ಇನ್ನು 3 ತಿಂಗಳಿಗೊಮ್ಮೆ ಸಬ್ಸಿಡಿ LPG ದರ 50ರೂ ಏರಿಕೆ

ಅದೂ ಹತ್ತಲ್ಲ, ಐವತ್ತಲ್ಲ ಬರೋಬ್ಬರಿ ನೂರು ರೂ. ಏರಲಿದೆ. ಇದು ಸಂಕ್ರಾಂತಿ ಕೊಡುಗೆ. ಅಡುಗೆ ಅನಿಲ ಸಿಲಿಂಡರ್ಗೆ ರೂ. 100 ಮತ್ತು ಡೀಸೆಲ್ ಲೀಟರ್ ಗೆ ರೂ. 4.50 ಏರಿಕೆಯಾಗಬಹುದು ಎನ್ನಲಾಗಿದೆ.
ಆತಂಕದ ವಿಷಯವೆಂದರೆ, ವಿತ್ತ ಸಚಿವಾಲಯವು ದೇಶದ ಮೇಲೆ 160,000 ಕೋಟಿ ರೂ. ಆರ್ಥಿಕ ಹೊರೆ ಬಿದ್ದಿದೆ. ಇದೇ ವೇಳೆ ತೈಲ ಕಂಪನಿಗಳು ಒಂದೇ ಸಮನೆ ಕೋಟ್ಯಂತರ ರೂ. ನಷ್ಟ ಅನುಭವಿಸುತ್ತಿವೆ. ಆ ನಷ್ಟವನ್ನು ಸರಿಗಟ್ಟುವವರೆಗೂ ಸಬ್ಸಿಡಿ ಸಿಲಿಂಡರ್ ದರವನ್ನು ಸತತವಾಗಿ ತ್ರೈಮಾಸಿಕ ದರದಲ್ಲಿ ಅಂದರೆ ಮೂರು ತಿಂಗಳಿಗೊಮ್ಮೆ 50 ರೂ. ಏರಿಕೆ ಮಾಡುವ ಪ್ರಸ್ತಾಪವನ್ನೂ ಮುಂದಿಟ್ಟಿದೆ.
ಆದರೆ ಇದ್ದುದರಲ್ಲೇ ಒಂದು ಸಮಾಧಾನದ ಸಂಗತಿಯೆಂದರೆ ಬೆಲೆ ಹೆಚ್ಚಳಕ್ಕೆ ಒಪ್ಕೋತ್ತೀವಿ. ಆದರೆ ಈಗ ಸರಬರಾಜು ಮಾಡುತ್ತಿರುವ ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 6/12 ರಿಂದ 9/12ಕ್ಕೆ ಏರಿಕೆ ಮಾಡಬೇಕು ಎಂಬ ಖಡಕ್ ಷರತ್ತನ್ನು ಪೆಟ್ರೋಲಿಯಂ ಸಚಿವಾಲಯವು ಸಂಪುಟದ ಮುಂದಿಟ್ಟಿದೆ ಎನ್ನಲಾಗಿದೆ.
ರೈಲು ಪ್ರಯಾಣ ದರ ಹೆಚ್ಚಳವನ್ನು 'ಅತ್ಯಂತ ಸಮಂಜಸ ಆರ್ಥಿಕ ನಡೆ' ಎಂದು ಬಣ್ಣಿಸಿದ ವಿತ್ತ ಸಚಿವ ಚಿದಂಬರಂ ಈಗ ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಹೆಚ್ಚಿಸುವ ತರಾತುರಿಯಲ್ಲಿದ್ದಾರೆ. ಮೊನ್ನೆಯಷ್ಟೇ ರೈಲು ಪ್ರಯಾಣ ದರ ಹೆಚ್ಚಿಸಿ ಕೈತೊಳೆದುಕೊಂಡಿರುವ ಕೇಂದ್ರ ಸರಕಾರ, ಮುಂದಿನ ವಾರದಲ್ಲಿ LPG ದರವನ್ನೂ ಹೆಚ್ಚಿಸುವ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ಖಚಿತಪಡಿಸಿವೆ.
ಸರಕಾರವು ಎರಡು ವರ್ಷಗಳಲ್ಲಿ ಜಿಡಿಪಿಯನ್ನು ಶೇ. 8ಕ್ಕೆ ಏರಿಸಲು ನಿರ್ಧರಿಸಿದೆ. ಅದಕ್ಕಾಗಿ ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಿದೆ. ಒಂದೆರಡು ವಾರಗಳಲ್ಲಿ ತೈಲೋತ್ಪನ್ನ ಬೆಲೆ ಏರಿಕೆಯ ನಿರ್ಧಾರ ಕೈಗೊಳ್ಳಲಾಗುವುದು ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯ ಸುಳಿವು ನೀಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications