ಆಸ್ತಿ ತೆರಿಗೆ ನೋಟಿಸ್ ಗೆ ವಿಪ್ರೋ ಉತ್ತರಿಸಿಲ್ಲ

ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ನೋಟಿಸ್ ಗೆ ಸರಿಯಾಗಿ ಉತ್ತರಿಸಿದ ವಿಪ್ರೋ, ನಾವು ತೆರಿಗೆ ಬಾಕಿ ಉಳಿಸಿಕೊಂಡಿಲ್ಲ. ಎಲ್ಲಾ ತೆರಿಗೆ ಕಟ್ಟಿದ್ದೇವೆ ಎಂದು ಹೇಳಿಕೆ ನೀಡಿದೆ.
ಕೆ.ಆರ್. ಹೋಬಳಿಯ ದೊಡ್ಡಕನ್ನೆಲ್ಲಿ ಗ್ರಾಮದಲ್ಲಿರುವ ವಿಪ್ರೋ ಕೇಂದ್ರ ಕಚೇರಿ ಜಾಗಕ್ಕೆ ಪ್ರತಿ ಚದರ ಅಡಿಗೆ 20 ರು. ನಂತೆ ತೆರಿಗೆ ಕಟ್ಟುವಂತೆ ವಿಪ್ರೋ ಸಂಸ್ಥೆಗೆ ಬಿಬಿಎಂಪಿ ಸೂಚಿಸಿತ್ತು.
ಆದರೆ, 2008-09 ನಿಂದ 2012-13ರವರೆಗಿನ ಲೆಕ್ಕಾಚಾರದಂತೆ ವಿಪ್ರೋ ಸಂಸ್ಥೆ 19,28,50,815 ಮೊತ್ತ ಬಾಕಿ ಉಳಿಸಿಕೊಂಡಿದೆ. ಪ್ರತಿ ತಿಂಗಳಿಗೆ ಶೇ 2 ರಷ್ಟು ಬಡ್ಡಿದರದಂತೆ ಬಾಕಿ ಮೊತ್ತ ಪಾವತಿಸಬೇಕಿದೆ ಎಂದು ಬಿಬಿಎಂಪಿ ಹೇಳಿದೆ.
ಆದರೆ, ಬಿಬಿಎಂಪಿ ನೋಟಿಸ್ ಗೆ ತಕ್ಕ ಉತ್ತರ ನೀಡಿರುವ ವಿಪ್ರೋ ಸಂಸ್ಥೆ ಮುಖ್ಯ ಆರ್ಥಿಕ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಸೇನಾಪತಿ, ತೆರಿಗೆ ಗೊಂದಲ ಉಂಟಾಗಿರುವ ವಿಪ್ರೋ ಕೇಂದ್ರ ಇರುವುದು ವಿಶೇಷ ಆರ್ಥಿಕ ವಲಯ(SEZ)ದಲ್ಲಿ, ಹಾಗೂ ಅಲ್ಲಿ ಅನೇಕರಿಗೆ ಮಾಹಿತಿ ಮತ್ತು ತಂತ್ರಜ್ಞಾನ ಸೇವೆ ಒದಗಿಸಲಾಗುತ್ತಿದೆ.
ಎಲ್ಲಾ ರೀತಿಯ ತೆರಿಗೆಗಳನ್ನು ಪಾವತಿಸಲಾಗಿದೆ. ಆದರೆ, ಬಿಬಿಎಂಪಿ ಅವರು ಇನ್ನೂ ಹೆಚ್ಚಿನ ಮೊತ್ತ ಪಾವತಿಸಿ ಎಂದು ಏಕೆ ಕೇಳುತ್ತಿದ್ದಾರೋ ಗೊತ್ತಿಲ್ಲ. ಬಿಬಿಎಂಪಿ ಕಂದಾಯ ವಿಭಾಗದವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ತಮಟೆ ಬಡಿತಕ್ಕೆ 5 ಕೋಟಿ ರು : ಕಳೆದ 5 ವರ್ಷಗಳಿಂದ ತೆರಿಗೆ ಪಾವತಿಸದೆ ಸತಾಯಿಸುತ್ತಿದ್ದ ವಿಪ್ರೋ ಸಂಸ್ಥೆ ಮುಂದೆ ಬಿಬಿಎಂಪಿ ಕಡೆಯಿಂದ ತಮಟೆ ಬಾರಿಸಿ ಎಚ್ಚರಿಸಲಾಯಿತು. ನಂತರ ವಿಪ್ರೋ ಕಂಪನಿ ಅಧಿಕಾರಿಗಳು ಬಾಕಿ ಉಳಿದಿರುವ 19.28 ಕೋಟಿ ರು. ನಲ್ಲಿ, 5.00 ಕೋಟಿ ರೂ ಚೆಕ್ ನೀಡಿದರು. ಉಳಿದ ಮೊತ್ತವನ್ನು ಪಾವತಿಸಲು ಒಂದು ವಾರ ಕಾಲಾವಕಾಶ ಕೋರಿದ್ದರು. ಆದರೆ, ಈಗ ಬಾಕಿ ಮೊತ್ತದ ಬಗ್ಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ 2010 ರಲ್ಲಿ ಕೃಷ್ಣರಾಜ ಪುರಂ ಹೋಬಳಿಯ ಬೆಳ್ಳಂದೂರು ಕೆರೆಯ ಬಳಿ ಇರುವ ಕೆಂಪಾಪುರದಲ್ಲಿ ಅಜೀಂ ಪ್ರೇಮ್ ಜಿ ಅವರು 23 ಗುಂಟ ಸರ್ಕಾರಿ ಜಾಗವನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಎ ಟಿ ರಾಮಸ್ವಾಮಿ ಸಮಿತಿ ನಡೆಸಿದ ತನಿಖೆಯಿಂದ ಅಕ್ರಮ ಬಹಿರಂಗಗೊಂಡಿದೆ. ವಿಪ್ರೋ ಮೇಲೆ ಕ್ರಮ ಜರುಗಿಸಿ ಎಂದು ವಕೀಲ ಸಂತೋಷ್ ಎಂಬುವರು ಪ್ರೇಂಜಿ ವಿರುದ್ಧ ದೂರು ಸಲ್ಲಿಸಿದ್ದರು.
ಆದರೆ, 2007ರಲ್ಲಿ ಕೆಲವೊಂದು ಉದ್ದೇಶಕ್ಕಾಗಿ 15 ಎಕರೆ ಭೂಮಿಯನ್ನು ಅಜೀಂ ಪ್ರೇಮ್ ಜೀ ಅವರು ಸ್ವಾಧೀನಪಡಿಸಿಕೊಂಡಿದ್ದರು. ಅದರಲ್ಲಿ 23 ಗುಂಟೆ ಜಮೀನು ಹೆಚ್ಚುವರಿಯಾಗಿ ಬಂದಿದ್ದರಿಂದ ಅದೇ ಸಾಲಿನಲ್ಲಿ ಹೆಚ್ಚುವರಿ ಜಮೀನನ್ನು ಸರ್ಕಾರಕ್ಕೆ ವಾಪಸ್ ಮಾಡಿದ್ದರು ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ವಕೀಲ ಸಂತೋಷ್ ಗೆ ಛೀಮಾರಿ ಹಾಕಿ ದಂಡ ವಿಧಿಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications