ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ ವಿಧಿವಶ

ಎದೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಗಳನ್ನು ಶನಿವಾರ (ಜ.12) ಚಿಕಿತ್ಸೆಗಾಗಿ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಭಾನುವಾರ ರಕ್ತದೊತ್ತಡ ಹೆಚ್ಚಾಗಿ ತೀವ್ರ ಅಸ್ವಸ್ಥರಾಗಿ ಸಂಜೆ 7 ಗಂಟೆ ವೇಳೆಗೆ ಮತ್ತೊಮ್ಮೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು ಎಂದು ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಡಾ. ವೆಂಕಟರಮಣ ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ಧಾರ್ಮಿಕ ಜಾಗೃತಿ ಮೂಡಿಸಿದ ಪೂಜ್ಯ ಸ್ವಾಮೀಜಿಗಳ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವುಂಟಾಗಿದೆ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಒದಗಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ನಮಗೆ ಮಾರ್ಗದರ್ಶಕರು ಇಲ್ಲದ್ದಂತಾಗಿದೆ. 5 ಕೋಟಿ ಸಸಿ ನೆಟ್ಟು ಹಸಿರು ಕ್ರಾಂತಿ ಹುಟ್ಟುಹಾಕಿದ್ದರು. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಅಂತಿಮ ಸಂಸ್ಕಾರ ವಿಧಿ: ಶಿಕ್ಷಣ ಕ್ಷೇತ್ರಕ್ಕೆ ಶ್ರೀಗಳು ನೀಡಿದ ಕೊಡುಗೆ ಅಪಾರ. ತಮಿಳುನಾಡು, ಕಾಶಿಯಲ್ಲೂ ಮಠ ಇದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದ್ದರು. ಬೆಂಗಳೂರಿನ ವಿಜಯನಗರ ಮಠದಲ್ಲಿ ರಾತ್ರಿ 9.30 ರಿಂದ ಸೋಮವಾರ ಬೆಳಗ್ಗೆ 9 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.
ಅಲ್ಲಿಂದ ಸಾರ್ವಜನಿಕ ಮೆರವಣಿಗೆ ಮೂಲಕ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ಸಂಜೆ 4 ಗಂಟೆಗೆ ನೆರವೇರಿಸಲಾಗುವುದು ಎಂದು ಗೃಹಸಚಿವ ಆರ್ ಅಶೋಕ್ ಹೇಳಿದರು.
ಕಳೆದ ನಾಲ್ಕು ವರ್ಷಗಳಿಂದ ಸ್ವಾಮೀಜಿ ಅವರಿಗೆ ಹಲವು ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ಕಿಡ್ನಿ, ಡಯಾಬಿಟಿಸ್, ಹೃದಯ ಸಂಬಂಧಿ ಕಾಯಿಲೆಗಳಿತ್ತು. ಬೈಪಾಸ್ ಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗಿದೆ. ಮೂರು ಬಾರಿ ಆಂಜಿಯೋಪಾಸ್ಟಿ ಸರ್ಜರಿ ಮಾಡಲಾಗಿತ್ತು.
ಗಂಗಾಧರಯ್ಯ ಎಂಬ ಮೂಲ ನಾಮ ಹೊಂದಿದ್ದ ಬಾಲಗಂಗಾಧರನಾಥ ಸ್ವಾಮೀಜಿಗಳು, ಚಿಕ್ಕಲಿಂಗೇಗೌಡ ಹಾಗೂ ಬೋರಮ್ಮ ಅವರ ಪುತ್ರರಾಗಿ 1945ರಲ್ಲಿ ಜನವರಿ 18 ರಂದು ಬಾನಂದೂರಿನಲ್ಲಿ ಜನಿಸಿದರು.
1968ರಲ್ಲಿ ಬೆಂಗಳೂರಿನ ಕೈಲಾಸ ಆಶ್ರಮದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು. 1974ರ ಸೆ.24ರಂದು ಭೈರವ ಕ್ಷೇತ್ರ ಆದಿಚುಂಚನಗಿರಿಯ 71ನೇ ಪೀಠಾಧ್ಯಕ್ಷರಾದರು. ಆದಿಚುಂಚನಗಿರಿ ಟ್ರಸ್ಟ್ ಹೆಸರಿನಲ್ಲಿ ಶಾಲೆ, ಕಾಲೇಜು, ಆಸ್ಪತ್ರೆ, ಪರಿಸರ ಸಂರಕ್ಷಣೆ, ಪ್ರಾಣಿ ಸಂರಕ್ಷಣೆ, ವೇದ್ಯಾಧ್ಯಯನ, ಸೇರಿದಂತೆ ಹಲವಾರು ಸಾಮಾಜಿಕ ಕಳಕಳಿ ಚಟುವಟಿಕೆಯಲ್ಲಿ ಬಾಲಗಂಗಾಧರ ಸ್ವಾಮೀಜಿಗಳು ತೊಡಗಿದ್ದರು. ಭಾರತದ ಮೂರನೇ ಅತಿದೊಡ್ಡ ನಾಗರೀಕ ಗೌರವವಾದ ಪದ್ಮಭೂಷಣ ಪ್ರಶಸ್ತಿಗೆ ಶ್ರೀಗಳು 2010ರಲ್ಲಿ ಭಾಜನರಾಗಿದ್ದರು. ಅಪಾರ ಪ್ರಮಾಣದ ಭಕ್ತ ಸಮೂಹವನ್ನು ಶ್ರೀಗಳು ಅಗಲಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications