KJP ಪ್ರಾದೇಶಿಕ ಪಕ್ಷದ ತುರ್ತು ಅಗತ್ಯವಿದೆ: ಸಂಕೇಶ್ವರ್

ನಿನ್ನೆ ಭಾನುವಾರ ಅತ್ತ ಯಡಿಯೂರಪ್ಪ ಹಾವೇರಿಯಲ್ಲಿ ವಿಜೃಂಭಿಸುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಸಂಕೇಶ್ವರ ಅವರು ತಾವು KJP ಸೇರುತ್ತಿರುವುದನ್ನು ದೃಢಪಡಿಸಿದರು. ಮತ್ತು ಅದಕ್ಕೆ ಸಕಾರಣವನ್ನೂ ನೀಡಿದ್ದಾರೆ.
ಕರ್ನಾಟಕಕ್ಕೊಂದು ಪ್ರಾದೇಶಿಕ ಪಕ್ಷದ ತುರ್ತು ಅಗತ್ಯವಿದೆ. ಹಾಗಾಗಿ KJP ಸೇರಲು ನಿರ್ಧರಿಸಿರುವುದಾಗಿ ಹೇಳಿದರು. ಅಂದಹಾಗೆ ಈ ಹಿಂದೆ ಕನ್ನಡ ನಾಡು ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದರು.
'ರಾಜಕಾರಣ ನನ್ನ ವೃತ್ತಿಯಲ್ಲ. ಆದರೆ ಶುದ್ಧ ಹಸ್ತವಿರುವ ಕಾರಣಕ್ಕಾಗಿ ಜನ ನನ್ನನ್ನು ಮೂರು ಬಾರಿ ಆಶೀರ್ವದಿಸಿದರು. ಬಿಜೆಪಿಯಲ್ಲೂ ನಾನು ಹಣಕ್ಕೆ ಆಸೆಪಟ್ಟವನಲ್ಲ. ಕೆಜೆಪಿಯಲ್ಲೂ ಆ ಆಸೆ ಇಲ್ಲ' ಎಂದು ಅವರು ಹೇಳಿದರು.
ಇದೇ ವೇಳೆ, 'ಕೆಜೆಪಿಯಲ್ಲಿ ಇರುವವರೆಲ್ಲ ಶುದ್ಧ ಹಸ್ತರು, ಸಮಾಜ ಸುಧಾರಕರು ಎಂದೂ ಹೇಳುವುದಿಲ್ಲ. ಾದರೆ ರಾಜ್ಯಕ್ಕೊಂದು ಬಲವಾದ ಪ್ರದೇಶಿಕ ಪಕ್ಷದ ಅಗತ್ಯವನ್ನು ನಾನು ಮನಗಂಡಿದ್ದೇನೆ' ಎಂದು ವ್ಯಾಖ್ಯಾನಿಸಿದರು.
ಪ್ರಾದೇಶಿಕ ಪಕ್ಷದ ತುರ್ತು ಅಗತ್ಯ ಏಕೆ?: ನೈರುತ್ಯ ವಲಯವನ್ನು ಹುಬ್ಬಳ್ಳಿಗೆ ತರಲು ಸಾಕಷ್ಟು ಹೋರಾಟ ಮಾಡಿದೆ. ಆಗ ಕೇಂದ್ರದಲ್ಲಿ ನಮ್ಮದೇ ಎನ್ ಡಿಎ ಸರಕಾರವಿದ್ದರೂ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಅದನ್ನು ಆಂಧ್ರಕ್ಕೆ ಧಾರೆಯೆರೆದರು. ರಾಜ್ಯದ ಸ್ವಾಭಿಮಾನ ಉಳಿಸಿಕೊಳ್ಳುವುದಕ್ಕಾಗಿ ಪ್ರಾದೇಶಿಕ ಪಕ್ಷ ಅಗತ್ಯ ಎಂಬುದನ್ನು ಆಗಲೇ ಮನಗಂಡಿದ್ದೆ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಹಿತ ರಕ್ಷಿಸಲು ಸಾಧ್ಯವಿದೆ ಎಂದು ಸಂಕೇಶ್ವರ ಪ್ರತಿಪಾದಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications