ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಭಾರೀ ಆಘಾತ ನೀಡಿದ ಎಐಸಿಸಿ

ಬಿಜೆಪಿ ಆಡಳಿತ, ಕೆಜೆಪಿ ಪಕ್ಷದ ಉದಯದಿಂದ ಸಹಜವಾಗಿ ಕಾಂಗ್ರೆಸ್ ಪಕ್ಷದ ಟಿಕೆಟಿಗೆ ಭಾರೀ ಬೇಡಿಕೆಯಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ನಿರ್ದಿಷ್ಟ ಪ್ರಕ್ರಿಯೆ ಅನುಸರಿಸಬೇಕೆಂದು ಹೈಕಮಾಂಡ್ ರಾಜ್ಯ ಕಾಂಗ್ರೆಸಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ನೀಡಿದೆ.
ಸತತ ಎರಡು ಬಾರಿ ಸೋತ, ಠೇವಣಿ ಕಳೆದುಕೊಂಡ ಅಭ್ಯರ್ಥಿಗಳಿಗೆ ಟಿಕೆಟ್ ಈ ಬಾರಿ ಸಿಗುವುದು ಕಷ್ಟ. ಅಷ್ಟೇ ಅಲ್ಲದೆ ಒಂದೇ ಕುಟುಂಬದ ಇಬ್ಬರಿಗೆ ಟಿಕೆಟ್ ನೀಡದೇ ಇರಲು ಅಭ್ಯರ್ಥಿ ಪರಿಶೀಲನಾ ಸಮಿತಿ ಕೆಪಿಸಿಸಿಗೆ ಸೂಚನೆ ನೀಡಿದೆ.
ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕ್ರಿಮಿನಲ್ ಹಿನ್ನಲೆಯವರು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದವರು, 15 ಸಾವಿರಕ್ಕಿಂತಲೂ ಹೆಚ್ಚಿನ ಮತಗಳಿಂದ ಪರಾಭವಗೊಂಡವರಿಗೂ ಟಿಕೆಟ್ ನೀಡಬಾರದೆಂದು ಕೆಪಿಸಿಸಿಗೆ ಸಮಿತಿ ಸೂಚಿಸಿದೆ
ಕಳೆದ ರಾಜ್ಯಸಭಾ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾದವರಿಗೂ ಈ ಬಾರಿ ಟಿಕೆಟ್ ಸಿಗುವುದು ದುಸ್ತರ.
ಈ ಮಾರ್ಗಸೂಚಿ ಸಿದ್ದಪಡಿಸುವ ಪ್ರಕ್ರಿಯೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿರುವುದರಿಂದ ಇದು ಕೇವಲ ಕಾಟಾಚಾರಕ್ಕೆ ಮಾಡಿದ ಪಟ್ಟಿಯಲ್ಲ ಎನ್ನುವುದು ರಾಜ್ಯ ಕಾಂಗ್ರೆಸ್ ನಾಯಕರ ಅಂಬೋಣ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications