ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡ ಸಹಾರಾ

ಸುಪ್ರೀಂಕೋರ್ಟ್ ಬುಧವಾರ (ಡಿ.5) ನೀಡಿದ ಆದೇಶದಂತೆ ಸಹಾರಾ ಸಂಸ್ಥೆಗೆ ಫೆಬ್ರವರಿ ತನಕ ಸಮಯ ಸಿಕ್ಕಿದೆ. ಎರಡು ತಿಂಗಳಲ್ಲಿ 24 ಸಾವಿರ ಕೋಟಿ ರು ಹಿಂತಿರುಗಿಸಲು ಸಹಾರಾ ಸಂಸ್ಥೆಗೆ ಸಾಧ್ಯವೇ? ಎಂಬ ಪ್ರಶ್ನೆ ಮಾರುಕಟ್ಟೆಯಲ್ಲಿ ಚರ್ಚಿತವಾಗುತ್ತಿದೆ.
ಜೊತೆಗೆ 5,120 ಕೋಟಿ ರು ಗಳಿಗೆ ಡಿಮ್ಯಾಂಡ್ ಡ್ರಾಫ್ಟನ್ನು ಸೆಬಿಗೆ ನೀಡಬೇಕು ಎಂದು ಸಿಜೆ ಅಲ್ತಾಮಸ್ ಕಬೀರ್ ಅವರು ಸೂಚಿಸಿದ್ದಾರೆ. ಉಳಿದ ಬಾಕಿ ಮೊತ್ತವನ್ನು ಎರಡು ಕಂತುಗಳಲ್ಲಿ ಫೆಬ್ರವರಿ ತಿಂಗಳೊಳಗೆ ಕಟ್ಟತಕ್ಕದ್ದು ಎಂದು ನ್ಯಾಯಪೀಠ ಹೇಳಿದೆ.
ನ್ಯಾ. ಎಸ್ ಎಸ್ ನಿಜ್ಜಾರ್ ಹಾಗೂ ಜೆ ಚೆಲ್ಮೆಶ್ವರ್ ಅವರಿದ್ದ ಪೀಠದ ಆದೇಶದಂತೆ ಜನವರಿಯಲ್ಲಿ 10,000 ಕೋಟಿ ರು ಗಳ ಮೊದಲ ಕಂತು ಹಾಗೂ ಉಳಿದ ಕಂತನ್ನು ಫೆಬ್ರವರಿ ಮೊದಲ ವಾರದಲ್ಲಿ ಸಹಾರಾ ಸಂಸ್ಥೆ ಪಾವತಿಸಬೇಕಾಗುತ್ತದೆ.
ಸಹಾರಾ ಪರಿವಾರ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿಯ ಕಾನೂನು ಉಲ್ಲಂಘಿಸಿ ಹೂಡಿಕೆ ಸಂಗ್ರಹಿಸಿದೆ. ತನ್ನ 3 ಕೋಟಿಗೂ ಅಧಿಕ ಹೂಡಿಕೆದಾರರಿಗೆ 24,000 ಕೋಟಿ ರು ಹೂಡಿಕೆ ಹಣವನ್ನು ಶೇ. 15 ಬಡ್ಡಿಯೊಂದಿಗೆ ಹಿಂತಿರುಗಿಸತಕ್ಕದ್ದು ಎಂದು ಸೆ.3 ರನ್ನು ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, 2 ತಿಂಗಳ ಕಾಲಾವಕಾಶ ನೀಡಲಾಗಿದೆ.
ಏನಿದು ಪ್ರಕರಣ?: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ (ಸೆಬಿ) ನಿಯಮಗಳಿಗೆ ವಿರುದ್ಧವಾಗಿ ರೂ. 24,029 ಕೋಟಿ ರೂ. ಸಂಗ್ರಹಿಸಿದ್ದ ಸಹಾರಾ ಗ್ರೂಪ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. 2008 ಮತ್ತು 2011ರ ನಡುವೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗದಿರುವ ತನ್ನ ಎರಡು ಕಂಪನಿಗಳ ಮೂಲಕ ರೂ. 24,029 ಕೋಟಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿದ ಆರೋಪ ಹೊತ್ತಿದೆ.
ಸಹಾರಾ ಹೌಸಿಂಗ್ ಇನ್ವೆಸ್ಟ್ ಮೆಂಟ್ ಕಾರ್ಪೊರೇಶನ್ ಮತ್ತು ಸಹಾರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ ಮೂಲಕ ಠೇವಣಿದಾರರು ತಮಗೆ ಅಗತ್ಯವಿದ್ದಾಗ ಪರಿವರ್ತಿಸಬಹುದಾದ ಒಎಫ್ ಸಿಡಿ ಬಾಂಡ್ ಗಳನ್ನು ವಿತರಿಸುವ ಮೂಲಕ ಈ ನಿಧಿ ಸಂಗ್ರಹಿಸಲಾಗಿತ್ತು. ಠೇವಣಿ ಸಂಗ್ರಹಣೆಯ ಸ್ಪಷ್ಟ ಉದ್ದೇಶವನ್ನು ಕಂಪನಿ ಸ್ಪಷ್ಟವಾಗಿ ತಿಳಿಸಿರಲಿಲ್ಲ.
ಹೂಡಿಕೆದಾರರ ಠೇವಣಿಗೆ ಯಾವುದೇ ಖಾತರಿಯನ್ನು ಈ ಬಾಂಡ್ ಗಳು ನೀಡಿರಲಿಲ್ಲ. ಈ ವಹಿವಾಟಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕಂಪೆನಿ ಮರೆಮಾಚಿತ್ತು.
ಕಂಪನಿಯ ಈ ವಹಿವಾಟು ಸೆಬಿ ನಿಯಮಕ್ಕೆ ವಿರುದ್ಧವಾಗಿದೆ. 50ಕ್ಕಿಂತಲೂ ಹೆಚ್ಚು ಜನರಿಂದ ಠೇವಣಿ ಸಂಗ್ರಹಿಸಬೇಕಾದಲ್ಲಿ ಸೆಬಿ ಅನುಮತಿ ಕೇಳಬೇಕಾಗುತ್ತದೆ. ಠೇವಣಿದಾರರ ಹಣಕ್ಕೆ ಸೂಕ್ತ ಭದ್ರತೆ ಒದಗಿಸುವುದರೊಂದಿಗೆ ಎಲ್ಲ ದಾಖಲೆಗಳನ್ನು ನೀಡಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ ಸಹಾರಾ ಠೇವಣಿ ಸಂಗ್ರಹಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಭದ್ರತಾ ಮೇಲ್ಮನವಿ ಪ್ರಾಧಿಕಾರ, ಠೇವಣಿಗಳನ್ನು ಶೇ. 15ರ ಬಡ್ಡಿ ಸಮೇತ ಮರುಪಾವತಿಸಲು ಕಳೆದ ವರ್ಷ ಆದೇಶಿಸಲಾಗಿತ್ತು. ಆದರೆ ತೀರ್ಪನ್ನು ಪ್ರಶ್ನಿಸಿ ಸಹಾರಾ ಗ್ರೂಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ಇದೇ ತೀರ್ಪನ್ನು ಎತ್ತಿಹಿಡಿದಿತ್ತು.
ಆದರೆ, ಸುಪ್ರೀಂ ತೀರ್ಪಿಗೆ ತಲೆಬಾಗಿರುವ ಸಹಾರಾ ಸಂಸ್ಥೆ ಎಲ್ಲಾ ಹಣ ಹಿಂತಿರುಗಿಸುವ ಭರವಸೆ ನೀಡಿರುವುದು ಅಚ್ಚರಿ ಮೂಡಿಸಿದೆ. ಹೂಡಿಕೆದಾರರು ಬೇನಾಮಿ ಎಂದು ತಿಳಿದು ಬಂದರೆ ಎಲ್ಲಾ ಹಣ ಕೇಂದ್ರ ಸರ್ಕಾರದ ಪಾಲಾಗಲಿದೆ.
ಕಳೆದ 33 ವರ್ಷಗಳಲ್ಲಿ ಒಂದೇ ಒಂದು ಬೇನಾಮಿ ಖಾತೆ, ಹಣಕಾಸು ಅವ್ಯವಹಾರ ಕಾಣದೆ 12 ಕೋಟಿಗೂ ಅಧಿಕ ಹೂಡಿಕೆದಾರರನ್ನು ಸೃಷ್ಟಿಸಿದ ಸಹಾರಾ ಸಂಸ್ಥೆ ಎದೆಗುಂದದಿರುವುದು ಕುತೂಹಲಕಾರಿಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications