ಮಡಿಕೇರಿ ಜನತೆಯನ್ನು ಕಂಗೆಡಿಸಿರುವ ಶೀತಗಾಳಿ

ಇದ್ದಕ್ಕಿದ್ದಂತೆಯೇ ನಗರದಲ್ಲಿ ವಿಪರೀತ ಎನ್ನುವಂತಹ ಗಾಳಿಯೊಂದಿಗೆ ಮೈಕೊರೆಯುವ ಚಳಿ ಕಂಡುಬಂದಿದ್ದು, ಶೀತಹವೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಜನರು ಮನೆಯ ಬಾಗಿಲು ಹಾಕಿಕೊಂಡು ಬೆಚ್ಚಗಿರಲು ಪ್ರಯತ್ನಿಸುತ್ತಿದ್ದಾರೆ. ಬೆಳಿಗ್ಗೆ ಮತ್ತು ಸಂಜೆ ಜನರು ಮನೆಯಿಂದ ಹೊರ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ.
ಭಾರೀ ರಭಸದಿಂದ ಬೀಸುತ್ತಿರುವ ಬಿರುಗಾಳಿಯಿಂದಾಗಿ ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ಕಚೇರಿಯ ಮೇಲ್ಭಾಗಕ್ಕೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರಿಗೆ ತಾಗಿದ್ದರಿಂದ ಗಾಯಗಳಾದ ಘಟನೆಯೂ ನಡೆದಿದೆ.
ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಮರಗಳ ಒಣಗಿದ ರೆಂಬೆಗಳು ಗಾಳಿಯ ರಭಸಕ್ಕೆ ನೆಲಕ್ಕುರುಳುತ್ತಿರುವುದರಿಂದ ಕಚೇರಿ ಕೆಲಸಕ್ಕೆ ಆಗಮಿಸುತ್ತಿದ್ದ ಸಾರ್ವಜನಿಕರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವಂತಹ ಸನ್ನಿವೇಶವೂ ನಿರ್ಮಾಣವಾಗಿದೆ. ಪ್ರತಿಭಟನೆಗೆ ಬಂದಿದ್ದ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟದ ಕಾರ್ಯಕರ್ತರು ಕೂಡ ಹೆದರಿಕೆಯಿಂದಲೇ ಮುಷ್ಕರದಲ್ಲಿ ಪಾಲ್ಗೊಂಡಿದ್ದು ಕಂಡುಬಂತು.
ಮಡಿಕೇರಿ ನಗರ ಸಭೆ ಬಳಿಯ ಉದ್ಯಾನವನದಲ್ಲಿ ಅಳವಡಿಸಲಾಗಿರುವ ಪವನ ವಿದ್ಯುತ್ ಉತ್ಪಾದನಾ ಯಂತ್ರದ ರೆಕ್ಕೆಗಳು ಬಿರುಗಾಳಿಗೆ ಸಿಲುಕಿ, ಭಾರೀ ಸದ್ದಿನೊಂದಿಗೆ ಸುತ್ತುತ್ತಿರುವುದರಿಂದಾಗಿ ಆ ಭಾಗದ ನಾಗರಿಕರ ನಿದ್ದೆಗೆ ತೊಂದರೆಯಾಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.
ನಗರದಲ್ಲಿ ಕಳೆದ ಎರಡು ದಿನಗಳಿಂದ ಕಂಡು ಬರುತ್ತಿರುವ ಅಹಿತಕರ ವಾತಾವರಣವನ್ನು ಕಂಡ ಕೆಲವರು ಇದು ಪ್ರಳಯದ ಮುನ್ಸೂಚನೆ ಎಂಬ ಗಾಳಿ ಸುದ್ದಿಯನ್ನು ಹರಡುತ್ತಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications