ಅತ್ಯಾಚಾರ: ಅಶ್ಲೀಲ ವೆಬ್ ಸೈಟುಗಳ ನಿಷೇಧ?

ಈ ಮಧ್ಯೆ, ಇಂತಹ ಕುಕೃತ್ಯಗಳಿಗೆ ಕುಮ್ಮಕ್ಕು ನೀಡುವ ಅಶ್ಲೀಲ ವೆಬ್ ಸೈಟ್ಗಳನ್ನು ನಿಷೇಧಿಸಬೇಕು ಎಂಬ ಕೂಗೂ ಎದ್ದಿದೆ. ತತ್ಸಂಬಂಧ ಅರ್ಜಿಯೊಂದು ಬಂದಿದ್ದು, ಈ ಸಂಬಂಧ ಅಭಿಪ್ರಾಯ ತಿಳಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಶನಿವಾರ ಸೂಚಿಸಿದೆ.
ಮುಖ್ಯ ನ್ಯಾಯಾಧೀಶೆ, ಕರ್ನಾಟಕದ ಮಂಜುಳಾ ಚೆಲ್ಲೂರು ಮತ್ತು ನ್ಯಾ. ಕೆ ವಿನೋದ್ ಚಂದ್ರನ್ ಅವರ ವಿಭಾಗೀಯ ಪೀಠವು ವಕೀಲ ಮನೋರಂಜನ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಮೊಕದ್ದಮೆಯನ್ನು ವಿಚಾರಣೆಗೊಳಪಡಿಸಿ ಈ ಆದೇಶ ನೀಡಿದೆ.
ಅಶ್ಲೀಲ ವೆಬ್ ಸೈಟುಗಳು ಮಹಿಳೆಯರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಉತ್ತೇಜನ ನೀಡುತ್ತವೆ ಎನ್ನುವುದು ಅಮೆರಿಕದ ಮನಃಶಾಸ್ತ್ರ ತಜ್ಞ ವಿಕ್ಟರ್ ಬಿ ಕ್ಲೈನ್ ಅವರು ನಡೆಸಿರುವ ಅಧ್ಯಯನದಿಂದ ದೃಢಪಟ್ಟಿದೆ.
ಇಂತಹ ಕೃತ್ಯಗಳನ್ನು ಎಸಗಿರುವ ವ್ಯಕ್ತಿಗಳನ್ನು ಅಧ್ಯಯನಕ್ಕೊಳಪಡಿಸಿದಾಗ ಅವರು ಲೈಂಗಿಕ ವೆಬ್ ಸೈಟ್ ಗಳು ತಮ್ಮ ಮೇಲೆ ಪ್ರಭಾವ ಬೀರಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಮನೋರಂಜನ್ ಮೊಕದಮೆಯಲ್ಲಿ ವಿವರಿಸಿದ್ದಾರೆ.
ಲೈಂಗಿಕ ವಿಚಾರಗಳನ್ನೊಳಗೊಂಡಿರುವ ವೆಬ್ ಸೈಟ್ ಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲದಿರುವುದರಿಂದ ಅವುಗಳನ್ನು ಪತ್ತೆಹಚ್ಚಿ, ನಿಷೇಧಿಸಬೇಕು ಎಂದು ಅವರು ಕೋರಿದ್ದಾರೆ. ಅಶ್ಲೀಲ ವೆಬ್ ಸೈಟ್ ವೀಕ್ಷಣೆ ನಾಲ್ಕು ಹಂತಗಳಲ್ಲಿರುತ್ತದೆ.
ನಾಲ್ಕನೆಯ ಮತ್ತು ಕೊನೆಯ ಹಂತಕ್ಕೆ ತಲುಪಿದ ವ್ಯಕ್ತಿ ಕಾಮಪೀಡಿತನಾಗಿ ಅಪರಾಧ ಕೃತ್ಯಗಳಲ್ಲಿ ತೊಡಗುತ್ತಾನೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications