ಹೌಹಾರಿದ KSRTC: ಬಸ್ ದರದಲ್ಲಿ ಭಾರೀ ಏರಿಕೆ?

ಆದರೆ ಐಒಸಿಯಿಂದ ಬಿಲ್ ಬಂದಾಗ ಒಂದು ಕ್ಷಣ ದಂಗಾದೆವು ಎಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಹೇಳಿಕೆ ನೀಡುವ ಮೂಲಕ ಬಸ್ ಪ್ರಯಾಣದ ದರದಲ್ಲಿ ಭಾರೀ ಪ್ರಮಾಣದ ಏರಿಕೆಯ ಬಗ್ಗೆ ಸಂಸ್ಥೆ ಸ್ಪಷ್ಟ ಮುನ್ಸೂಚನೆ ನೀಡಿದೆ.
ಸಗಟು ಡೀಸೆಲ್ ದರದ ಬೆಲೆಯನ್ನು ಕೇಂದ್ರ ಸರಕಾರ ಏಕಾಏಕಿ ಲೀಟರ್ ವೊಂದಕ್ಕೆ ಸುಮಾರು 12 ರೂಪಾಯಿಯಷ್ಟು ಹೆಚ್ಚಿಸಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ವಾರ್ಷಿಕ 630 ಕೋಟಿ ಹೊರೆಯಾಗಲಿದೆ.
ಈ ಹೊರೆಯನ್ನು ಸಾರ್ವಜನಿಕರ ಮೇಲೆ ವರ್ಗಾಯಿಸುವ ಸಾಧ್ಯತೆ ದಟ್ಟವಾಗಿದ್ದು ಇಂದಿನಿಂದಲೇ (ಜ 19) ಪರಿಷ್ಕೃತ ದರ ಜಾರಿಗೊಳ್ಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.
ಕೇಂದ್ರ ಸರಕಾರದ ಹೊಸ ಕಾನೂನು: ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಬಳಸುವ ಬಳಕೆದಾರರಿಗೆ ಮಾರುಕಟ್ಟೆ ಬೆಲೆಯಲ್ಲಿ ಇಂಧನ ಪೂರೈಸುವಂತೆ ಕೇಂದ್ರ ಸರಕಾರ ಗುರುವಾರ (ಜ 17) ಎಲ್ಲಾ ತೈಲ ಕಂಪನಿಗಳಿಗೆ ಆದೇಶ ನೀಡಿತ್ತು.
ಹೊಸ ಆದೇಶವನ್ನು ತೈಲ ಕಂಪೆನಿಗಳು ಶುಕ್ರವಾರದಿಂದಲೇ (ಜ 18) ಜಾರಿಗೆ ತಂದಿತ್ತು. ಇದರನ್ವಯ ರಾಜ್ಯ ಸಾರಿಗೆ ಸಂಸ್ಥೆ ಪ್ರತಿ ಲೀಟರ್ಗೆ 11.90 ಪೈಸೆ ಹೆಚ್ಚುವರಿ ದರ ಪಾವತಿಸಿ ಡೀಸೆಲ್ ಖರೀದಿಸುವುದು ಅನಿವಾರ್ಯವಾಗಿದೆ.
ಇದನ್ನು ಸರಿದೂಗಿಸಲು ಪ್ರಯಾಣ ದರವನ್ನು ಪ್ರತಿ ಕಿ.ಮೀಗೆ 15ರಿಂದ 20 ಪೈಸೆ ಹೆಚ್ಚಿಸದೆ ಬೇರೆ ದಾರಿಯಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ.
ಕಳೆದ ಸೆಪ್ಟಂಬರ್ ನಲ್ಲಿ ಡೀಸೆಲ್ ಬೆಲೆ ಏರಿಕೆಯಾಗಿದ್ದಾಗ ಬಸ್ ದರದಲ್ಲಿ ಹೆಚ್ಚಳವಾಗಿತ್ತು. ಮತ್ತೆ ಬಸ್ ದರದಲ್ಲಿ ಏರಿಕೆ ಮಾಡುಲು ಅದೂ ಚುನಾವಣೆಯ ಸಮಯದಲ್ಲಿ ಸಾರಿಗೆ ಸಚಿವ ಅಶೋಕ್ ಹಿಂದೇಟು ಹಾಕುತಿದ್ದಾರೆ ಎನ್ನಲಾಗುತ್ತಿದೆ.
ಆದರೂ ಸಾರಿಗೆ ಸಂಸ್ಥೆ ಆರ್ಥಿಕವಾಗಿ ಮುಗ್ಗರಿಸದೇ ಇರುಲು ದರ ಹೆಚ್ಚಿಳ ಅನಿವಾರ್ಯ ಎನ್ನುವುದು ಸಂಸ್ಥೆಯ ಹಿರಿಯ ಅಧಿಕಾರಿಗಳ ಹೇಳಿಕೆ.
ಎರಡು ಮೂರು ರೂಪಾಯಿ ಹೆಚ್ಚಾದಾಗಲೇ ಬಿಟ್ಟಿಲ್ಲ, ಇನ್ನು 12 ರೂಪಾಯಿ ಜಾಸ್ತಿ ಆದರೆ ದರ ಹೆಚ್ಚಿಸದೇ ಬಿಡ್ತಾರಾ ಎನ್ನುವುದು ಜನಸಾಮಾನ್ಯರ ಮಾತು.
ರೈಲ್ವೆ ಇಲಾಖೆ : ಡೀಸೆಲ್ ದರ ಗಣನೀಯವಾಗಿ ಹೆಚ್ಚಳವಾಗಿರುವುದರಿಂದ ರೈಲ್ವೆ ಇಲಾಖೆಗೆ ವಾರ್ಷಿಕ 2700 ಕೋಟಿ ರೂಪಾಯಿ ಹೊರೆಯಾಗಲಿದೆ. ರೈಲ್ವೆ ಇಲಾಖೆ ಲೀಟರ್ಗೆ 10.80 ರೂಪಾಯಿ ಹೆಚ್ಚು ಪಾವತಿಸಬೇಕಾಗಿದ್ದು, ಇದರಿಂದ ದರ ಏರಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications