ಅತ್ಯಾಚಾರ ಭೀತಿ: ಬಿಟಿಎಸ್ ಬಸ್ಸುಗಳಿಗೆ CCTV

ಈ ಮಧ್ಯೆ, ರಾಜಧಾನಿ ಬೆಂಗಳೂರಿನಲ್ಲೂ ಇಬ್ಬರು ಯುವತಿಯರಿಗೆ (ಭೂತಾನ್ ನವರು) ವೋಲ್ವೋ ಬಿಟಿಎಸ್ ಬಸ್ಸಿನಲ್ಲಿ ಕಿರಾತಕ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ (ಈ ಬಗ್ಗೆ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ, ಘಟನೆಯ ಸತ್ಯಾಸತ್ಯತೆ ತಿಳಿಸಲಿದ್ದಾರೆ.) ಅದೂ ಅತ್ತ ಸಾರಿಗೆ ಸಚಿವ ಅಶೋಕ್ ಅವರು 'ಎಚ್ಚೆರಾ, ಎಚ್ಚರ' ಎಂದು ಬೊಂಬಡಾ ಹೊಡೆದು ಹೋದ ಹೊತ್ತಿನಲ್ಲೇ ಈ ಅನುಚಿತ ವರ್ತನೆ ನಡೆದಿದೆ.
ಇದರಿಂದ ಎಚ್ಚೆತ್ತ ಸರಕಾರ ಹೆಚ್ಚಿನ ಅನಾಹುತ ಸಂಭವಿಸುವ ಮೊದಲೇ ಒಂದಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಮುಖ್ಯವಾಗಿ ಪ್ರತಿಯೊಂದು ಬಿಟಿಎಸ್ ಬಸ್ಸಿನಲ್ಲೂ ಎರಡೆರಡು CCTV ಕ್ಯಾಮರಾಗಳನ್ನು ಅಳವಡಿಸಲು ನಿರ್ಧರಿಸಿದೆ.
ಆ ಬಸ್-ಈ ಬಸ್ ಅಂತಲ್ಲ. ವೋಲ್ವೋ ಬಸ್ಸಿನಿಂದ ಹಿಡಿದು ಎಲ್ಲ ಬಸ್ಸುಗಳಲ್ಲೂ ಈ ವ್ಯವಸ್ಥೆ ಜಾರಿಗೆ ಬರಲಿದೆ. ಇದನ್ನು ಯಾವಾಗಲೋ ಅಳವಡಿಸಬಹುದಾಗಿತ್ತಾದರೂ ಈಗಲಾದರೂ ಸಾರಿಗೆ ಇಲಾಖೆ ಎಚ್ಚೆತ್ತು ಕೊಂಡಿದೆ. ಅಷ್ಟೇ ಅಲ್ಲ. ಇದನ್ನು ಸದ್ಯದಲ್ಲೇ ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಬಸ್ಸುಗಳಲ್ಲೂ ಅಳವಡಿಸಲು ಇಲಾಖೆ ನಿರ್ಧರಿಸಿದೆ.
ಇದೆಲ್ಲ OK, ಆದರೆ ಖಾಸಗಿ ಬಸ್ಸುಗಳಲ್ಲಿ ಸಂಚರಿಸುವವರ ಪಾಡೇನು? CCCTV ಅಳವಡಿಸಿಕೊಳ್ಳುವಂತೆ ಖಾಸಗಿ ಬಸ್ ಮಾಲೀಕರಿಗೂ ಸರಕಾರ ತಾಕೀತು ಮಾಡುತ್ತದಾ?
ಇದೇ ಸಂದರ್ಭದಲ್ಲಿ ಪ್ರಯಾಣಿಕರತ ಸುರಕ್ಷತೆ, ಸುಖಕರ ಪ್ರಯಾಣಕ್ಕೆ ಅನುವು ಮಾಡಿಕೊಡಲು BMTC ತನ್ನ ಸಿಬ್ಬಂದಿಗೆ ಒಂದಷ್ಟು ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. *Happy Journey! women commuters.
1. ಮಹಿಳಾ ಪ್ರಯಾಣಿಕರ ಜತೆ ಸೌಜನ್ಯವಾಗಿ ವರ್ತಿಸಬೇಕು.
2. ಮಹಿಳಾ ಪ್ರಯಾಣಿಕರಿಗೆ ಆದ್ಯತೆಯಲ್ಲಿ ಸೀಟು ಕೊಡಬೇಕು.
3. ಮಹಿಳಾ ಪ್ರಯಾಣಿಕರ ಪಕ್ಕದಲ್ಲಿ ಮಹಿಳೆಯೇ ಕುಳಿತುಕೊಳ್ಳುವಂತೆ ಎಚ್ಚರವಹಿಸಬೇಕು.
4. ಮಹಿಳಾ ಪ್ರಯಾಣಿಕರ ಜತೆ ಅನಗತ್ಯವಾಗಿ ವಾದ ಮಾಡಬಾರದು.
5. ಮಹಿಳಾ ಪ್ರಯಾಣಿಕರ ಜತೆ ಪುರುಷರು ಅಸಭ್ಯಯವಾಗಿ ವರ್ತಿಸಿದರೆ ಚಾಲಕ-ನಿರ್ವಾಹಕರು ಬಸ್ಸನ್ನು ಸಮೀಪದ ಪೊಲೀಸ್ ಠಾಣೆಯತ್ತ ತಿರುಗಿಸಬೇಕು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications