ಬಾಲಗಂಗಾಧರನಾಥ ಸ್ವಾಮೀಜಿ ತೀವ್ರ ಅಸ್ವಸ್ಥ

ಕೆಲ ವರ್ಷಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಎಂದಿನಂತೆ ಡಯಾಲಿಸಿಸ್ ಗಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗಿತ್ತು. ಭಾನುವಾರ (ಜ.13) ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡು ಬಂದಿದೆ.
ಡಯಾಲಿಸಿಸ್ ನಂತರ ಸ್ವಾಮೀಜಿಗಳು ಚಿಕಿತ್ಸೆಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಆದರೆ, ಇವತ್ತು ಸ್ವಾಮೀಜಿಗಳ ರಕ್ತದೊತ್ತಡದಲ್ಲಿ ತೀವ್ರವಾಗಿ ಏರುಪೇರು ಕಂಡು ಬಂದಿದೆ.
ಸದ್ಯಕ್ಕೆ ತೀವ್ರ ನಿಗಾ ಘಟಕದಲ್ಲಿ ಸ್ವಾಮೀಜಿ ಅವರಿಗೆ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿಷದಪಡಿಸಲಾಗುತ್ತದೆ ಎಂದು ಬಿಜಿಎಸ್ ಆಸ್ಪತ್ರೆ ವಕ್ತಾರರು ಹೇಳಿದರು.
ಗಣ್ಯರ ಕಳವಳ: ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆ ಕಡೆಗೆ ಗಣ್ಯರ ದಂಡು ಹರಿದು ಬರುತ್ತಿದೆ. ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರು ಆಸ್ಪತ್ರೆಗೆ ಧಾವಿಸಿ, ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಸಿ.ಎನ್ ಮಂಜುನಾಥ್, ಸಚಿವ ಸೋಮಣ್ಣ, ಸಂಸದ ಚೆಲುವರಾಯ ಸ್ವಾಮಿ ಕೂಡಾ ಆಸ್ಪತ್ರೆ ಬಳಿ ಕಾಣಿಸಿಕೊಂಡಿದ್ದಾರೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ವೈದ್ಯರೊಡನೆ ಸತತ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಈ ಕ್ಷಣದ ಮಾಹಿತಿ ಪ್ರಕರಣ ಶ್ರೀಗಳ BP ನಿಯಂತ್ರಣಕ್ಕೆ ತರಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಬೆಳಗಾವಿ-ಧಾರವಾಡ ಪ್ರವಾಸವನ್ನು ಮೊಟಕುಗೊಳಿಸಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಡೆಗೆ ಧಾವಿಸುತ್ತಿರುವ ಸುದ್ದಿ ಸಿಕ್ಕಿದೆ.
ಈ ಸಂದರ್ಭದಲ್ಲಿ ಜನರು ತಾಳ್ಮೆಯಿಂದಬೇಕು. ಸ್ವಾಮೀಜಿಗಳ ಆರೋಗ್ಯ ಸುಧಾರಿಸುತ್ತಿದೆ. ಶಿಷ್ಯರು, ಅಭಿಮಾನಿ ವರ್ಗಗಳ ಶುಭ ಹಾರೈಕೆಯಿಂದ ಸ್ವಾಮೀಜಿಗಳು ಚೇತರಿಸಿಕೊಳ್ಳುತ್ತಾರೆ ಎಂದು ಸಂಸದ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಸ್ವಾಮೀಜಿಗಳದ್ದು ತಾಯಿ ಹೃದಯ. ನಮ್ಮನ್ನೆಲ್ಲ ಬೆಳೆಸಿದವರು. ಅವರ ಸಾಧನೆ ಹಿರಿದಾದುದು. ಎಲ್ಲಾ ವರ್ಗದ ಏಳಿಗೆಗಾಗಿ ಶ್ರಮಿಸುತ್ತಿರುವ ಮಹಾನ್ ಚೇತನ ಎಂದು ಸಚಿವ ವಿ ಸೋಮಣ್ಣ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications