ಡಿ.6, ಗುರುವಾರ ಮಂಡ್ಯದಲ್ಲಿ ಕಾವೇರಿ ಬಂದ್

ಮಂಡ್ಯದ ಪ್ರವಾಸಿ ಮಂದಿರದಲ್ಲಿ ಮಾಜಿ ಸಂಸದ ಮತ್ತು ಕಾವೇರಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಜಿ. ಮಾದೇಗೌಡ ಅವರ ನೇತೃತ್ವದಲ್ಲಿ ಸಭೆ ನಡೆದು, ಯಾವುದೇ ಕಾರಣಕ್ಕೂ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ಹನಿ ನೀರು ಕೂಡ ತಮಿಳುನಾಡಿಗೆ ಬಿಡಲು ಅವಕಾಶ ಮಾಡಬಾರದು ಎಂದು ನಿರ್ಧರಿಸಲಾಯಿತು.
ಕರ್ನಾಟಕದ ಹಿತರಕ್ಷಣೆಯನ್ನು ನಿರ್ಲಕ್ಷಿಸಿ ತಮಿಳುನಾಡಿಗೆ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದ್ದನ್ನು ವಿರೋಧಿಸಿ ಡಿ.6 ಮಾತ್ರವಲ್ಲ ಕರ್ನಾಟಕದ ರೈತರಿಗೆ ನ್ಯಾಯ ದೊರೆಯುವವರೆಗೆ ಬಂದ್ ಮುಂದುವರಿಸಲು ಕಾವೇರಿ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.
ಜೈಲಿಗೆ ಹೋಗಲು ಮತ್ತು ಪ್ರಾಣ ತ್ಯಾಗಕ್ಕೂ ಮಂಡ್ಯದ ರೈತರು ಸಿದ್ಧ. ಒಂದು ವೇಳಿ ರೈತರ ಕಾಳಜಿಯನ್ನು ಬದಿಗಿಟ್ಟು ತಮಿಳುನಾಡಿಗೆ ರಾಜ್ಯ ಸರಕಾರ ನೀರು ಬಿಟ್ಟಿದ್ದೇ ಆದಲ್ಲಿ ಕೆಆರ್ಎಸ್ ಡ್ಯಾಂನಲ್ಲಿಯೇ ಉಗ್ರ ಹೋರಾಟ ಮಾಡಲಾಗುವುದು ಎಂದು ಜಿ ಮಾದೇಗೌಡರು ರಾಜ್ಯ ಸರಕಾರಕ್ಕೆ ಚಿತಾವಣೆ ನೀಡಿದ್ದಾರೆ.
ಮಂಡ್ಯದಲ್ಲಿ ಕಾವೇರಿಗಾಗಿ ಹೋರಾಟ ಬುಧವಾರ ಸಂಜೆಯಿಂದಲೇ ಆರಂಭವಾಗಿದೆ. ಗೆಜ್ಜಲಗೆರೆ ಗ್ರಾಮದಲ್ಲಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ವಿರುದ್ಧ ರೈತರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಕರ್ನಾಟಕದ ಸ್ಥಿತಿಯನ್ನು ಸಮರ್ಥವಾಗಿ ಬಿಂಬಿಸಲು ವಿಫಲವಾದ ರಾಜ್ಯ ಸರಕಾರದ ವಿರುದ್ಧವೂ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಸ್ತೆ ತಡೆಯಿಂದಾಗಿ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ.
ಕನ್ನಡ ಸಂಘಟನೆಗಳ ಬೆಂಬಲ : ಸುಪ್ರೀಂಕೋರ್ಟ್ ಆದೇಶದಿಂದಾಗಿ ಮತ್ತೆ ಕಾವೇರಿ ವಿವಾದ ಭುಗಿಲೆದ್ದಿದ್ದು, ಮಂಡ್ಯ ಮತ್ತು ಮೈಸೂರು ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ. ಈ ಹೋರಾಟಕ್ಕೆ ಇತರ ಕನ್ನಡಪರ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications