ರೈತರ ಸಮಾಧಿ ಮೇಲೆ ಕೆಜೆಪಿ ಸ್ಥಾಪನೆ

ಯಡಿಯೂರಪ್ಪ ಅವರು ನಾನು ರೈತನ ಮಗ, ಯಾವಾಗಲೂ ರೈತರ ಪರ ಚಿಂತಿಸುತ್ತೇನೆ ಎನ್ನುತ್ತಾರೆ ಆದರೆ, ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಗೋಲಿಬಾರ್ ಇನ್ನೂ ಜನರ ಮನಸ್ಸಿನಿಂದ ಅಳಿಸಿಲ್ಲ.
ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ಯಡಿಯೂರಪ್ಪ ಗೋಲಿಬಾರ್ ನಲ್ಲಿ ಸತ್ತವರ ಸಮಾಧಿಯ ಮೇಲೆ ಪಕ್ಷ ಕಟ್ಟುತ್ತಿದ್ದಾರೆ. ಇವರಿಗೆ ಖಂಡಿತ ಒಳ್ಳೆಯದಾಗುವುದಿಲ್ಲ ಎಂದು ಶ್ರೀರಾಮುಲು ಬೇಸರದಿಂದ ಹೇಳಿದರು.
ಬಿಜೆಪಿ ನಿರ್ನಾಮ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕಿದರು.
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ನಡೆದ ಅಭಿಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಬಿ.ಎಸ್.ಯಡಿಯೂರಪ್ಪನವರು ಎಷ್ಟು ಕಾರಣರೋ, ನನ್ನ ಸಹೋದರರು ಹಾಗೂ ಮಾಜಿ ಸಚಿವ ಶ್ರೀರಾಮುಲು ಅಷ್ಟೇ ಕಾರಣರಾಗಿದ್ದಾರೆ.
ಅಧಿಕಾರಕ್ಕೆ ಬರಲು ನಮ್ಮನ್ನು ಚೆನ್ನಾಗಿ ಬಳಸಿಕೊಂಡ ಬಿಜೆಪಿಯವರು ಅನಂತರ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ, ಕುತಂತ್ರದಿಂದ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಮೇಲಿನ ಆರೋಪಗಳನ್ನು ಸಮರ್ಥಿಸಿಕೊಂಡ ಸೋಮಶೇಖರ ರೆಡ್ಡಿ, 'ಜನಾರ್ದನ ರೆಡ್ಡಿಯವರು ಯಾರೂ ಮಾಡದ ತಪ್ಪನ್ನು ಮಾಡಿಲ್ಲ. ತಮ್ಮ ಮೇಲೆ ದುರುದ್ದೇಶದಿಂದ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಎಲ್ಲ ಪಕ್ಷಗಳ ಪಾಲೂ ಸಹ ಇದೆ' ಎಂದು ಆರೋಪಿಸಿದರು.
ಜನಾರ್ದನ ರೆಡ್ಡಿ ಅವರನ್ನು ಬೇಕೆಂತಲೇ ಜೈಲಿನಿಂದ ಹೊರ ಬರದಂತೆ ನೋಡಿಕೊಳ್ಳಲಾಗಿದೆ. ಅವರು ಜೈಲಿನಲ್ಲಿದ್ದರೂ ಮುಂಬರುವ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇದು ನಮ್ಮ ಅಪೇಕ್ಷೆಯಲ್ಲ. ಜನರ ಆಗ್ರಹ ಎಂದು ಸೋಮಶೇಖರ ರೆಡ್ಡಿ ಹೇಳಿದರು.
ನಾನು ಕೆಎಂಎಫ್ ನಲ್ಲಿ ಏನಾದರೂ ಅವ್ಯವಹಾರ ಮಾಡಿದ್ದು ಸಾಬೀತಾದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ಬಿಜೆ ಪುಟ್ಟಸ್ವಾಮಿ ಅವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ನಾನು ಇದಕ್ಕೆಲ್ಲ ಜಗ್ಗುವುದಿಲ್ಲ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications