ಜ.28, 29 ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೆ

ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಸ್ವಾಮೀಜಿಗಳ ಸಮಾಧಿಗೆ ಮೂರು ಸುತ್ತಿನ ಚಿನ್ನದ ಲೇಪನ ಮಾಡಲಾಗುತ್ತದೆ. ಸಮಾಧಿ ನಿರ್ಮಾಣಕ್ಕೆ ಸುಮಾರು 10 ಕೋಟಿ ರು ವೆಚ್ಚ ಮಾಡಲಾಗುತ್ತಿದೆ ಎಂದು ನಿರ್ಮಲಾನಂಥನಾಥ ಸ್ವಾಮೀಜಿ ಹೇಳಿದರು.
ಆರ್ ಅಶೋಕ್ ಹೇಳಿಕೆ: ಶ್ರೀಬಾಲಗಂಗಾಧರನಾಥರು ಮಠಾಧೀಶರಾಗಿ 38 ವರ್ಷಗಳ ಕಾಲ ಸಮಾಜಕ್ಕೆ ನೀಡಿದ ಸಾಧನೆಗಳನ್ನು ಈ ಎರಡು ದಿನಗಳ ವಿಶಿಷ್ಟ ಕಾರ್ಯಕ್ರಮದ ಮೂಲಕ ಭಕ್ತವೃಂದಕ್ಕೆ ಪರಿಚಯಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಹೇಳಿದರು.
ಶ್ರೀನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಬರುವ ನಿರೀಕ್ಷೆ ಇದೆ ಎನ್ನಲಾಗಿದೆ.
ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಧ್ಯಾತ್ಮಿಕ ಜೀವನದ ವಸ್ತುಪ್ರದರ್ಶನ, ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಸೇರಿದಂತೆ ಇನ್ನಿತರ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳು ನೆರವೇರಲಿವೆ. ಜತೆಗೆ ಶ್ರೀಗಳ ಪುಣ್ಯತಿಥಿಯೂ ವಿಧಿ-ವಿಧಾನೋಕ್ತವಾಗಿ ಜರುಗಲಿದೆ.
ಸೂಚನೆ: ಸ್ವಾಮೀಜಿಗಳ ವೈವಿಧ್ಯಮಯ ಸೇವೆಯನ್ನು ಪ್ರತಿಬಿಂಬಿಸುವ ಛಾಯಾಚಿತ್ರಗಳು ಬಳಿ ಇದ್ದರೆ ತಪ್ಪದೆ ಶ್ರೀಮಠಕ್ಕೆ ಕಳುಹಿಸುವಂತೆ ಕೋರಲಾಗಿದೆ. ವಸ್ತು ಪ್ರದರ್ಶನ ಸಂದರ್ಭದಲ್ಲಿ ಫೋಟೊ ದಾನಿಗಳ ಹೆಸರು, ವಿಳಾಸ ಪ್ರಕಟಿಸಲಾಗುವುದು.
ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: ಶ್ರೀಆದಿಚುಂಚನಗಿರಿ ಮಠ, ವಿಜಯನಗರ, ಬೆಂಗಳೂರು -560 040
ಇಮೇಲ್: [email protected], ಫೋಟೋ ಕಳಿಸಲು ಕೊನೆ ದಿನಾಂಕ 22/01/2013
ಸ್ವಾಮೀಜಿ ಅವರು ದೈವಾಧೀನರಾದ ವೇಳೆ ಪಾರ್ಥೀವ ಶರೀರದ ಅಂತಿಮ ದರ್ಶನದ ಭಾಗ್ಯ ಸಿಗದ ದೇಶ-ವಿದೇಶದ ಬಹಳಷ್ಟು ಭಕ್ತರು ಅಂದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಸ್ವಾಮೀಜಿ ಅವರು ಕೊನೆಯ ಉಸಿರಿರುವವರೆಗೂ ಮಠ, ಸಮಾಜ ಹಾಗೂ ಮಕ್ಕಳ ಶಿಕ್ಷಣದ ಬಗ್ಗೆ ಚಿಂತನೆ ನಡೆಸುತ್ತಿದ್ದ ಮಹಾನ್ ಚೇತನ ಎಂದು ಗುಣಗಾನ ಮಾಡಿದ್ದಾರೆ. ಸ್ವಾಮೀಜಿಯವರ ಕೊನೆಯ ದಿನಗಳಲ್ಲಿ ನಾನು ಅವರನ್ನು ಭೇಟಿ ಮಾಡಲು ಹೋಗಿದ್ದೆ.
ಆ ಸಂದರ್ಭದಲ್ಲಿ ಸ್ವಾಮೀಜಿ, ಮಠದ ವಿಚಾರ, ಸಮಾಜದಲ್ಲಿರುವ ಸಾಮಾನ್ಯ ಜನರ ಬದುಕು ಹಾಗೂ ಮಕ್ಕಳ ಶಿಕ್ಷಣವನ್ನು ಹೊರತುಪಡಿಸಿ ಬೇರೆ ಯಾವ ವಿಚಾರವನ್ನೂ ಪ್ರಸ್ತಾಪಿಸಲಿಲ್ಲ. ಇದರಿಂದಾಗಿ ಸ್ವಾಮೀಜಿ ಅವರ ಸಾಮಾಜಿಕ ಕಳಕಳಿ ಹಾಗೂ ಮಕ್ಕಳ ಮೇಲಿನ ಪ್ರೀತಿ ಎಷ್ಟೆಂಬುದು ಅರ್ಥವಾಗುತ್ತದೆ ಎನ್ನುತ್ತಾ ಸ್ವಾಮೀಜಿ ಅವರೊಂದಿಗೆ ಕಳೆದ ಕಡೆಯ ಕ್ಷಣಗಳನ್ನು ಸ್ಮರಿಸಿ ಭಾವುಕರಾದರು.
ಸಭೆಯಲ್ಲಿ ಸಮಾಜದ ಮುಖಂಡರಾದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ, ಎಚ್. ಡಿ. ಕುಮಾರಸ್ವಾಮಿ, ಸಂಸದ ಚೆಲುವರಾಯಸ್ವಾಮಿ, ಸಚಿವ ಜೀವರಾಜ್, ಸಿ.ಪಿ. ಯೋಗೀಶ್ವರ್, ಸಿ.ಟಿ. ರವಿ, ನಟ ಅಂಬರೀಶ್, ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಎಚ್.ಎನ್. ಕೃಷ್ಣ, ಗೃಹಮಂಡಳಿ ಅಧ್ಯಕ್ಷ ಜಿ.ಟಿ.
ದೇವೇಗೌಡ, ಶಾಸಕರಾದ ಎಚ್.ಸಿ. ಬಾಲಕೃಷ್ಣ, ಎಂ.ಕೃಷ್ಣಪ್ಪ, ಸಿ.ಎಸ್. ಪುಟ್ಟರಾಜು, ಅಶ್ವತ್ಥನಾರಾಯಣ, ಕೆ.ರಾಜು, ರಮೇಶ್ ಬಂಡಿ ಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ರಾಮಕೃಷ್ಣ, ಅಶ್ವತ್ಥನಾರಾಯಣ್, ವಿಧಾನಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ, ಕರವೇ ಅಧ್ಯಕ್ಷ ಟಿ.ನಾರಾಯಣಗೌಡ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications