ಯಡಿಯೂರಪ್ಪದು 80000 ಕೋಟಿ ಭೂಹಗರಣ: ಮೊಯ್ಲಿ

'ಹೈಕಮಾಂಡ್ ವಿಚಾರ ಏನೋ ಎಂತೋ? ಆದರೆ ತಮ್ಮ ತಿಳಿವಳಿಕೆಯ ಇತಿಮಿತಿಯಲ್ಲಿ' ಹೀಗೆ ಹೇಳಿರುವ ಕೇಂದ್ರ ಸಚಿವ ಮೊಯ್ಲಿ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಕಾಲದಲ್ಲಿ 80 ಸಾವಿರ ಕೋಟಿ ರೂ. ಭೂಹಗರಣಗಳನ್ನು ನಡೆಸಿದ್ದಾರೆ ಎಂದು ಗಂಭಿರವಾಗಿ ಆರೋಪಿಸಿದ್ದಾರೆ.
ಮೊನ್ನೆ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೊಯ್ಲಿ ಅವರು ಈ ಆರೋಪ ಮಾಡಿದ್ದಾರೆ.
ಆದರೆ ಈ ಭೂಹಗರಣಗಳ ಬೆನ್ನುಹತ್ತಿರುವ ಸಿಬಿಐನಿಂದ ಯಡಿಯೂರಪ್ಪ ಅವರನ್ನು ಪಾರುಮಾಡಲು ಹೈಕಮಾಂಡ್ ಮಟ್ಟದಲ್ಲಿ ಸೋನಿಯಾ ಗಾಂಧಿ 'ಕೈಜೋಡಿಸಿದ್ದಾರೆ' ಎಂಬ ವಿಚಾರ ಕರ್ನಾಟಕದಾದ್ಯಂತ ಸರಿದಾಡುತ್ತಿರುವಾಗ ಪಕ್ಷದ ಹಿರಿಯ ನಾಯಕರೊಬ್ಬರು ಈ ಆಪಾದನೆ ಮಾಡಿರುವುದು ಸೋಜಿಗವಾಗಿದೆ. ಮತ್ತೂ ಗಮನಾರ್ಹ ಸಂಗತಿಯೆಂದರೆ ಮೊದಲ ಬಾರಿಗೆ ಯಡಿಯೂರಪ್ಪ ಹೆಗಲಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಆಪಾದನೆಯನ್ನು ಹೊರಿಸಲಾಗಿದೆ.
ಭೂ ಹಗರಣದಲ್ಲಿನ ಪಾಲನ್ನು ಹಂಚಿಕೊಳ್ಳುವ ವಿಷಯದಲ್ಲಿ ಬಿಜೆಪಿ ನಾಯಕರೊಂದಿಗೆ ಜಗಳವಾಡಿಕೊಂಡಿರುವ ಯಡಿಯೂರಪ್ಪ, ಇದೀಗ ಬಿಜೆಪಿಯಿಂದ ದೂರವಾಗಿ ಕೆಜೆಪಿ ಸ್ಥಾಪಿಸುತ್ತಿದ್ದಾರೆಯೆ ಹೊರತು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದಲ್ಲ ಎಂದೂ ಅವರು ವ್ಯಂಗ್ಯವಾಡಿದ್ದಾರೆ.
ಸೋನಿಯಾ ಗಾಂಧಿ ಎಂದಿಗೂ ಅಧಿಕಾರದ ಬೆನ್ನತ್ತಿ ಹೋಗಿಲ್ಲ. ಎರಡು ಬಾರಿ ಪ್ರಧಾನಿಯಾಗುವ ಅವಕಾಶ ಅವರನ್ನು ಹುಡುಕಿಕೊಂಡು ಬಂದರೂ, ಅದನ್ನು ನಿರಾಕರಿಸಿ ಇತರರಿಗೆ ಅವಕಾಶ ಕಲ್ಪಿಸಿಕೊಟ್ಟವರು. ಅವರ ಆಶಯದಂತೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಲಿದೆ ಎಂದೂ ಮೊಯ್ಲಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications