ನಾನು ಕರ್ನಾಟಕದ ಕರುಣಾನಿಧಿ : ಯಡಿಯೂರಪ್ಪ

ಡೆಕ್ಕನ್ ಕ್ರೋನಿಕಲ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ನಮ್ಮ ರಾಜ್ಯದಲ್ಲಿ ಹಲವು ನಾಯಕರು ಪ್ರಾದೇಶಿಕ ಪಕ್ಷ ಕಟ್ಟಿದರು. ಬಂಗಾರಪ್ಪ, ರಾಮಕೃಷ್ಣ ಹೆಗಡೆ, ಅರಸು ಪ್ರಾದೇಶಿಕ ಕಟ್ಟಿ ವಿಫಲರಾಗಿರಬಹುದು. ಆಗಿನ ಪರಿಸ್ಥಿತಿಯೇ ಬೇರೆ ಈಗಿನ ಪರಿಸ್ಥಿತಿಯೇ ಬೇರೆ ಎಂದು ಯಡಿಯೂರಪ್ಪ ಭರವಸೆ ಮಾತನ್ನು ಆಡಿದ್ದಾರೆ
ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಬಾರದೆಂದು ರಾಜ್ಯಾಧ್ಯಕ್ಷ ಸ್ಥಾನ ಕೇಳಿದೆ. ನನಗೆ ಮುಖ್ಯಮಂತ್ರಿ ಪದವಿ ಬೇಡ, ಶಾಸಕ ಸ್ಥಾನಕ್ಕೂ ಸ್ಪರ್ಧಿಸುವುದಿಲ್ಲ ಎಂದು ಕೇಂದ್ರದ ನಾಯಕರಲ್ಲಿ ಮನವಿ ಮಾಡಿದೆ. ಆದರೆ ನನ್ನ ಮಾತಿಗೆ ಅವರು ಬೆಲೆ ಕೊಡಲಿಲ್ಲ ಎಂದು ಬಿಎಸ್ವೈ ಬೇಸರ ವ್ಯಕ್ತ ಪಡಿಸಿದ್ದಾರೆ
ಕೇಂದ್ರದಲ್ಲಿ ಅರುಣ್ ಜೇಟ್ಲೆ ಒಬ್ಬರೇ ನನ್ನ ಮೇಲೆ ವಿಶ್ವಾಸವಿಟ್ಟಿದ್ದರು. ಪಕ್ಷ ಬಿಡದಂತೆ ನನ್ನಲ್ಲಿ ಕೇಳಿಕೊಂಡರು. ಆದರೆ ಪಕ್ಷದ ನಾಯಕರು ನೀಡಿದ ಪೊಳ್ಳು ಭರವಸೆಯಿಂದ ಬೇಸತ್ತು ಜೇಟ್ಲೆ ಮಾತಿಗೆ ಬೆಲೆ ಕೊಡುವ ಪರಿಸ್ಥಿತಿಯಲ್ಲಿ ನಾನಿರಲಿಲ್ಲ ಎಂದು ಯಡಿಯೂರಪ್ಪ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಂದು ವೇಳೆ ಈ ದೇಶದ ಪ್ರಧಾನಿಯಾದರೂ ನಾನು ಮತ್ತೆ ಬಿಜೆಪಿಗೆ ವಾಪಾಸಾಗುವುದಿಲ್ಲ. ನನ್ನ ನಿರ್ಧಾರ ಅಚಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಎಲ್ಲಾ 224 ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡುವ ಅವಶ್ಯಕತೆ ನನಗಿಲ್ಲ.
ದೇವರ ಇಚ್ಛೆ, ಮತದಾರರ ಆಶೀರ್ವಾದ ನನ್ನ ಮೇಲಿದ್ದರೆ ನಾನು ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications