ದತ್ತ ಮಾಲೆ ಧರಿಸಿದ ಶಿಕ್ಷಣ ಸಚಿವ ಸಿಟಿ ರವಿ

ಸಂಘ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ ದತ್ತ ಜಯಂತಿ ಅಂಗವಾಗಿ ಭಜರಂಗ ದಳದ ರಾಜ್ಯ ಸಂಚಾಲಕ ಸೂರ್ಯನಾರಾಯಣ ಸೇರಿದಂತೆ ಹಲವರು ಇದೇ ಸಂದರ್ಭದಲ್ಲಿ ದತ್ತ ಮಾಲೆ ಧರಿಸಿದರು.
ಇಲ್ಲಿನ ರತ್ನಗಿರಿ ರಸ್ತೆಯ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ಎಂ ಎಸ್ ನಂಜುಂಡಸ್ವಾಮಿ ಹಾಗೂ ರಘುನಾಥ್ ಅವಧಾನಿ ಅವರು ಬೆಳಗ್ಗೆ ಹೋಮ ಮತ್ತು ಧಾರ್ಮಿಕ ಕಾರ್ಯವನ್ನು ಮುಗಿಸಿದ ಬಳಿಕ ದತ್ತ ಮಾಲೆ ಧಾರಣೆ ಮಾಡಿದರು. ಡಿ. 26ರಂದು ಶೋಭಾ ಯಾತ್ರೆ ಹಾಗೂ ಡಿ. 27ರಂದು ದತ್ತ ಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮ ಜರುಗಲಿದೆ.
'ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಳೆದ ವರ್ಷವೇ ದತ್ತ ಮಾಲೆ ಅಭಿಯಾನದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಯಾಕೋ ಅವರು ಬಂದಿರಲಿಲ್ಲ. ಈ ವರ್ಷ ಬಂದರೂ ಬರಬಹುದು' ಎಂದು ರವಿ ಇದೇ ಸಂದರ್ಭದಲ್ಲಿ ಹೇಳಿದರು.
ಆರೋಪದಲ್ಲಿ ಹುರುಳಿಲ್ಲ: ದತ್ತ ಪೀಠ ವಿಚಾರವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ ಸಚಿವ ರವಿ, 14ನೇ ವರ್ಷದಿಂದ ದತ್ತ ಪೀಠ ಹೋರಾಟದಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದೇನೆ. ರಾಜಕೀಯ ಜೀವನಕ್ಕೆ ಬರುವುದಕ್ಕೂ ಮೊದಲೇ ದತ್ತ ಪೀಠ ಹೋರಾಟದಲ್ಲಿ ಸಕ್ರಿಯನಾಗಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications