Get Updates
Get notified of breaking news, exclusive insights, and must-see stories!

ಮತಾಂತರವಾಗುವ ದಲಿತರಿಗೆ ಸರ್ಕಾರಿ ಸೌಲಭ್ಯ ಕಟ್

Narayana Swamy
ಕಾರವಾರ, ಜ 21: ಮತಾಂತರವಾಗುವುದನ್ನು ಬಿಜೆಪಿ ಸರಕಾರ ಪ್ರಭಲವಾಗಿ ವಿರೋಧಿಸುತ್ತದೆ. ಒಂದು ವೇಳೆ ದಲಿತರಿಗೆ ಸರಕಾರೀ ಸೌಲಭ್ಯ ಬೇಕೆಂದಾದಲ್ಲಿ ಮತಾಂತರ ಗೊಳ್ಳಬಾರದೆಂದು ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.

ಭಾನುವಾರ (ಜ 20) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಪ್ರಮುಖವಾಗಿ ದಲಿತ ಕುಟುಂಬದವರು ಕ್ರಿಶ್ಚಿಯನ್ ಧರ್ಮಗಳಿಗೆ ಮತಾಂತರ ಗೊಳ್ಳುತ್ತಿದ್ದಾರೆ.

ದಲಿತ ಕುಟುಂಬಗಳಿಗೆ ಎಸ್ಸಿ, ಎಸ್ಟಿ ಸೌಲಭ್ಯ ನೀಡಲಾಗುತ್ತದೆ. ಹೀಗೆ ಮತಾಂತರಗೊಂಡ ಕುಟುಂಬಕ್ಕೆ ಕೊಡುತ್ತಿರುವ ಸರಕಾರೀ ಸೌಲಭ್ಯಗಳನ್ನು ಹಿಂದಕ್ಕೆ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಸರಕಾರದ ವ್ಯಾಪ್ತಿಗೆ ಬರುವ ಜಮೀನುಗಳನ್ನು ವಸತಿಹೀನರಿಗೆ ಹಂಚಲಾಗುವುದು. ಈ ಸಂಬಂಧ ನ್ಯಾಯಾಲಯದ ಮಾರ್ಗದರ್ಶನ ಪಡೆಯಲಾಗುತ್ತಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಕುಮ್ಕಿ ಜಮೀನು ರಾಜ್ಯ ಸರಕಾರದ ಅಧೀನದ್ದು. ಇದು ಅರಣ್ಯ ಇಲಾಖೆಯ ಸುಪರ್ದಿಗೆ ಬರುವುದಿಲ್ಲ.

ಸೂಕ್ತ ಕಾನೂನಿನಡಿ ಸದ್ಯದಲ್ಲೇ ಸರಕಾರ ಈ ಜಮೀನುಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಲಿದೆ.

ಈ ಜಮೀನನ್ನು ಸರಕಾರ ತನ್ನ ವಶಕ್ಕೆ ತೆಗೆದುಕೊಂಡ ನಂತರ ವಸತಿಹೀನರಿಗೆ ಮನೆ ಕಟ್ಟಿಕೊಳ್ಳಲು ವಿತರಿಸಲಾಗುವುದು ಎಂದು ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+