ಧಾರವಾಡದಲ್ಲಿ ಜ.25ರಿಂದ ಮೂರು ದಿನಗಳ ಸಾಹಿತ್ಯ ಸಂಭ್ರಮ

ದ.ರಾ. ಬೇಂದ್ರೆ, ವಿ.ಕೆ. ಗೋಕಾಕ್, ಜಿ.ಬಿ. ಜೋಶಿ, ಬೆಟಗೇರಿ ಕೃಷ್ಣಶರ್ಮ, ಗಿರೀಶ್ ಕಾರ್ನಾಡ್, ಕೀರ್ತಿನಾಥ ಕುರ್ತಕೋಟಿ, ಚಂದ್ರಶೇಖರ ಪಾಟೀಲ, ಜಿ.ಎಸ್, ಆಮೂರ, ಜಿ.ವಿ. ಕುಲಕರ್ಣಿ, ಡಾ. ಎಂ.ಎಂ. ಕಲಬುರ್ಗಿ, ಪಾಟೀಲ ಪುಟ್ಟಪ್ಪ, ಶಂ.ಭಾ.ಜೋಶಿ, ಶಾಂತಾದೇವಿ ಮಾಳವಾಡ, ಸುದರ್ಶನ ದೇಸಾಯಿ ಮುಂತಾದ ಖ್ಯಾತ ಸಾಹಿತಿಗಳನ್ನು ಕನ್ನಡ ನಾಡಿಗೆ ಕೊಡುಗೆಯಾಗಿ ನೀಡಿರುವ ಧಾರವಾಡ ಮತ್ತೊಂದು ಸಾಹಿತ್ಯ ಸಂಭ್ರಮ.
ಕನ್ನಡ ಸಾಹಿತ್ಯ ಸಮ್ಮೇಳನ, ಇತರೆ ವಿಚಾರ ಸಂಕಿರಣಗಳಿಗಿಂತ ವಿಭಿನ್ನವಾಗಿ ನಡೆಸುವ ಉದ್ದೇಶದಿಂದ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಆಯೋಜಕರು ಹೇಳಿದ್ದಾರೆ. ಒಣ ಭಾಷಣಗಳಿಗಿಂತ ಓದು, ಸಂಭಾಷಣೆ, ಮಾತುಕತೆ, ಚರ್ಚೆ, ಪ್ರಶ್ನೋತ್ತರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ಆಯೋಜಕರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.
ಇಂದಿನ ಸಾಹಿತ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುವುದು, ಹಿಡಿದಿರುವ ಹಾದಿಯನ್ನು ಗುರುತಿಸುವುದು, ಹೊಸ ತಾಂತ್ರಿಕತೆ ಒದಗಿಸುವ ಸೌಲಭ್ಯಗಳನ್ನು ಸಾಹಿತ್ಯದ ಬೆಳವಣಿಗೆಗಾಗಿ ಅರ್ಥಪೂರ್ಣವಾಗಿ ಬಳಸಿಕೊಳ್ಳುವುದು ಈ ಸಾಹಿತ್ಯ ಸಂಭ್ರಮದಲ್ಲಿ ನಡೆಯಲಿದೆ. ರಾಜ್ಯದ ಒಳಹೊರಗಿನಿಂದ 100ಕ್ಕೂ ಹೆಚ್ಚು ಸಾಹಿತಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮ್ಯಾನ್ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿ ಸ್ಥಾನಪಡೆದಿರುವ ಡಾ.ಯು.ಆರ್. ಅನಂತಮೂರ್ತಿ ಅವರು ಸಮ್ಮೇಳನ ಉದ್ಘಾಟಿಸಿ ಆಶಯ ಭಾಷಣ ಮಾಡಲಿದ್ದಾರೆ.
ಆತ್ಮಕತೆಗಳ ಆಯ್ದಭಾಗಗಳ ಓದು, ನಾಟಕಕಾರನೊಂದಿಗೆ ನಾಟಕಕಾರ, ಕಾರ್ಪೋರೇಟ್ ಜಗತ್ತು ಮತ್ತು ಕನ್ನಡ ಸಾಹಿತ್ಯ, ಸಿನೆಮಾ ಆಗಿ ಸಾಹಿತ್ಯ ಕೃತಿ, ವಿಮರ್ಶೆ ತೊಡಕು-ತೊಡಕಾಗುತ್ತಿದೆಯೆ, ಕತೆ ಹುಟ್ಟುವ ರೀತಿ, ಹೆಚ್ಚುತ್ತಿರುವ ಪ್ರಶಸ್ತಿಗಳ ಹಾವಳಿ, ಅಂತರ್ಜಾಲದಲ್ಲಿ ಕನ್ನಡ, ಲೇಖಕರೊಂದಿಗೆ ಪ್ರಶ್ನೋತ್ತರ, ಕತೆ ಹೇಳುವ ಕಲೆ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಗೋಷ್ಠಿಗಳಲ್ಲಿ 50ಕ್ಕೂ ಹೆಚ್ಚು ಪ್ರಸ್ತುತ ಕ್ರಿಯಾಶೀಲರಾಗಿರುವ ಸಾಹಿತಿಗಳು, ವಿಮರ್ಶಕರು, ಪತ್ರಕರ್ತರು ಭಾಗವಹಿಸಿ ತಮ್ಮ ಪ್ರಬುದ್ಧ ಅನುಭವ ಹಂಚಿಕೊಳ್ಳಲಿದ್ದಾರೆ.
ಒನ್ಇಂಡಿಯಾ ಕನ್ನಡದ ಸಂಪಾದಕರಾದ ಎಸ್.ಕೆ. ಶಾಮ ಸುಂದರ ಅವರು ಅಂತರ್ಜಾಲದಲ್ಲಿ ಕನ್ನಡ ಗೋಷ್ಠಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರ ಜೊತೆಗೆ, ಸಾಹಿತಿ-ಸಾಹಿತಿಗಳ ನಡುವೆ, ಲೇಖಕ-ಓದುಗರ ನಡುವೆ ಉತ್ತಮ ಬಾಂಧ್ಯವ್ಯ, ಆತ್ಮೀಯ ಸಂಬಂಧ ಬೆಳೆಸುವ ಉದ್ದೇಶವೂ ಈ ಸಮ್ಮೇಳನಕ್ಕಿದೆ ಎಂದು ಆಯೋಜಕರು ಹೇಳಿದ್ದಾರೆ. ಕನ್ನಡ ಸಾಹಿತ್ಯವನ್ನು ಸವಿಯುವುದರ ಜೊತೆ ಧಾರವಾಡದ ಫೇಡೆಯನ್ನು ಕೊಂಡು ಬರಲು ಸಾಹಿತ್ಯ ಪ್ರೇಮಿಗಳಿಗೆ ಸುಯೋಗ ಒದಗಿಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications