ಕೆಜೆಪಿಗೆ ದೇಣಿಗೆ ಸಂಗ್ರಹಿಸುತ್ತಿರುವ ಶೋಭಾ ?

ಬಿಜೆಪಿಯಲ್ಲಿದ್ದೂ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶೋಭಾ ಕರಂದ್ಲಾಜೆ ವಿರುದ್ದ ಪಕ್ಷದ ಬಹುತೇಕ ಶಾಸಕರು ಮತ್ತು ಸಚಿವರು ಸಂಸದೀಯ ಮಂಡಳಿಯ ಸಭೆಯಲ್ಲಿ ತಿರುಗಿ ಬಿದ್ದಿದ್ದಾರೆ ಎನ್ನುವ ಸುದ್ದಿ ಕೂಡಾ ಹರಿದಾಡುತ್ತಿದೆ.
ಇಂಧನ ಸಚಿವಾಯಲದ ಪ್ರಭಾವ ಬಳಸಿಕೊಂಡು ಶೋಭಾ ಕರಂದ್ಲಾಜೆ ತಮ್ಮ ರಾಜಕೀಯ 'ಮೆಂಟರ್' ಯಡಿಯೂರಪ್ಪ ಪಕ್ಷದ ಪರವಾಗಿ ದೇಣಿಗೆ ಸಂಗ್ರಹಿಸುತ್ತಿದಾರೆ ಎನ್ನುವು ಸುದ್ದಿ ವರಿಷ್ಠರ ಗಮನಕ್ಕೆ ಬಂದಿದೆ.
ಯಡಿಯೂರಪ್ಪ ಪಕ್ಷದಲ್ಲಿದ್ದಾಗಲೂ, ಬಿಟ್ಟಾಗಲೂ ಅವರ ಜೊತೆ ಗುರುತಿಸಿಕೊಂಡಿರುವ ಶೋಭಾ, ಬಿಜೆಪಿಯಲ್ಲಿ ಇದ್ದುಕೊಂಡೇ ಕೆಜೆಪಿಗೆ ಪರೋಕ್ಷವಾಗಿ ದೇಣಿಗೆ ಸಂಗ್ರಹಿಸಲು ಇಂಧನ ಸಚಿವಾಲಯದ ಮೂಲಕ ತಮ್ಮ ಕೈಲಾದ 'ಭರಪೂರ' ಸಹಾಯ ಮಾಡುತ್ತಿದ್ದಾರೆ ಎನ್ನುವ ಸುದ್ದಿ ತಡವಾಗಿ ಪಕ್ಷದ ದೊಡ್ಡ ತಲೆಗಳಿಗೆ ಗಮನಕ್ಕೆ ಬಂದಿದೆ.
ಶನಿವಾರ (ಜ 5) ನಡೆದ ಬಿಜೆಪಿ ಸಭೆಯಲ್ಲಿ ಯಡಿಯೂರಪ್ಪ ಆಪ್ತ ಸಚಿವರುಗಳಾದ ಶೋಭಾ, ಉದಾಸಿ, ಬಸವರಾಜ್ ಬೊಮ್ಮಾಯಿ, ರೇಣುಕಾಚಾರ್ಯ ಮುಂತಾದವರು ಭಾಗವಹಿಸಿರಲಿಲ್ಲ.
ಈ ಸಂದರ್ಭದಲ್ಲಿ ಶೋಭಾ ಇತ್ತೀಚೆಗೆ ಗೃಹ ಸಚಿವಾಲಯದ ವಿರುದ್ದ ನೀಡಿದ ಹೇಳಿಕೆ, ಯಡಿಯೂರಪ್ಪ ಮೇಲಿನ ನಿಷ್ಠೆ, ದೇಣಿಗೆ ಸಂಗ್ರಹಣೆ ಮುಂತಾದ ಆಪಾದನೆಗಳಿವೆ. ತಕ್ಷಣವೇ ಅವರ ವಿರುದ್ದ ಕ್ರಮ ತೆಗೆದುಕೊಳ್ಳಿ ಎನ್ನುವ ಹಠಕ್ಕೆ ಬಹಳಷ್ಟು ಸಚಿವರು ಬಿದ್ದಿದ್ದರು ಎನ್ನಲಾಗಿದೆ.
ಒಂದು ಹಂತದಲ್ಲಿ ಶೋಭಾ ವಿರುದ್ದ ಕ್ರಮ ತೆಗೆದುಕೊಂಡು ಯಡಿಯೂರಪ್ಪಗೆ ಶಾಕ್ ನೀಡಲು ಬಿಜೆಪಿ ನಿರ್ಧರಿಸಿದ್ದರೂ, ದುಡುಕದೇ ಹೆಜ್ಜೆ ಇಡಲು ನಿರ್ಧರಿಸಿದ್ದಾರೆನ್ನಲಾಗಿದೆ.
ಹಾಗಾಗಿ ತಾಜಾ ಬೆಳವಣಿಗೆಯ ಪ್ರಕಾರ ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಲೆದಂಡ ಸದ್ಯಕ್ಕಿಲ್ಲ, ಅಥವಾ ಇಲ್ಲವೇ ಇಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications