ಗಾಯಕಿ ನಿತ್ಯಶ್ರೀ ಪತಿ ಮಹಾದೇವನ್ ಆತ್ಮಹತ್ಯೆ

ಗುರುವಾರ ಮಧ್ಯಾಹ್ನ ಬಿಳಿ ಬಣ್ಣದ ಹೋಂಡಾ ಸಿಟಿ ಕಾರಿನಲ್ಲಿ ಡ್ರೈವರ್ ಜೊತೆ ಬಂದ ಮಹಾದೇವನ್ ಅವರು ಅಡ್ಯಾರ್ ನ ಕೊಟ್ಟುರ್ ಪುರಂ ಸೇತುವೆ ಬಳಿ ವಾಹನ ನಿಲ್ಲಿಸಲು ಹೇಳಿದ್ದಾರೆ. ನಂತರ ಕಾರಿನಿಂದ ಕೆಳಗಿಳಿದು ಫೋನಿನಲ್ಲಿ ಕೆಲ ಕಾಲ ಮಾತಾಡಿದ್ದಾರೆ. ನಂತರ ಸೇತುವೆಯಿಂದ ನದಿಗೆ ಹಾರಿದ್ದಾರೆ.
ನಂತರ ಮಹಾದೇವನ್ ಅವರನ್ನು ರಕ್ಷಿಸಲು ಅಗ್ನಿಶಾಮಕದಳಕ್ಕೆ ಡ್ರೈವರ್ ಕರೆ ಮಾಡಿದ್ದಾರೆ. ಸ್ಥಳೀಯರು ಕೂಡಾ ನದಿಗೆ ಹಾರಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲ ನಿಮಿಷಗಳ ನಂತರ ಮಹಾದೇವನ್ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಮಾರ್ಗಮಧ್ಯದಲ್ಲೇ ಮಹಾದೇವನ್ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಮಾರ್ಗಳಿ ಸಂಗೀತ ಉತ್ಸವದ ಸಂಭ್ರಮದಲ್ಲಿದ್ದ ಚೆನ್ನೈ ನಗರಕ್ಕೆ ಮಹಾದೇವನ್ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಗಿದೆ. ರಾಮರಾವ್ ಕಲ್ಯಾಣ ಮಂಟಪದಲ್ಲಿ ಸಂಗೀತ ಕಚೇರಿ ನೀಡಲು ತಯಾರಿ ನಡೆಸಿದ್ದ ನಿತ್ಯಶ್ರೀ ಅವರಿಗೆ ಭರಸಿಡಿಲು ಬಡಿದಂತೆ ಆಗಿದೆ.
ಪತಿಯ ಸಾವಿನ ದುಃಖ ತಾಳಲಾರದೆ ನಿತ್ಯಶ್ರೀ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು ಎನ್ನಲಾಗಿದೆ. ನಿತ್ಯಶ್ರೀ ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ವಿಕಿಪೀಡಿಯ ಪುಟದಲ್ಲಿ ದಾಖಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಿಪರೀತ ಸಾಲಬಾಧೆಯಿಂದ ಮಹಾದೇವನ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಗಾಯಕಿ ನಿತ್ಯಶ್ರೀ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ಡಿಕೆ ಪಟ್ಟಮ್ಮಾಳ್ ಅವರ ಮೊಮ್ಮಗಳಾದ ನಿತ್ಯಶ್ರೀ ಅವರು ಎಂಎಸ್ ಸುಬ್ಬಲಕ್ಷ್ಮಿ ಹಾಗೂ ಎಂಎಲ್ ವಸಂತಕುಮಾರಿ ಅವರ ನಂತರ ಸ್ಥಾನ ತುಂಬಿದ್ದರು.
ಎ.ಆರ್ ರೆಹಮಾನ್ ಅವರ ಸಂಗೀತ ನಿರ್ದೇಶನದಲ್ಲೂ ನಿತ್ಯಶ್ರೀ ತಮ್ಮ ಗಾನಸುಧೆ ಹರಿಸಿದ್ದರು, ಜೀನ್ಸ್ ಚಿತ್ರದ 'ಕಣ್ಣೊಡು ಕಾನ್ಬದೆಲ್ಲಂ', ಪಡೆಯಪ್ಪದ 'ಮಿನ್ಸಾರ ಕಣ್ಣ' ಸಂಗಮಮ್ ಚಿತ್ರದ 'ಸೌಖಿಯಮ ಕಣ್ಣೆ' ಸೇರಿದಂತೆ ಆಯಿರಥಿಲ್ ಓರುವನ್ ಚಿತ್ರದಲ್ಲೂ ಹಾಡಿದ್ದಾರೆ. ಮಹಾದೇವನ್ ಹಾಗೂ ನಿತ್ಯಶ್ರೀ ದಂಪತಿಗೆ ತನುಜಾಶ್ರೀ ಹಾಗೂ ತೇಜಶ್ರೀ ಇಬ್ಬರು ಪುತ್ರಿಯರಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications