ಸಿಎಂ ಆದ್ರೆ, 48 ಗಂಟೆಗಳಲ್ಲಿ ನೇತ್ರಾವತಿ ಹರಿಸುತ್ತೇನೆ

ಕುಡಿಯುವ ನೀರಿಗೂ ತತ್ವಾರವಾಗಿರುವ ಬಯಲುಸೀಮೆ ಪ್ರದೇಶಗಳಿಗೆ ಹೇಮಾವತಿ, ನೇತ್ರಾವತಿ ನೀರು ಹರಿಸುವ ಬಗ್ಗೆ ಅನೇಕಾನೇಕ ವರ್ಷಗಳಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ.
ಈ ನಡುವೆ ನಾನೇನಾದ್ರೂ ಮತ್ತೊಮ್ಮೆ ಸಿಎಂ ಆದ್ರೆ ನಿಮ್ಮೂರಿಗೆ ನೇತ್ರಾವತಿ ನೀರು ಸಿಗುವುದು ಗ್ಯಾರಂಟಿ ಎಂದು ಕುಮಾರಸ್ವಾಮಿ ಅವರು ಮಟ ಮಟ ಮಧ್ಯಾಹ್ನ ಭರವಸೆ ನೀಡಿದ್ದಾರೆ.
ನೇತ್ರಾವತಿ ತಿರುವು ಯೋಜನೆಗೆ ಈಗಾಗಲೇ ಅನೇಕ ಗಣ್ಯರಿಂದ, ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿ ಸ್ಥಗಿತಗೊಂಡಿದೆ.
ಆದರೆ, ಕುಮಾರಸ್ವಾಮಿ ಅವರು ನೇತ್ರಾವತಿ ನದಿ ನೀರನ್ನು ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದೊಡ್ಡಬಳ್ಳಾಪುರ, ತುಮಕೂರು ಹಾಗೂ ರಾಮನಗರದ ತನಕ ಹರಿಸುವ ಯೋಜನೆ ಜೆಡಿಎಸ್ ಬಳಿ ಇದೆ ಎಂದು ಹೇಳಿಕೊಂಡಿದ್ದಾರೆ.
ಅತ್ತ ಬೆಳಗಾವಿಯಲ್ಲಿ ನಡೆದಿರುವ ಚಳಿಗಾಲ ಅಧಿವೇಶನದಲ್ಲಿ ಜೆಡಿಎಸ್ ಶಾಸಕರು ಸದನದಲ್ಲಿ ಬಾವಿಗಿಳಿದು ಕಾವೇರಿಗಾಗಿ ಪ್ರತಿಭಟನೆ ನಡೆಸಿದ್ದಾರೆ.
ನೇತ್ರಾವತಿ ಯೋಜನೆ ಸ್ಥಿತಿ ಗತಿ: ನೇತ್ರಾವತಿ ತಿರುವು ಯೋಜನೆಗೆ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಅಸ್ತು ಎಂದಿದ್ದರು.
ಆದರೆ, ಪಶ್ಚಿಮ ಘಟ್ಟ ಚಿಕ್ಕಮಗಳೂರಿನ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಧರ್ಮಸ್ಥಳದ ಮೂಲಕ ಹರಿದು ಮಂಗಳೂರಿನ ಕಡಲು ಸೇರುವ ನೇತ್ರಾವತಿ ನದಿಯನ್ನು ತಿರುಗಿಸುವ ಯಾವುದೇ ಪ್ರಸ್ತಾಪ ಸರ್ಕಾರ ಮುಂದೆ ಇಲ್ಲ.
ಪಶ್ಚಿಮ ಘಟ್ಟವನ್ನು ಕೊರೆದು ಕಾಲುವೆ ಮಾಡಿ ನೀರನ್ನು ಘಟ್ಟ ಹತ್ತಿಸುವುದು ಸಮಂಜಸವಲ್ಲ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯಿಸಿದ್ದರು.
ಮಳೆಗಾಲದಲ್ಲಿ ಈ ನದಿಯ ನೀರನ್ನು ಸಂಗ್ರಹಿಸುವುದು ಅಗತ್ಯ. ಅದಕ್ಕಾಗಿ ಸಣ್ಣ ಸಣ್ಣ ಅಣೆಕಟ್ಟು ಗಳನ್ನು ಕಟ್ಟಿ ಮಳೆ ನೀರನ್ನು ಸಂಗ್ರಹಿಸಿ ಅದನ್ನು ಬೇಸಿಗೆಯಲ್ಲಿ ಉಪಯೋಗಿಸಲು ವ್ಯವಸ್ಥೆ ಮಾಡಬೇಕು. ಇದಕ್ಕೆಲ್ಲ ಪರಿಹಾರ ಅಣೆಕಟ್ಟು ಮಾತ್ರ. ದೊಡ್ಡ ಅಣೆಕಟ್ಟುಗಳಿಗಿಂತ ಕಿರು-ಕಿಂಡಿ ಅಣೆಕಟ್ಟುಗಳೇ ಹೆಚ್ಚು ಸೂಕ್ತವಾಗಬಲ್ಲುದು ಮತ್ತು ಇವು ಕಡಿಮೆ ಖರ್ಚುದಾಯಕವೂ ಹೌದು
ನೇತ್ರಾವತಿ ತಿರುವು ಯೋಜನೆಯಿಂದ ಜಲಕ್ಷಾಮ ಎದುರಿಸಬೇಕಾಗುತ್ತದೆ. ಅಪಾರ ಪ್ರಮಾಣದಲ್ಲಿ ಜಲಚರಗಳು ನಾಶವಾಗುತ್ತದೆ, ಜನ ಜೀವನ ಅಸ್ತವ್ಯಸ್ತಗೊಳ್ಳುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಲಹೆ ನೀಡಿದ್ದರು.
ಆದರೆ, ನದಿ ತಿರುವು ಯೋಜನೆಗೆ ಮತ್ತೊಂದು ಹೆಸರಿಟ್ಟು 250 ಕೋಟಿ ರು ವೆಚ್ಚದಲ್ಲಿ ಸರ್ಕಾರ ಯೋಜನೆ ಸಾಕಾರಗೊಳಿಸಲು ಮುಂದಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications