ಜ್ಞಾನಭಾರತಿ: 6 ರೇಪಿಸ್ಟ್ ವಿರುದ್ಧ ಗೂಂಡಾ ಕಾಯ್ದೆ ಜಾರಿ

ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ವಿರುದ್ಧ ಭುಗಿಲೆದ್ದಿರುವ ಆಕ್ರೋಶದ ಬಿಸಿಯಲ್ಲಿ ಧೈರ್ಯ ತಂದುಕೊಂಡಿರುವ ಬೆಂಗಳೂರು ಪೊಲೀಸರು ಎಲ್ಲ ಏಳೂ ಆರೋಪಿಗಳ ವಿರುದ್ಧ (ಒಬ್ಬ ಬಾಲ ಅತ್ಯಾಚಾರಿಯ ಹೊರತುಪಡಿಸಿ) ಗೂಂಡಾ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಿದ್ದಾರೆ.
ಕುತೂಹಲದ ಸಂಗತಿಯೆಂದರೆ Goonda Act ಅಂದರೆ Karnataka Prevention of Dangerous Activities of Bootleggers, Drug Offenders, Gamblers, Goondas, Immoral Traffic Offenders and Slum Grabbers Act, 1985 ಅನುಸಾರ ರೇಪಿಸ್ಟುಗಳ ವಿರುದ್ಧ ಗೂಂಡಾ ಕಾಯಿದೆ ಜಾರಿಗೊಳಿಸುವಂತಿಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ರೇಪಿಸ್ಟುಗಳ ವಿರುದ್ಧದ ಈ ಗೂಂಡಾ ಪ್ರಕರಣ ಊರ್ಜಿತವಾಗದು. ಆದರೂ ಯಾವ ಪುರುಷಾರ್ಥಕ್ಕೆ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂಬುದು ಕುತೂಹಲಕಾರಿಯಾಗಿದೆ.
ಆದರೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗೂಂಡಾ ಕಾಯ್ದೆಯನ್ನು ಅನ್ಚಯಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿಜೆ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಾದ ಯಳಯಯ್ಯ, ರಾಜ (ತಲೆಮರೆಸಿಕೊಂಡಿರುವವ), ಮದ್ದೂರಯ್ಯ, ಶಿವಣ್ಣ, ದೊಡ್ಡ ಈರಯ್ಯ ಹಾಗೂ ರಾಮನಗರ ತಾಲೂಕಿನ ರಾಮ ವಿರುದ್ಧ ಗೂಂಡಾ ಕಾಯ್ದೆ ಬಳಸಲು ಮಿರ್ಜಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ರಾಜನ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದಾಗಿ ಮಿರ್ಜಿ ಹೇಳಿದ್ದಾರೆ. ರಾಜನ ಬಂಧನಕ್ಕೆ ಪೊಲೀಸರ ತನಿಖೆ ಮುಂದುವರೆದಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಸಬೇಕೊ, ಬೇಡವೋ ಎಂಬುದು ಇನ್ನೂ ಚರ್ಚೆಯ ಹಂತದಲ್ಲೇ ಇರುವಾಗ, ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡಲು ಗೂಂಡಾ ಕಾಯ್ದೆ ಬಳಕೆಗೆ ನಗರ ಪೊಲೀಸ್ ಆಯುಕ್ತರು ಆದೇಶಿಸಿರುವುದು ನಿಜಕ್ಕೂ ಶ್ಲಾಘನೀಯ. ಕಾಯ್ದೆ ಪ್ರಕಾರ ಆರೋಪಿಗಳು ಒಂದು ವರ್ಷಗಳ ಜಾಮೀನು ರಹಿತ ಜೈಲು ವಾಸ ಅನುಭವಿಸಲಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications