ಮಡೆಸ್ನಾನ ಬೇಡ ಎಡೆಸ್ನಾನವಿರಲಿ ಎಂದ ಪೇಜಾವರ ಶ್ರೀ

'ಎಡೆಸ್ನಾನ ಅಂದರೆ ದೇವರಿಗೆ ಅರ್ಪಿಸುವ ನೈವೇದ್ಯದ ಮೇಲೆ ಭಕ್ತರು ಉರುಳು ಸೇವೆ ಮಾಡುವುದು ಎಂದರ್ಥ. ಆದರೆ ಹೀಗೆ ಮಾಡುವುದರಿಂದ ದೇವರ ಪ್ರಸಾದ ಅಪವಿತ್ರವಾಗುತ್ತದೆ ಎಂದು ವಾದಿಸಿದರೆ ಹೇಗೆ? ಈ ವಾದವನ್ನು ನಾನು ಒಪ್ಪುವುದಿಲ್ಲ. ಏಕೆಂದರೆ ಗಂಗಾ ನದಿಯಲ್ಲಿ ಸಾವಿರಾರು ಭಕ್ತರು ಮಿಂದು ಪಾವನರಾಗುತ್ತಾರೆ. ಹಾಗಂತ ಗಂಗಾನದಿಯನ್ನು ಅಪವಿತ್ರ ಎನ್ನಲು ಸಾಧ್ಯವೇ?' ಎಂದು ಅವರು ಪ್ರಶ್ನಿಸಿದ್ದಾರೆ.
'ಮಡೆಸ್ನಾನ ನಡೆಸುವ ಅಗತ್ಯವಿಲ್ಲ. ಅದರಿಂದ ಹಿಂದೂ ಧರ್ಮಕ್ಕೆ ಲಾಭವೂ ಇಲ್ಲ. ಈ ಬಗ್ಗೆ ನಾನು ನೀಡಿದ ಎಡೆಸ್ನಾನದ ಸಲಹೆಯನ್ನು ರಾಜ್ಯ ಸರಕಾರ ಪರಿಗಣಿಸಿತ್ತು. ಆದರೆ ಪ್ರಸಕ್ತ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಡೆಸ್ನಾನ ಮುಂದುವರಿದಿದೆ.
ಉಡುಪಿಯ ಕೃಷ್ಣ ಮಠದಲ್ಲಿ ಮಡೆಸ್ನಾನವಿಲ್ಲ. ಮಡೆಸ್ನಾನದ ಬದಲು ಎಡೆಸ್ನಾನದ ಪ್ರಸ್ತಾಪವನ್ನು ನಾನು ಮಾಡಿದಾಗ ನನ್ನನ್ನು ಸ್ವಾಗತಿಸಿದವರೇ (ನಿಡುಮಾಮಿಡಿ ಸ್ವಾಮೀಜಿ ಸೇರಿದಂತೆ ಅನೇಕರು) ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಪೇಜಾವರಶ್ರೀ ವಿಷಾದಿಸಿದರು.
ನಕ್ಸಲ್ ಪ್ರದೇಶಗಳಲ್ಲಿ ನೀರಾ ರಾಡಿಯಾ ಸೇವೆ: ವಿವಾದಿತ ನೀರಾ ರಾಡಿಯಾ ಅವರು ಪೇಜಾವರ ಶ್ರೀಗಳ ಉಸ್ತುವಾರಿಯಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅಲ್ಲಿನ ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವಂತಾಗಲು 2 ಕೋಟಿ ರೂ. ಮೌಲ್ಯದ ಅತ್ಯಾಧುನಿಕ ಸಂಚಾರಿ ವೈದ್ಯಕೀಯ ವಾಹನ ನೀಡಿದ್ದಾರೆ. ಮುಂದಿನ ಜನವರಿ 15ರಿಂದ ಈ ಸೇವೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.
'ನೀರಾ ರಾಡಿಯಾ ಮೇಲಿನ ಆರೋಪ ಇನ್ನೂ ಸಾಬೀತಾಗಿಲ್ಲ. ಅಲ್ಲದೆ ಅವರು ದೇಣಿಗೆ ನೀಡಿರುವುದು ಸಮಾಜ ಸೇವೆಗೆ. ಇದೀಗ ರಾಜ್ಯದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದು ಸ್ವಾಗತಾರ್ಹ' ಎಂದು ಪೇಜಾವರಶ್ರೀ ಇದೇ ವೇಳೆ ಪ್ರತಿಕ್ರಿಯಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications