ಹೆತ್ತವರ ವಿರೋಧ, ಪ್ರೇಮಿಗಳು ವಿಷ ಸೇವಿಸಿ ಸಾವು

ನಡೆದಿದೆ.
ಪ್ರೇಮ ವಿವಾಹಕ್ಕೆ ಹೆತ್ತವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಮನನೊಂದ ಪ್ರೇಮಿಗಳು ಮನೆಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಶೇಷಾದ್ರಿಪುರದ ವಿ.ವಿ ಗಿರಿ ಕಾಲೋನಿಯ ವಿನೋದ್ ಕುಮಾರ್(26) ಮತ್ತು ಸುಧಾ (28)ಆತ್ಮಹತ್ಯೆಗೆ ಶರಣಾದ ದುರಂತ ಪ್ರೇಮಿಗಳು. ಈ ಇಬ್ಬರು ಒಂದೇ ಬಡವಾಣೆಯಲ್ಲಿ ವಾಸವಾಗಿದ್ದು, ಒಂದೇ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇಬ್ಬರ ನಡುವೆ ಸ್ನೇಹ ಬೆಳೆದು ಬಳಿಕ ಪ್ರೇಮಾಂಕುರವಾಗಿತ್ತು. ಬಹುದಿನಗಳ ಕಾಲ ಸುತ್ತಾಡಿಕೊಂಡಿದ್ದರು. ಪೋಷಕರನ್ನು ಒಪ್ಪಿಸಿ ಮದುವೆಯಾಗಲು ನಿರ್ಧರಿಸಿದ್ದರು.
ಆದರೆ, ಈ ವಿಷಯ ತಿಳಿದ ಎರಡು ಮನೆಯ ಪೋಷಕರು ಪ್ರೇಮ ವಿವಾಹಕ್ಕೆ ಅಡ್ಡಿಪಡಿಸಿ ದೂರವಿರಿಸುವ ಯತ್ನಿಸಿದ್ದರು.
ವಯಸ್ಸು ಅಡ್ಡಿಯಾಯಿತೇ?: ಸುಧಾಳ ತಂದೆ ಮುನಿಸ್ವಾಮಿ ಕ್ಯಾಬ್ ಚಾಲಕರಾಗಿದ್ದು, ವಿನೋದ್ ತಂದೆ ಅಣ್ಣಮಲೈ ಪೈಂಟರ್ ಆಗಿದ್ದಾರೆ. ಎರಡು ಮನೆಯವರಿಗೆ ಸ್ಟೇಟಸ್ ಪ್ರಶ್ನೆ ಇಲ್ಲ. ಇಬ್ಬರ ಮನೆಯವರು ತೀರಾ ಹತ್ತಿರದವರಾಗಿದ್ದು, ಒಂದೇ ಜಾತಿ ಹಾಗೂ ಅಂತಸ್ತಿನವರಾಗಿದ್ದರು.
ಆದರೆ ಸುಧಾ, ವಿನೋದ್ಗಿಂತ 2 ವರ್ಷ ದೊಡ್ಡವಳಾಗಿದ್ದಳು ಇದು ಯಾವ ರೀತಿಯಲ್ಲೂ ಮದುವೆಗೆ ಅಡ್ಡವಾಗಿರಲಿಲ್ಲ. ಆದರೂ ಮದುವೆಗೆ ಪಾಲಕರು ನಿರಾಕರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪಾಲಕರ ವರ್ತನೆಯಿಂದ ಬೇಸತ್ತ ಪ್ರೇಮಿಗಳಿಬ್ಬರು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದರು. ಆದರೆ ಪಾಲಕರ ಒಪ್ಪಿಗೆ ಪಡೆದ ನಂತರವೇ ಮದುವೆಯಾಗಬೇಕೆಂಬ ಹಂಬಲದಿಂದ ಶುಕ್ರವಾರ ಮಧ್ಯಾಹ್ನ ಮತ್ತೆ ಮನೆಗೆ ವಾಪಸ್ಸಾಗಿದ್ದರು.
ಆದರೆ ಮನೆಗೆ ಹೋಗುತ್ತಿದ್ದಂತೆ ಕುಟುಂಬದ ಗೌರವ ಮಣ್ಣು ಮಾಡಿದ್ದೀರಿ ಎಂದು ನಿಂದಿಸಿದ ಪೋಷಕರು ಮನೆಯಿಂದ ಹೊರ ಹಾಕಿದರು.
ಇದರಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾದ ಪ್ರೇಮಿಗಳು ಬೇರೆ ದಾರಿ ತೋಚದೆ ವಿನೋದ್ ಮನೆ ಮುಂದೆಯೇ ಇಬ್ಬರೂ ವಿಷ ಕುಡಿದಿದ್ದಾರೆ.
ಫುಟ್ ಪಾತ್ ಮೇಲೆ ಬಿದ್ದಿದ್ದ ಈ ಇಬ್ಬರನ್ನು ಕಂಡ ಸ್ಥಳೀಯರು ಮನೆಯವರಿಗೆ ತಿಳಿಸಿ, ಕೂಡಲೇ ವಿನೋದ್ನನ್ನು ಕೆ.ಸಿ.ಜನರಲ್ ಆಸ್ಪತ್ರೆ ಮತ್ತು ಸುಧಾಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications