ಹೆತ್ತವರ ವಿರೋಧ, ಪ್ರೇಮಿಗಳು ವಿಷ ಸೇವಿಸಿ ಸಾವು

ನಡೆದಿದೆ.
ಪ್ರೇಮ ವಿವಾಹಕ್ಕೆ ಹೆತ್ತವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಮನನೊಂದ ಪ್ರೇಮಿಗಳು ಮನೆಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಶೇಷಾದ್ರಿಪುರದ ವಿ.ವಿ ಗಿರಿ ಕಾಲೋನಿಯ ವಿನೋದ್ ಕುಮಾರ್(26) ಮತ್ತು ಸುಧಾ (28)ಆತ್ಮಹತ್ಯೆಗೆ ಶರಣಾದ ದುರಂತ ಪ್ರೇಮಿಗಳು. ಈ ಇಬ್ಬರು ಒಂದೇ ಬಡವಾಣೆಯಲ್ಲಿ ವಾಸವಾಗಿದ್ದು, ಒಂದೇ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇಬ್ಬರ ನಡುವೆ ಸ್ನೇಹ ಬೆಳೆದು ಬಳಿಕ ಪ್ರೇಮಾಂಕುರವಾಗಿತ್ತು. ಬಹುದಿನಗಳ ಕಾಲ ಸುತ್ತಾಡಿಕೊಂಡಿದ್ದರು. ಪೋಷಕರನ್ನು ಒಪ್ಪಿಸಿ ಮದುವೆಯಾಗಲು ನಿರ್ಧರಿಸಿದ್ದರು.
ಆದರೆ, ಈ ವಿಷಯ ತಿಳಿದ ಎರಡು ಮನೆಯ ಪೋಷಕರು ಪ್ರೇಮ ವಿವಾಹಕ್ಕೆ ಅಡ್ಡಿಪಡಿಸಿ ದೂರವಿರಿಸುವ ಯತ್ನಿಸಿದ್ದರು.
ವಯಸ್ಸು ಅಡ್ಡಿಯಾಯಿತೇ?: ಸುಧಾಳ ತಂದೆ ಮುನಿಸ್ವಾಮಿ ಕ್ಯಾಬ್ ಚಾಲಕರಾಗಿದ್ದು, ವಿನೋದ್ ತಂದೆ ಅಣ್ಣಮಲೈ ಪೈಂಟರ್ ಆಗಿದ್ದಾರೆ. ಎರಡು ಮನೆಯವರಿಗೆ ಸ್ಟೇಟಸ್ ಪ್ರಶ್ನೆ ಇಲ್ಲ. ಇಬ್ಬರ ಮನೆಯವರು ತೀರಾ ಹತ್ತಿರದವರಾಗಿದ್ದು, ಒಂದೇ ಜಾತಿ ಹಾಗೂ ಅಂತಸ್ತಿನವರಾಗಿದ್ದರು.
ಆದರೆ ಸುಧಾ, ವಿನೋದ್ಗಿಂತ 2 ವರ್ಷ ದೊಡ್ಡವಳಾಗಿದ್ದಳು ಇದು ಯಾವ ರೀತಿಯಲ್ಲೂ ಮದುವೆಗೆ ಅಡ್ಡವಾಗಿರಲಿಲ್ಲ. ಆದರೂ ಮದುವೆಗೆ ಪಾಲಕರು ನಿರಾಕರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪಾಲಕರ ವರ್ತನೆಯಿಂದ ಬೇಸತ್ತ ಪ್ರೇಮಿಗಳಿಬ್ಬರು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದರು. ಆದರೆ ಪಾಲಕರ ಒಪ್ಪಿಗೆ ಪಡೆದ ನಂತರವೇ ಮದುವೆಯಾಗಬೇಕೆಂಬ ಹಂಬಲದಿಂದ ಶುಕ್ರವಾರ ಮಧ್ಯಾಹ್ನ ಮತ್ತೆ ಮನೆಗೆ ವಾಪಸ್ಸಾಗಿದ್ದರು.
ಆದರೆ ಮನೆಗೆ ಹೋಗುತ್ತಿದ್ದಂತೆ ಕುಟುಂಬದ ಗೌರವ ಮಣ್ಣು ಮಾಡಿದ್ದೀರಿ ಎಂದು ನಿಂದಿಸಿದ ಪೋಷಕರು ಮನೆಯಿಂದ ಹೊರ ಹಾಕಿದರು.
ಇದರಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾದ ಪ್ರೇಮಿಗಳು ಬೇರೆ ದಾರಿ ತೋಚದೆ ವಿನೋದ್ ಮನೆ ಮುಂದೆಯೇ ಇಬ್ಬರೂ ವಿಷ ಕುಡಿದಿದ್ದಾರೆ.
ಫುಟ್ ಪಾತ್ ಮೇಲೆ ಬಿದ್ದಿದ್ದ ಈ ಇಬ್ಬರನ್ನು ಕಂಡ ಸ್ಥಳೀಯರು ಮನೆಯವರಿಗೆ ತಿಳಿಸಿ, ಕೂಡಲೇ ವಿನೋದ್ನನ್ನು ಕೆ.ಸಿ.ಜನರಲ್ ಆಸ್ಪತ್ರೆ ಮತ್ತು ಸುಧಾಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications