ನರಸೀಪುರದಲ್ಲಿ ಜ.20ರಂದು ಮಾದಿಗರ ಸಮಾವೇಶ

ಜಾತಿವಾರು ಪ್ರಾತಿನಿಧ್ಯದಲ್ಲಾಗುತ್ತಿರುವ ವಂಚನೆ ಪರಿಹರಿಸುವ ಪ್ರತೀಕವಾದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಜಾರಿಗೆ ಆಗ್ರಹಿಸಲು ಮಾದಿಗ ಸಮುದಾಯದ ಲಕ್ಷ ಲಕ್ಷ ಮಂದಿ ನರಸೀಪುರದಲ್ಲಿ ಸಮಾಗಮಗೊಳ್ಳುತ್ತಿದ್ದಾರೆ. ಜನವರಿ 20ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನರಸೀಪುರದ ವಿದ್ಯೋದಯ ಕಾಲೇಜು ಮೈದಾನದಲ್ಲಿ ನಡೆಯುವ ಮಾದಿಗರ ಮಹಾಸಮಾವೇಶದ ಮೂಲಕ ಒಕ್ಕೊರಲ ಧ್ವನಿ ಮೊಳಗಲಿದೆ.
ರಾಜ್ಯದಲ್ಲಿ ದಲಿತ ಚಳವಳಿ ಅತಿ ಎತ್ತರಕ್ಕೆ ಬೆಳೆದ ಕಾಲಘಟ್ಟದಲ್ಲಿಯೇ ಮಾದಿಗರ ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜಕೀಯ ಅವಕಾಶಗಳು ನಾಪತ್ತೆಯಾಗಲಾರಂಭಿಸಿದವು. ಕೀಳುಮಟ್ಟದ ಜಾತಿ ರಾಜಕಾರಣದಂತಹ ಅಧಃಪತನ ತಪ್ಪಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಅಗತ್ಯ. ಈ ವರದಿ ಶಿಫಾರಸು ಜಾರಿಯಾಗದ ಹೊರತು ಮಾದಿಗ ಸಮುದಾಯಕ್ಕೆ ಉಳಿಗಾಲವಿಲ್ಲ ಎನ್ನುವುದು ಮನವರಿಕೆಯಾಗಿದೆ. ಮಾದಿಗರು ಸ್ವಾಭಿಮಾನದಿಂದ ಮೈಕೊಡವಿ ನಿಂತಿದ್ದಾರೆ. ಈ ಬೃಹತ್ ಸಮಾವೇಶದ ಮೂಲಕ ಸದಾಶಿವ ಆಯೋಗ ಜಾರಿಗಾಗಿ ದಿಟ್ಟ ಹೋರಾಟಕ್ಕೆ ಮುಂದಡಿ ಇಟ್ಟಿದ್ದಾರೆ. ಇದನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡುವುದೇ ಸಮಾವೇಶದ ಉದ್ದೇಶ.
ಸಂಸ್ಕೃತಿ ವೈಭವ : ಈ ಮಧ್ಯೆ, ಸಮಾವೇಶಕ್ಕೂ ಮುನ್ನ ಮಾತಂಗ ಪರಂಪರೆಯ ಸಂಸ್ಕೃತಿ ವೈಭವವನ್ನೂ ಮೆರೆಸುವ ನೂರಾರು ತಮಟೆ ವಾದ್ಯಗಳು, ಕುರುಬನಕಟ್ಟೆ ಮೆರವಣಿಗೆ ಹಾಗೂ ಜಾನಪದ ಮೇಳ ಕೂಡ ಇಲ್ಲಿ ನಡೆಯಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಗೋವಿಂದ ಎಂ. ಕಾರಜೋಳ ಅವರು ಈ ಸಂಸ್ಕ್ರತಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪಟ್ಟಣದ ನವೋದಯ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಎನ್.ರಾಚಯ್ಯ ಬೃಹತ್ ವೇದಿಕೆಯಲ್ಲಿ ಈ ಮಹಾಸಮಾವೇಶ ನಡೆಯಲಿದೆ.
ಕೇಂದ್ರ ಸಣ್ಣ ಕೈಗಾರಿಕಾ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಅದ್ದೂರಿ ಸಮಾರಂಭವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸುವರು. ಈ ಸಂದರ್ಭದಲ್ಲಿ ಬಾಬು ಜಗಜೀವನರಾಮ್ ಅವರ ಭಾವಚಿತ್ರವನ್ನು ಸಮಾಜಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅನಾವರಣಗೊಳಿಸುವರು. ಎನ್.ರಾಚಯ್ಯ ಅವರ ಭಾವಚಿತ್ರವನ್ನು ಮಾಜಿ ಶಾಸಕ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅನಾವರಣ ಮಾಡುವರು. ಬಿಎಸ್.ಆರ್. ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಉಪಸ್ಥಿತರಿರುವರು.
ಬೊಪ್ಪೇಗೌಡನಪುರ ಶ್ರೀಮಂಟೇಸ್ವಾಮಿ ಮಠದ ಶ್ರೀ ಪ್ರಭುದೇವರಾಜೇ ಅರಸ್, ಮಲೈ ಮಹದೇಶ್ವರ ಬೆಟ್ಟದ ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿಗಳು, ವಾಟಾಳು ಸೂರ್ಯಸಿಂಹಾಸನ ಮಠದ ಶ್ರೀ ಸಿದ್ಧಗಂಗಾ ಶಿವಾಚಾರ್ಯ ಸ್ವಾಮಿಗಳು, ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಕೋಡಿಹಳ್ಳಿ ಹರಳಯ್ಯ ಗುರುಪೀಠದ ಶ್ರೀ ಮಾರ್ಕಾಂಡೇಯ ಮುನಿಸ್ವಾಮೀಜಿ ಹಾಗೂ ಅಂಗೀಕಟ್ಟಿ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಪ್ರೊ.ಎಚ್.ಗೋವಿಂದಯ್ಯ, ಬಿಎಸ್ಆರ್ ಕಾಂಗ್ರೆಸ್ ಮುಖಂಡ ಸಂಪತ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸುಧಾ ಮಹದೇವಯ್ಯ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಸಂಪರ್ಕ ದಿನೇಶ್ ಕುಮಾರ್ - 9739426166
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications