ಮಾದೇಗೌಡರ ಬಂಧನ, ಶನಿವಾರ ಮಂಡ್ಯ ಬಂದ್

ಕಾವೇರಿ ನೀರು ಬಿಟ್ಟಿದ್ದಕ್ಕೆ ನಮ್ಮ ಬೆಳೆಗಳಿಗೆ ನೀರು ಇಲ್ಲವಾಗಿದೆ ಎಂದು ಕಾವೇರಿ ಹಿರತರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿತ್ತು. ಆ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮಾದೇಗೌಡರೂ ಸೇರಿದಂತೆ ಸುಮಾರು 40 ರೈತರನ್ನು ಬಂಧಿಸಿದ್ದಾರೆ.
ಶನಿವಾರ ಮಂಡ್ಯ ಬಂದ್ ಗೆ ಕರೆ: ಈ ಸಂದರ್ಭದಲ್ಲಿ ಮಾತನಾಡಿದ ಮಾದೇಗೌಡರು, ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ನಾಳೆ ಶನಿವಾರ ಮಂಡ್ಯ ಬಂದ್ ಆಚರಿಸಲು ಕರೆ ನೀಡಿದ್ದಾರೆ. ಜತೆಗೆ KRSಗೆ ಮುತ್ತಿಗೆ ಹಾಕುವ ಕಾರ್ಯಕ್ರಮವೂ ಇದೆ.












Click it and Unblock the Notifications