ತೆರೆ ಮರೆಗೆ ಸರಿದ ರಂಗಕರ್ಮಿ ಎಎಸ್ ಮೂರ್ತಿ
ಬಹುಕಾಲದಿಂದ ಅನಾರೋಗ್ಯಪೀಡಿತರಾಗಿದ್ದ ಮೂರ್ತಿಯವರಿಗೆ 82 ವರ್ಷ ವಯಸ್ಸಾಗಿತ್ತು. ಮಂಗಳವಾರ ಬೆಳಗ್ಗೆ 8.30 ರ ಸುಮಾರಿಗೆ ಹನುಮಂತನಗರದ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ.
ಮೃತರ ದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಎಚ್ ಕಲಾಸೌಧದಲ್ಲಿ ಇರಿಸಲಾಗುತ್ತದೆ. ಸಂಜೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ಹೇಳಿದೆ.
'ಆಕಾಶವಾಣಿ ಈರಣ್ಣ' ಎಂದು ಪ್ರಸಿದ್ಧರಾಗಿದ್ದ ಮೂರ್ತಿ ಅವರು ಸಾಹಿತಿ, ನಾಟಕಕಾರ, ಪತ್ರಿಕೋದ್ಯಮಿ, ಅಂಕಣಕಾರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಕಲಾಮಂದಿರದ ಸ್ಥಾಪಕ ಅ.ನ. ಸುಬ್ಬರಾಯರು, ತಾಯಿ ಗೌರಮ್ಮ ಅವರ ಪುತ್ರರಾಗಿ ಎ.ಎಸ್. ಮೂರ್ತಿಯವರು ಬೆಂಗಳೂರಿನಲ್ಲಿ ಜನಿಸಿದರು. ಬೆಂಗಳೂರಿನಲ್ಲಿ ಎಸ್.ಎಸ್.ಎಲ್.ಸಿ. ಮುಗಿಸಿದ ನಂತರ ಕ್ಯಾಲಿಕೊ ಮಿಲ್ಸ್ನಲ್ಲಿ ಕೆಲಕಾಲ ಉದ್ಯೋಗ ಮಾಡಿಕೊಂಡಿದ್ದರು. ತಂದೆಯಿಂದ ರಕ್ತಗತವಾಗಿ ಬಂದ ಕಲೆ, ಸಾಹಿತ್ಯ, ನಾಟಕಗಳನ್ನು ಸಮರ್ಥವಾಗಿ ಮುಂದಿನ ಪೀಳಿಗೆಗೆ ದಾಟಿಸಿದವರು ಎಎಸ್ ಮೂರ್ತಿ.
ಆಕಾಶವಾಣಿಯಲ್ಲಿ ನಾಟಕಗಳನ್ನು ಬರೆದು ನಿರ್ದೇಶಿಸುತ್ತಾ ನಡೆಸಿದ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದರು. ವೆಂಕಣ್ಣನ ಸಾಹಸಗಳು, ಸಮಾಜದ ಪ್ರಸ್ತುತ ಸಮಸ್ಯೆಗಳಿಗೆ ಕನ್ನಡಿ ಹಿಡಿಯುತ್ತಿದ್ದ, ಜನಪದ ಕಾಳಜಿಯುಳ್ಳ ಇವರ 'ಒಂದು ಮಾತು' ಕಾರ್ಯಕ್ರಮ ಅತ್ಯಂತ ಜನಪ್ರಿಯತೆ ಪಡೆದಿದೆ. ಈರಣ್ಣನಾಗಿ ಎಎಸ್ ಮೂರ್ತಿ ಇಂದಿಗೂ ಫೇಮಸ್
ತಿ.ತಾ.ಶರ್ಮ, ವೈಎನ್ಕೆ, ಶ್ರೀರಂಗ, ಲಂಕೇಶ್, ದಾರರಥಿ ದೀಕ್ಷಿತ್ ಮುಂತಾದವರ ನಾಟಕಗಳನ್ನು ರಂಗಕ್ಕೆ ಬಂದ ಕೀರ್ತಿ ಮೂರ್ತಿ ಅವರಿಗೆ ಸಲ್ಲುತ್ತದೆ.
1964ರಲ್ಲಿ ಅಭಿನಯ ತರಂಗ ರಂಗಶಾಲೆ ಆರಂಭಿಸಿದರು. ಸಾಹಿತ್ಯ, ಸಂಸ್ಕೃತಿ ಅಧ್ಯಯನ, ರಂಗಶಾಲೆಯಾಗಿ ಇದು ರೂಪುಗೊಂಡಿತು. ನಂತರ ಪ್ರಾರಂಭಿಸಿದ್ದು ಬಿಂಬ ಸಂಸ್ಥೆ. ಹನುಮಂತನಗರ ಮತ್ತು ವಿಜಯನಗರದಲ್ಲಿ ಮಕ್ಕಳಿಗಾಗಿ ರೂಪಿಸಿದ ರಂಗಭೂಮಿ.
ಅಭಿನಯ ತರಂಗದಿಂದ ಭಾನುವಾರದ ರಂಗಶಾಲೆಯ ಪ್ರಾಂಶುಪಾಲರಾಗಿ ಅಶೋಕಬಾದರದಿನ್ನಿ, ಬಿ. ಚಂದ್ರಶೇಖರ್, ಎಚ್.ಜಿ. ಸೋಮಶೇಖರ್ರಾವ್, ಗೌರಿದತ್ತು ಮುಂತಾದವರು ಕಾಣಿಸಿಕೊಂಡಿದ್ದಾರೆ.
ಬೀದಿನಾಟಕಗಳಿಗೆ ಹೊಸ ಆಯಾಯ ನೀಡಿದ ಮೂರ್ತಿ ಅವರು 'ಗೆಳೆಯರ ಗುಂಪು' ರಾಜಾಜಿನಗರದ ರಾಮಮಂದಿರದ ಬಳಿ ಪ್ರದರ್ಶಿಸಿದ ಮೊದಲ ನಾಟಕ 'ಕಟ್ಟು'. ನಂತರ ಹಲವಾರು ನಾಟಕಗಳ ಪ್ರದರ್ಶನ. ಪಪೆಟ್ಲ್ಯಾಂಡ್, ಜನಪ್ರಿಯತೆ ಗಳಿಸಿತ್ತು.
* ಅಧ್ಯಕ್ಷತೆ, ಕುಡ್ಕ, ಹುಚ್ಚ, ನಿರೀಕ್ಷೆ, ಶುದ್ಧಶುಂಠಿ, ಲೇಡೀಸ್ ಓನ್ಲಿ, ಡನ್ಲಪ್ಗರ್ಲ್, ಚೈನಾದೋಸ್ತಿ, ಜನ್ಮಾಂತ್ರೀಯ ಮುಂತಾದ 80ಕ್ಕೂ ಅಧಿಕ ನಾಟಕಗಳನ್ನು ರಚಿಸಿದ್ದಾರೆ.
* ಮಕ್ಕಳ ನಾಟಕಗಳು-ಮಲೆಯ ಮಕ್ಕಳು, ಸೋಲದ ಸೋಲಿಗರು, ಜಂಬೂಸವಾರಿ ಮುಂತಾದ 17 ನಾಟಕಗಳು.
* ಬೊಂಬೆನಾಟಕ-ಸಂಗೀತ ಸಂಸ್ಕಾರ, ಟ್ವಿಂಕಲ್ ಟ್ವಿಂಕಲ್
* ಬೀದಿನಾಟಕಗಳು-ಕಟ್ಟು, ನಿಜವ ಹೇಳಬಲ್ಲಿರಾ, ಬಸ್ಸ್ಟಾಪ್, ಕುರ್ಚಿ ಮೊದಲಾದ 27 ನಾಟಕ
* ರೇಡಿಯೋ ನಾಟಕಗಳು, ಚಲನಚಿತ್ರಗಳಿಗೆ ಬರೆದ ಸಂಭಾಷಣೆ, ನಟನೆ. ಟಿ.ವಿ. ಧಾರಾವಾಹಿ, ಚಲನಚಿತ್ರಗಳಲ್ಲೂ ನಟಿಸಿದ್ದಾರೆ.
* ನಾಟಕ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಗೊರೂರು ಪ್ರಶಸ್ತಿ ಸಂದೇಶ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರಶಸ್ತಿ, ರಂಗ ನಿರಂತರ ಪ್ರಶಸ್ತಿ ಮುಂತಾದವು ಸಂದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ













Click it and Unblock the Notifications