ಟೆಕ್ಕಿ ಪತಿ ಜೊತೆ ಕಿರಿಕ್, ಪತ್ನಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಮನನೊಂದಿದ್ದ 29 ವರ್ಷದ ಚೆನ್ನೈ ಮೂಲದ ಪೂಜಾ ರುಚಿತ್ ಅವರು ಕುಂದಲಹಳ್ಳಿ ಬಳಿಯ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.
ಆಕೆ ಪತಿ ರುಚಿತ್ ಅವರು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಈ ದಂಪತಿಗೆ 5 ವರ್ಷದ ಮಗಳಿದ್ದಾಳೆ. ರುಚಿತ್ ಐಟಿಪಿಎಲ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೂಜಾ ಕೂಡಾ ಟೆಕ್ಕಿಯಾಗಿದ್ದು ಕೆಲಕಾಲ ಸಮೀಪದ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಚೆನ್ನೈನಿಂದ ಪೂಜಾ ಮನೆ ಕಡೆಯವರು ಬೆಂಗಳೂರಿಗೆ ಬಂದಿದ್ದು, ವೈಟ್ ಫೀಲ್ಡ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಕೇಸ್ ನಂತೆ ಕಂಡು ಬಂದಿದೆ. ದಂಪತಿಗಳು ವಿವಾಹ ವಿಚ್ಛೇದನ ಬಯಸಿದ್ದರು. ಆದರೆ, ಕೆಲ ಸಾಕ್ಷಿಗಳ ಪ್ರಕಾರ ಪೂಜಾ ಸಾಯುವ ಎರಡು ದಿನ ಮೊದಲು ಗಂಡ ಹೆಂಡತಿ ಜೊತೆ ಜೊತೆಯಾಗೇ ಇದ್ದರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ವೈಟ್ ಫೀಲ್ಡ್ ಪೊಲೀಸರು ಹೇಳಿದ್ದಾರೆ.
2012ರ ಅಕ್ಟೋಬರ್ ನಲ್ಲೇ ದಂಪತಿಗಳು ಬೇರೆ ಬೇರೆ ವಾಸಿಸಲು ನಿರ್ಧರಿಸಿದ್ದರು. ಸುಮಾರು 7 ವರ್ಷಗಳ ಹಿಂದೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು.
ಆದರೆ, ಇಬ್ಬರ ನಡುವೆ ಭಾಷೆ, ಸಂಸ್ಕೃತಿ, ಹಣಕಾಸು ಸೇರಿದಂತೆ ಹಲವಾರು ವಿಷಯಗಳಲ್ಲಿ ಹೊಂದಾಣಿಕೆ ಅಸಾಧ್ಯವಾಗಿತ್ತು. ಈ ನಡುವೆ ಮಗಳನ್ನು ಹೆತ್ತ ಪೂಜಾ ಕೊನೆಗೂ ವಿಚ್ಛೇದನ ಪಡೆಯಲು ನಿರ್ಧರಿಸಿದ್ದರು.
ರುಚಿತ್ ಇದ್ದ ಲೇಔಟ್ ನಲ್ಲೇ ಪೂಜಾ ಬೇರೆ ಅಪಾರ್ಟ್ಮೆಂಟ್ ಮಾಡಿಕೊಂಡು ಇದ್ದರು. ಮಗಳು ರುಚಿತ್ ಜೊತೆಯಲ್ಲೇ ಇದ್ದಳು ಎಂದು ತಿಳಿದು ಬಂದಿದೆ.
ಪೂಜಾ ಸಾಯುವುದಕ್ಕೂ ಎರಡು ದಿನಗಳ ಹಿಂದೆ ರುಚಿತ್ ಹಾಗೂ ಪೂಜಾ ಒಟ್ಟಿಗೆ ಮಗಳೊಂದಿಗೆ ಶಾಂಪಿಂಗ್ ಮಾಡಿದ್ದಾರೆ. ವಿಚ್ಛೇದನಕ್ಕೆ ಅರ್ಜಿ ಹಾಕಿದ ಮೇಲೆ ಇಬ್ಬರು ಚೆನ್ನಾಗಿ ಮಾತನಾಡುತ್ತಿದ್ದರು. ಪರಸ್ಪರ ಮನೆಗೆ ಹೋಗಿ ಬಂದು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಆದರೆ, ಪೂಜಾ ಇದ್ದಕ್ಕಿದ್ದಂತೆ ಈ ರೀತಿ ನಿರ್ಣಯ ಕೈಗೊಂಡಿರುವುದು ನಮಗೆಲ್ಲ ಶಾಕ್ ಆಗಿದೆ. ನನಗೆ ರುಚಿತ್ ಕಾಲ್ ಮಾಡಿ ಪೂಜಾ ಯಾಕೋ ಫೋನ್ ಕಾಲ್ ರಿಸೀವ್ ಮಾಡ್ತಾ ಇಲ್ಲ ಮನೆಗೆ ಹೋಗಿ ನೋಡು ನಾನು ಬರ್ತಾದ್ದೀನಿ ಎಂದರು.
ಕೆಲ ಸಮಯದ ನಂತರ ನೆರೆ ಮನೆಯವರ ಸಹಾಯದಿಂದ ಬಾಗಿಲು ಮುರಿದು ಒಳಗೆ ಹೊಕ್ಕು ನೋಡಿದರೆ, ಬೆಡ್ ರೂಮ್ ನಲ್ಲಿ ಪೂಜಾ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಳು ಎಂದು ಪೂಜಾ ತಂಗಿ ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications