ಯಡಿಯೂರಪ್ಪ ಋಣ ತೀರಿಸಲು ರಾಜೀನಾಮೆ, ಶೋಭಾ

ರಾಜಕೀಯವಾಗಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಯಡಿಯೂರಪ್ಪ ಅವರ ಋಣ ಸಂದಾಯ ಮಾಡಬೇಕಾಗಿದೆ. ಅದಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪಕ್ಷದಲ್ಲಿ ನನಗಾಗುತ್ತಿರುವ ನೋವನ್ನು, ಅವಮಾನವನ್ನು RSS ಮುಖಂಡರಿಗೆ ಈಗಾಗಲೇ ವಿವರಿಸಿದ್ದೇನೆ. ನಾನೊಬ್ಬ ಹಳ್ಳಿಯಿಂದ ಬಂದ ಪಕ್ಷದ ಸಾಮಾನ್ಯ ಕಾರ್ಯಕರ್ತೆ.
ನನ್ನನ್ನು ಗುರುತಿಸಿ ಸಚಿವೆಯನ್ನಾಗಿ ಮಾಡಿದ ಯಡಿಯೂರಪ್ಪನವರ ಹೊಸ ಪಕ್ಷವನ್ನು ಬಲ ಪಡಿಸುವುದೇ ನನ್ನ ಮುಂದಿನ ಗುರಿ ಎಂದು ರಾಜೀನಾಮೆ ನೀಡಿದ ನಂತರ ಶೋಭಾ ಭಾವೋದ್ವೇಗಕ್ಕೆ ಒಳಗಾಗಿ ನುಡಿದರು.
ರಾಜ್ಯಕ್ಕೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆಯಿದೆ. ಜನರಿಗೆ ರಾಷ್ಟ್ರೀಯ ಪಕ್ಷದ ಮೇಲೆ ನಂಬಿಕೆ ಕಮ್ಮಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆಜೆಪಿ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ.
ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ (ಕೆಜೆಪಿ) ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಶೋಭಾ ಹೇಳಿದರು.
ಸುಮಾರು 40 ವರ್ಷಗಳಿಂದ ಯಡಿಯೂರಪ್ಪನವರು ಬಿಜೆಪಿಗಾಗಿ ದುಡಿದರು. ಬಿಜೆಪಿಯಿಂದ ಅವರಿಗೆ ತುಂಬಾ ಅನ್ಯಾಯವಾಗಿದೆ.
ಈ ಎಲ್ಲಾ ಕಾರಣಗಳಿಂದ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶೋಭಾ ಸ್ಪಷ್ಟ ಪಡಿಸಿದರು.












Click it and Unblock the Notifications