ಸುಪ್ರೀಂಕೋರ್ಟಿನಲ್ಲಿ ಶಂಕರ್ ಬಿದರಿಗೆ ಜಯ

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಫ್ತಾಬ್ ಆಲಂ ಮತ್ತು ನ್ಯಾ. ಸಿ.ಕೆ. ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಮಾಜಿ ಡಿಜಿ ಐಜಿಪಿ ಶಂಕರ್ ಬಿದರಿ ಅವರ ಪರವಾಗಿ ತೀರ್ಪು ನೀಡಿದ್ದು, ಬಿದರಿ ಅವರಿಂದ ಯಾವುದೇ ಮಾನವ ಹಕ್ಕು ಉಲ್ಲಂಘನೆ ಆಗಿಲ್ಲ, ಅವರನ್ನು ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಅನರ್ಹರನ್ನಾಗಿ ಮಾಡಿದ್ದು ತಪ್ಪು ಎಂದು ತೀರ್ಪು ನೀಡಿದೆ.
ತೀರ್ಪ ಹೊರಬಿದ್ದ ಮೇಲೆ ಮಾಧ್ಯಮಗಳೊಂದಿಗೆ ತಮ್ಮ ಸಂತಸ ಹಂಚಿಕೊಂಡ ಶಂಕರ್ ಬಿದರಿ ಅವರು, ಇದು ಸತ್ಯಕ್ಕೆ ಸಂದ ಜಯ. ಇದು ನನಗೆ ಮಾತ್ರವಲ್ಲ ನನ್ನ ಜೊತೆ ಹೋರಾಟ ಮಾಡಿ ಅಸುನೀಗಿದ 150ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಕಾನ್ಸ್ಟೇಬಲ್ಗಳು, ಅರಣ್ಯ ಸಿಬ್ಬಂದಿಗಳಿಗೆ ಸಿಕ್ಕ ಜಯ. ಈ ಜಯದಿಂದ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆಂದು ಭಾವಿಸುತ್ತೇನೆ ಎಂದು ಭಾವುಕರಾಗಿ ಕಣ್ಣೀರುಗರೆದರು.
ಸೇವಾ ಹಿರಿತನ ಮತ್ತು ಉತ್ತಮ ಸೇವಾ ದಾಖಲೆಗಳ ಆಧಾರದ ಮೇಲೆ ಇನ್ಫಾಂಟ್ ಅವರಿಗೆ ಸಿಗಬೇಕಿದ್ದ ಸ್ಥಾನವನ್ನು ಸ್ವಜನಪಕ್ಷಪಾತ ಮಾಡಿ ಶಂಕರ್ ಬಿದರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ನಂತರ ನಡೆದ ಕಾನೂನಿನ ಹೋರಾಟದಲ್ಲಿ ಶಂಕರ್ ಬಿದರಿ ಅವರಿಗೆ ಸೋಲಾಗಿತ್ತು.
ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿದರಿ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಯಾವುದೇ ಗುರುತರ ಆರೋಪಗಳು ಇಲ್ಲವೆಂದು ಸದಾಶಿವ ಆಯೋಗದ ವರದಿ ತಿಳಿಸಿದ್ದರೂ ತಮ್ಮ ಮೇಲೆ ಕ್ರಮ ಜರುಗಿಸಲಾಗಿತ್ತು, ನೋಟೀಸ್ ಕೂಡ ನೀಡದೆ ತಮ್ಮ ಹುದ್ದೆಯನ್ನು ಕಿತ್ತಹಾಕಲಾಗಿತ್ತು ಎಂದು ಅವರು ಆರೋಪಿಸಿದ್ದರು.
ಈಗ ಸಿಕ್ಕಿರುವ ಜಯದಿಂದ ತಮಗೆ ತುಂಬಾ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ. ಇದು ನಿರ್ಭೀತಿಯಿಂದ, ನಿಷ್ಪಕ್ಷಪಾತದಿಂದ ಭಯೋತ್ಪಾದಕರ, ದುಷ್ಟಶಕ್ತಿಗಳ ವಿರುದ್ಧ ಹೋರಾಡುತ್ತಿರುವ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸಿಕ್ಕ ಜಯ ಎಂದು ಅವರು ಬಣ್ಣಿಸಿದ್ದಾರೆ. ನನಗೆ ಈಗ ಕೂಡ ಯಾರ ಮೇಲೂ ದ್ವೇಷವಿಲ್ಲ ಎಂದು ಅವರು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications