ದೇವೇಗೌಡ್ರು ಬ್ರಾಹ್ಮಣ ದ್ವೇಷಿಯಲ್ಲ, ಹೆಗ್ಡೆ ಫ್ರೆಂಡ್

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಗುಂಡೂರಾವ್ ಹಾಗೂ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ಸ್ಮರಣಾರ್ಥ ಭಾನುವಾರ ಸಂಜೆ ಆಚಾರ್ಯತ್ರಯ ಸೇವಾ ಪ್ರತಿಷ್ಠಾನ ಆಯೋಜಿಸಿದ ಕಾರ್ಯಕ್ರಮದಲ್ಲಿ ವೈಎಸ್ ವಿ ದತ್ತಾ ಪಾಲ್ಗೊಂಡಿದ್ದರು.
ರಾಮಕೃಷ್ಣ ಹೆಗಡೆ ಹಾಗೂ ದೇವೇಗೌಡ ನಡುವೆ ವೈಮನಸ್ಯ ಉಂಟಾಗಿದ್ದು ಕರ್ನಾಟಕ ರಾಜಕೀಯದಲ್ಲಿ ಗುರುತರ ಬದಲಾವಣೆಗೆ ಕಾರಣವಾಯಿತು ಎಂಬ ಅಭಿಪ್ರಾಯ ಎಲ್ಲೆಡೆ ಇದೆ. ಆದರೆ, ರಾಮಕೃಷ್ಣ ಹೆಗಡೆ ಅವರ ಜೊತೆ ದೇವೇಗೌಡರಿಗೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದವೇ ಹೊರತೂ ವೈಯಕ್ತಿಕ ದ್ವೇಷ ಇರಲಿಲ್ಲ ಎಂದು ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಹಾಗೂ ದೇವೇಗೌಡ ಅವರ ಬಾಂಧವ್ಯದ ಬಗ್ಗೆ ದೇವೇಗೌಡರು ನೀಡಿದ್ದ ಪತ್ರವನ್ನು ವೈಎಸ್ ವಿ ದತ್ತಾ ಅವರು ಈ ಕಾರ್ಯಕ್ರಮದಲ್ಲಿ ಓದಿದರು, ಪತ್ರದ ಸಾರಾಂಶ ಇಂತಿದೆ:
ರಾಮಕೃಷ್ಣ ಹೆಗಡೆ ಮತ್ತು ನನ್ನ ನಡುವೆ ರಾಜಕೀಯ ಭಿನಾಭಿಪ್ರಾಯಗಳಿತ್ತು ನಿಜ. ಅದರ ಬಗ್ಗೆ ಮುಕ್ತವಾಗಿ ಚರ್ಚಿಸಲು ನಾನು ಸದಾ ಸಿದ್ಧ. ರಾಜಕೀಯ ವಿಷಯವಾಗಿ ನಾನು ಹಾಗೂ ಹೆಗಡೆ ಮುಕ್ತವಾಗಿ ಚರ್ಚಿಸುತ್ತಿದ್ದೆವು.
ನಾನು ಎಂದಿಗೂ ರಾಮಕೃಷ್ಣ ಹೆಗಡೆ ಅವರನ್ನು ವೈಯಕ್ತಿಕವಾಗಿ ದ್ವೇಷಿಸಿಲ್ಲ. ದ್ವೇಷ ಮಾಡುವ ಆಲೋಚನೆಯೂ ಬರಲಿಲ್ಲ. ಆದರೆ, ನಮ್ಮಿಬ್ಬರ ನಡುವಿನ ಅಂತರ ಹೆಚ್ಚಲು ಅನೇಕರು ಕಾರಣರಾದರು.
ನಮ್ಮಿಬ್ಬರ ನಡುವಿನ ಬಾಂಧವ್ಯದ ಬಗ್ಗೆ ಬಹಳಷ್ಟು ಜನರು ತಪ್ಪಾಗಿ ಭಾವಿಸಿದರು. ಈಗಲೂ ಅನೇಕರಿಗೆ ಇದೇ ಭಾವನೆ ಇದೆ. ನಾನು ಬ್ರಾಹ್ಮಣ ಸಮುದಾಯದ ಬಗ್ಗೆ ದ್ವೇಷ ಇಟ್ಟುಕೊಂಡಿಲ್ಲ. ಬ್ರಾಹ್ಮಣ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಬಿಜೆಪಿ ಶಾಸಕ ಅಶ್ವಥನಾರಾಯಣ: ಪಿವಿ ನರಸಿಂಹ ರಾವ್ ಅವರ ಜ್ಞಾನ ಶಕ್ತಿಗೆ ತಲೆಬಾಗಬೇಕಿದೆ.ಅವರ ದೂರದೃಷ್ಟಿಯ ಪರಿಣಾಮ ಇಂದು ದೇಶ ಆರ್ಥಿಕ ಸಬಲೀಕರಣ ಕಂಡಿದೆ. ಜಾಗತೀಕರಣ ಸಾಧ್ಯವಾಗಿದೆ ಎಂದರು.
ಬ್ರಾಹ್ಮಣ ಸಮುದಾಯದ ನಾಯಕರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್, ಜೆಡಿಎಸ್ ನಗರಾಧ್ಯಕ್ಷ ಎಂಎಸ್ ನಾರಾಯಣ ರಾವ್, ಬಿಜೆಪಿ ಶಾಸಕ ಸಿಎನ್ ಅಶ್ವಥ್ ನಾರಾಯಣ, ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಪಾಲ್ಗೊಂಡಿದ್ದು ವಿಶೇಷ.
ಈ ಕಾರ್ಯಕ್ರಮದಲ್ಲಿ ಬಹುಭಾಷಾ ವಿದ್ವಾಂಸ ಅರೈಯರ್ ಶ್ರೀರಾಮ ಶರ್ಮ ಅವರನ್ನು ಸನ್ಮಾನಿಸಲಾಯಿತು. ಬಿಎಸ್ ಪದ್ಮನಾಭಚಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications