ನಿರೀಕ್ಷೆಯಂತೆ ಮೇಲ್ಮನೆ/ಬಿಜೆಪಿಗೆ ಸಂಕೇಶ್ವರ್ ರಾಜೀನಾಮೆ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡಿರುವ ವಿಜಯ ಸಂಕೇಶ್ವರ ಅವರು ಇದೀಗ ತಾನೆ ತಮ್ಮ ರಾಜೀನಾಮೆ ಪತ್ರವನ್ನು ಪರಿಷತ್ತಿನ ಸಭಾಪತಿಗೆ ತಲುಪಿಸಿದ್ದು, ಬಿಜೆಪಿ ಜತೆಗಿನ ಸುದೀರ್ಘ ಸಂಬಂಧವನ್ನು ಕಡಿದುಕೊಂಡಿದ್ದಾರೆ.
ಇದೇ ವೇಳೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿರುವ ಸಂಕೇಶ್ವರ, BJPಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. RSS ಹಿಡಿತದಲ್ಲಿ BJP ಸಿಲುಕಿದೆ. ಬಿಜೆಪಿ ಈಗ ಶಿಸ್ತಿನ ಪಕ್ಷವಾಗಿ ಉಳಿದಿಲ್ಲ. ಆದ್ದರಿಂದ ಪಕ್ಷದೊಂದಿಗೆ ಸಂಬಂಧ ಕಡಿದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
KJP ಜತೆ ಗುರುತಿಸಿಕೊಂಡಿರುವ ಮೇಲ್ಮನೆ ಸದಸ್ಯರ ಬಗ್ಗೆ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಮಂತ್ರಾಲೋಚಿಸಲು ಮಾಜಿ ಸಿಎಂ ಸದಾನಂದ ಗೌಡ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಭೆ ಸೇರಿರುವ ಸಮಯದಲ್ಲೇ ಇತ್ತ ಸಂಕೇಶ್ವರ ಅವರು ಸಭಾಪತಿ ಡಿಎಚ್ ಶಂಕರಮೂರ್ತಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಸಂಕೇಶ್ವರ ರಾಜೀನಾಮೆಯನ್ನು ಸಭಾಪತಿ ಅಂಗೀಕರಿಸಿದ್ದಾರೆ.












Click it and Unblock the Notifications