ಭಾರತ ಭ್ರಷ್ಟಾಚಾರ, ಕೊಳೆಗೇರಿ ನಾಡು: ಶ್ರೀರವಿಶಂಕರ್

ಹೌದು ಭಾರತ ಈಗೀಗ scams and slums ದೇಶವಾಗಿದೆ ಎಂದಿರುವ ರವಿಶಂಕರ ಗುರೂಜಿ, ವೋಟ್ ಬ್ಯಾಂಕ್ ರಾಜಕೀಯದಲ್ಲಿ ತಲ್ಲೀನವಾಗಿರುವ ಪಕ್ಷಗಳು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಮಣೆ ಹಾಕಿ ಅವರನ್ನು ಚುನಾವಣೆಗಳಿಗೆ ನಿಲ್ಲಿಸುತ್ತಿವೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ದೆಹಲಿ ಪೊಲೀಸರು ಹಮ್ಮಿಕೊಂಡಿದ್ದ 'ಧ್ಯಾನದ ಮೂಲಕ ರೌಡಿ ಶೀಟರುಗಳ ಮನಃಪರಿವರ್ತನೆ' ಕಾರ್ಯಕ್ರಮದಲ್ಲಿ ಅಪರಾಧಿಗಳ ಜತೆ ಮುಕ್ತ ಸಂವಾದ ನಡೆಸಿದ ಆಧ್ಯಾತ್ಮಿಕ ಗುರು ಶ್ರೀ ರವಿಶಂಕರ ಗುರೂಜಿ ಅವರು 'ಪ್ರಸ್ತುತ ಸಂಸತ್ತಿನಲ್ಲಿ ಅಪರಾಧ ಹಿನ್ನೆಲೆಯ 220 ಸಂಸದರು ಇದ್ದಾರೆ. ಅಪರಾಧಿತನ ಮತ್ತು ಭ್ರಷ್ಟಾಚಾರವನ್ನು ಪ್ರಸನ್ನತೆ, ಅಂತಃಶುದ್ಧಿ ಮತ್ತು ವಿವೇಕದಿಂದ ಪರಿವರ್ತಿಸಬಹುದು. ಆಧ್ಯಾತ್ಮದಿಂದ ಇದನ್ನು ಸಾಧಿಸಬಹುದು ಎಂದು ಪ್ರಸ್ತುತಪಡಿಸಿದರು.
'ರಾಜಕಾರಣಿಗಳಲ್ಲೂ ಆಧ್ಯಾತ್ಮ ನೆಲೆಯೂರಬೇಕು. ವೈಯಕ್ತಿಕ ಹಿತಾಸಕ್ತಿಗೆ ಮುನ್ನ ರಾಜಕೀಯ ಪಕ್ಷಗಳು ಮತ್ತು ನೇತಾರರು ದೇಶದ ಹಿತಾಸಕ್ತಿಯ ಬಗ್ಗೆ ಮೊದಲು ಚಿಂತಿಸಬೇಕು. ಭಾರತದ ಪ್ರಜಾಪ್ರಭುತ್ವದ ದಿಕ್ಕುದೆಸೆಗಳನ್ನು ಬದಲಿಸಲು ರಾಜಕಾರಣಿಗಳು ತ್ಯಾಗ ಮನೋಭಾವ ಬೆಳೆಸಿಕೊಳ್ಳಬೇಕು' ಎಂದು ಅವರು ಕರೆ ನೀಡಿದರು.
ಆಧ್ಯಾತ್ಮ ಮೂಲಕ ರೌಡಿ ಶೀಟರುಗಳಲ್ಲಿ ಮನಃಪರಿವರ್ತನೆ ತರಲು ತಾವು ಶ್ರಮಿಸುತ್ತಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು. ದೆಹಲಿಯ ಪೂರ್ವ ಭಾಗದಲ್ಲಿ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 750 ಅಪರಾಧಿಗಳು ಆರ್ಟ್ ಆಫ್ ಲಿವಿಂಗ್ ನಡೆಸಿಕೊಟ್ಟ ಆಧ್ಯಾತ್ಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications