ಟಿವಿ ನಿರೂಪಕಿಯರೂ ಅತ್ಯಾಚಾರಕ್ಕೆ ಕಾರಣಕರ್ತರು

'ಕೆಲ ಟಿವಿ ಆ್ಯಂಕರ್ಗಳು ತೊಡುವ ಬಟ್ಟೆ, ಅವರ ಹಾವಭಾವ ನೋಡಿದರೆ ಅವರೂ ಕೂಡ ಅತ್ಯಾಚಾರಕ್ಕೆ ಕಾರಣಕರ್ತರೇ ಎಂಬ ಅನುಮಾನ ಬರುತ್ತದೆ' ಎಂದು ಆಯನೂರು ಮಂಜುನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬುಧವಾರ ಶಿವಮೊಗ್ಗ ನಗರದ ಡಿವಿಎಸ್ ರಂಗಮಂದಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡವ ವೇಳೆ ಆಯನೂರು ಮಂಜುನಾಥ್ ಈ ವಿವಾದಾಸ್ಪದ ಮಾತು ಹೇಳಿದ್ದಾರೆ. ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಅದರಲ್ಲಿಯೂ ಕೆಲ ಕಾರ್ಯಕ್ರಮಗಳ ಟಿವಿ ಆ್ಯಂಕರ್ಗಳನ್ನು ನೋಡಿದರೆ ಅವರು ಕೂಡ ಅತ್ಯಾಚಾರಕ್ಕೆ ಕಾರಣಕರ್ತರೇ? ಎಂಬ ಅನುಮಾನ ಕಾಡುತ್ತದೆ. ಕಾರ್ಯಕ್ರಮ ನೋಡುವವರು ಕಾರ್ಯಕ್ರಮ ಬಿಟ್ಟು ಅವರನ್ನೇ ನೋಡುವಂತಾಗಿರುತ್ತದೆ ಎಂದು ಆ್ಯಂಕರ್ಗಳು ತೊಡುವ ಬಟ್ಟೆಯ ಕುರಿತಂತೆ ಆಯನೂರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.
ವಸ್ತ್ರ ಸಂಹಿತೆಯ ಕುರಿತಂತೆ ನಾನಿಲ್ಲಿ ಮಾತನಾಡುತ್ತಿಲ್ಲ. ಯಾವ ರೀತಿಯ ಬಟ್ಟೆ ಹಾಕಿಕೊಳ್ಳಬೇಕು ಎಂಬುದರ ಕುರಿತಂತೆ ಹೇಳಲು ಹೋಗುವುದಿಲ್ಲ. ಆದರೆ ನಾವು ಹಾಕಿಕೊಳ್ಳುವ ಬಟ್ಟೆಯ ಕುರಿತಂತೆ ಅರಿವು ಇರಬೇಕು ಎಂದು ಮಾರ್ಮಿಕವಾಗಿ ಆಯನೂರು ಹೇಳಿದರು.
'ಮಹಿಳೆಯರೇ, ರಾತ್ರಿ ವೇಳೆ ಅಡ್ಡಾಡಬೇಡಿ. ಪುರುಷರನ್ನು ಪ್ರಚೋದಿಸುವ ಉಡುಪು ಧರಿಸಬೇಡಿ. ಮಕ್ಕಳನ್ನು ಧಾರ್ಮಿಕ ಕಟ್ಟುಪಾಡಿನಲ್ಲಿ ಬೆಳೆಸಿದರೆ ಅತ್ಯಾಚಾರ ಆಗೋಲ್ಲ. ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸಿದ್ದರಿಂದಲೇ ಅತ್ಯಾಚಾರ ಹೆಚ್ಚಾಗುತ್ತಿರುವುದು' ಎಂದೆಲ್ಲ ಮಾತೆ ಮಹಾದೇವಿ ಈ ಹಿಂದೆ ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications