ಹೇಳುತ್ತೀರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ತಿವಾರಿ ಸ್ವಾರಸ್ಯಕರ ಉತ್ತರ ನೀಡಿದ್ದಾರೆ - 'ಯಾವ ಕಾಂಗ್ರೆಸ್ ಬಗ್ಗೆ ಕೇಳುತ್ತಿದ್ದೀರಿ? ನನಗೆ ಗೊತ್ತಿರುವುದೆಲ್ಲ ಒಂದೇ - ಅದುವೇ ಶರದ್ ಪವಾರ್ ನೇತೃತ್ವದ ಎನ್ ಸಿಪಿ!' ಎಂದು ತುಂಬು ಲಹರಿಯಲ್ಲಿ ನಗೆಯಾಡಿದ್ದಾರೆ.
ಅಷ್ಟೇ ಅಲ್ಲ. ತಿವಾರಿಜೀ ಕಾಂಗ್ರೆಸ್ ಕಚೇರಿಗೇನಾದರೂ ಭೇಟಿ ನಿಡುತ್ತೀರಾ? ಎಂದು ಕೇಳಿದ್ದೇ ತಡ ಕೋಪಗೊಂಡ ತಿವಾರಿ 'ಕಾಂಗ್ರೆಸ್ ಕಚೇರಿಯಾ? ಅದೆಲ್ಲಿದೆ ಸ್ವಾಮಿ' ಎಂದುತ್ತರಿಸಿದ್ದಾರೆ. ಹಾಗಾದರೆ, ತಿವಾರಿ ತಮ್ಮಷ್ಟೇ ಪುರಾತನವಾದ ಕಾಂಗ್ರೆಸ್ಸಿನಿಂದ ದೂರವಾಗುತ್ತಿದ್ದಾರಾ? ಎಂಬ ಸಂದೇಹ ಮೂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications