ಟಿಪ್ಪು ವಿವಿ ಉಗ್ರರ ಅಡಗುತಾಣವಾಗುವ ಭಯವಿದೆ

ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಉದ್ದೇಶಿತ ಟಿಪ್ಪು ವಿಶ್ವವಿದ್ಯಾಲಯ ಸ್ಥಾಪನೆಗೆ ಗೆ ಯಾವುದೇ ಸಹಕಾರ ನೀಡುವುದಿಲ್ಲ. ಟಿಪ್ಪು ವಿವಿ ಸ್ಥಾಪಿಸಿದರೆ ಉಗ್ರಗಾಮಿಗಳ ಕೇಂದ್ರವಾಗಲಿದೆ. ಈಗಾಗಲೇ ಆಲಿಗಢ ಉಗ್ರರ ತಾಣವಾಗಿದೆ ಎಂದು ಗೋ ಮಧುಸೂದನ್ ಅಭಿಪ್ರಾಯಪಟ್ಟಿದ್ದಾರೆ.
ಟಿಪ್ಪು ಹೆಸರು ಕೈಬಿಡುವುದಿಲ್ಲ: ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ವಿಶ್ವ ವಿದ್ಯಾಲಯಕ್ಕೆ ಟಿಪ್ಪುಸುಲ್ತಾನ್ ಹೆಸರನ್ನು ಇಡಲಾಗುವುದು ಇದರಿಂದ ಹಿಂದೆ ಸರಿಯುವ ಮಾತಿಲ್ಲ. ಉದ್ದೇಶಿತ ಯೋಜನೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ.ರೆಹಮಾನ್ ಖಾನ್ ಹೇಳಿದ್ದಾರೆ.
ಟಿಪ್ಪು ವ್ಯಕ್ತಿತ್ವ ಹಾಗೂ ಹೋರಾಟ ಕುರಿತು ಸರಿಯಾಗಿ ಅರಿಯದೆ ಕೆಲವರು ವಿರೋಧ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ.ಟಿಪ್ಪು ಹೆಸರಿಗೆ ವಿರೋಧ ಮಾಡುತ್ತಿರುವವರ ಜತೆ ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಸಚಿವ ಖಾನ್ ತಿಳಿಸಿದರು.
ದೇಶಕ್ಕೆ ಟಿಪ್ಪು ಕೊಡುಗೆ ಅನನ್ಯ. ಮಕ್ಕಳನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ. ಮೊಟ್ಟಮೊದಲಿಗೆ ಕ್ಷಿಪಣಿಗಳನ್ನು ಜಗತ್ತಿಗೆ ಕೊಟ್ಟವನು. ಇಂಥ ವ್ಯಕ್ತಿ ಹೆಸರನ್ನು ವಿವಿಗೆ ಇಡುವುದಕ್ಕೆ ವಿರೋಧ ಮಾಡುತ್ತಿರುವುದು ನೋವು ತಂದಿದೆ ಎಂದು ರೆಹಮಾನ್ಖಾನ್ ವಿಷಾದಿಸಿದರು.
ಟಿಪ್ಪು ಸುಲ್ತಾನ್ ಈ ದೇಶ ಕಂಡ ಅಪ್ರತಿಮ ದೇಶಭಕ್ತ. ಟಿಪ್ಪು ಬಗ್ಗೆ ಟೀಕಿಸುವವರು ಆತನ ಇತಿಹಾಸವನ್ನೊಮ್ಮೆ ಅವಲೋಕಿಸಿ ನೋಡಲಿ. ಮುಸ್ಲಿಮರನ್ನು ಬಿಟ್ಟು ಈ ದೇಶ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ಟಿಪ್ಪು ವಿಶ್ವ ವಿದ್ಯಾನಿಲಯ ಸ್ಥಾಪನೆ ಆಗಬೇಕು ಎಂದು ಜ್ಞಾನಪೀಠ ಪುರಸ್ಕೃತ ಡಾ.ಯು.ಆರ್.ಅನಂತಮೂರ್ತಿ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದಕ್ಕೂ ಮುನ್ನ, ಟಿಪ್ಪು ಕ್ರೂರಿ, ಅನ್ಯಧರ್ಮ ದ್ವೇಷಿ ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡ ವಿರೋಧಿಯಾಗಿದ್ದ
ಅವರನ್ನು ಹೊಗಳುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ. ಆತ ಕನ್ನಡಿಗರ ಪರ ಇರಲಿಲ್ಲ. ವ್ಯಾಪಾರಿ ಮನೋಭಾವದಿಂದ ಸಮಾಜ ಸುಧಾರಣೆ ಮುಂದಾಗಿದ್ದ ಅಷ್ಟೇ.
ಮೇಲುಕೋಟೆ, ಶ್ರೀರಂಗಪಟ್ಟಣ, ಶೃಂಗೇರಿ ಮಠ, ನಂಜನಗೂಡು ದೇಗುಲಗಳಿಗೆ ದಾನ ದತ್ತಿ ನೀಡಿರುವ ಹಿಂದೆ ರಾಜಕೀಯ ಉದ್ದೇಶವಿತ್ತು. ಹೀಗಾಗಿ ಆತನ ಹೆಸರು ವಿವಿಗೆ ಇಡಬಾರದು ಎಂದು ಚಿದಾನಂದ ಮೂರ್ತಿ ಆಗ್ರಹಿಸಿದ್ದಾರೆ. ಟಿಪ್ಪು ಹೆಸರಿನ ಬದಲು ಅಬ್ದುಲ್ ಕಲಾಂ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವುದು ಸೂಕ್ತ ಎಂದು ಇತಿಹಾಸಕಾರ ಚಿದಾನಂದ ಮೂರ್ತಿ ಅಭಿಪ್ರಾಯಪಟ್ಟಿದ್ದರು.,
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications