ರಾಜೀನಾಮೆ ಸ್ವೀಕೃತವಾದರೆ ಮುಂದೆ ಏನಾಗಲಿದೆ?

ಈ ಬೃಹನ್ನಾಟಕವನ್ನು ಮತ ಹಾಕಿರುವ ರಾಜ್ಯದ ಮತಬಾಂಧವರು ಟಿವಿಯಲ್ಲೋ, ಇಂಟರ್ನೆಟ್ಟಿನಲ್ಲೋ ಗಮನಿಸುತ್ತಿದ್ದಾರೆ. ಇದೇನಪ್ಪ ನಾವು ಆರಿಸಿ ಕಳಿಸಿದ ಜನಪ್ರತಿನಿಧಿಗಳು ಇದೇನು ಮಾಡುತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ಏನು ಮಾಡಬೇಕೆಂದು ಲೆಕ್ಕಾಚಾರ ಹಾಕುತ್ತಿದ್ದಾರೆ.
ಈ ನಡುವೆ, ಜಗದೀಶ್ ಶೆಟ್ಟರ್ 'ಲಜ್ಜೆಗೆಟ್ಟ' ಸರಕಾರ ಮುಂದುವರಿಯಲು ಬಿಡುವುದಿಲ್ಲ, ಫೆ.8ರಂದು ರಾಜ್ಯ ಬಜೆಟ್ ಮಂಡಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಹಠ ತೊಟ್ಟಿರುವ ಕೆಜೆಪಿ ಅಧ್ಯಕ್ಷ ಯಡಿಯೂರಪ್ಪನವರು ತಮ್ಮ ದಂಡಿನೊಂದಿಗೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿಯಾಗಿದ್ದಾರೆ. ಏಕೆಂದರೆ, ರಾಜೀನಾಮೆ ಪತ್ರಿ ಸ್ವೀಕರಿಸಲು ಸ್ಪೀಕರ್ ಕೆಜಿ ಬೋಪಯ್ಯ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಪರಿಸ್ಥಿತಿ ಹೀಗಿರುವಾಗ ರಾಜ್ಯಪಾಲರು ಶೆಟ್ಟರ್ ಸರಕಾರಕ್ಕೆ ಬಹುಮತ ಸಾಬೀತುಪಡಿಸಲು ಕೇಳುತ್ತಾರಾ? ಗೊತ್ತಿಲ್ಲ. ಆದರೆ, ಎಲ್ಲ ಪಕ್ಷಗಳು ಹೊಂದಿರುವ ಬಲಾಬಲಗಳತ್ತ ಒಂದು ನೋಟ ಹರಿಸಿಬಿಡೋಣ. ಸದನ ಸದಸ್ಯರ ಒಟ್ಟು ಸಂಖ್ಯೆ 224. ಇದರಲ್ಲಿ ಯಡಿಯೂರಪ್ಪ ಮತ್ತು ಹಾಲಾಡಿ ಶ್ರೀನಿವಾಸ ಶೆಟ್ಟರು ರಾಜೀನಾಮೆ ನೀಡಿರುವುದರಿಂದ ಒಟ್ಟು ಸಂಖ್ಯೆ 222ಕ್ಕೆ ಇಳಿದಿದೆ.
ಪಕ್ಷಗಳ ಬಲಾಬಲ ಹೀಗಿದೆ
ಬಿಜೆಪಿ - 118 (ಸ್ಪೀಕರ್ + 1 ಪಕ್ಷೇತರ)
ಕಾಂಗ್ರೆಸ್ - 71
ಜೆಡಿಎಸ್ - 26
ಪಕ್ಷೇತರ + ಬಿಎಸ್ಆರ್ ಕಾಂಗ್ರೆಸ್ - 7
ಖಾಲಿ ಇರುವುದು - 2
ಈಗ ಕೆಜೆಪಿ ಬೆಂಬಲಿಸುತ್ತಿರುವ 13 ಶಾಸಕರು ನೀಡುತ್ತಿರುವ ರಾಜೀನಾಮೆ ಸ್ವೀಕೃತವಾದರೆ ಬಿಜೆಪಿಯ ಬಲ 105ಕ್ಕೆ ಕುಸಿಯುತ್ತದೆ ಮತ್ತು ಸದನದ ಒಟ್ಟು ಸದಸ್ಯರ ಸಂಖ್ಯೆ 209ಕ್ಕೆ ಇಳಿಯಲಿದೆ. ಒಂದು ವೇಳೆ ರಾಜ್ಯಪಾಲರು ಶೆಟ್ಟರ್ ಅವರಿಗೆ ಬಹುಮತ ಸಾಬೀತುಪಡಿಸಲು ಕೋರಿದರೆ ಸರಕಾರ ಉಳಿಸಿಕೊಳ್ಳಲು (104) ಇಷ್ಟು ಬಲ ಸಾಕು.
ಒಂದು ವೇಳೆ 13ಕ್ಕಿಂತ ಹೆಚ್ಚು ಶಾಸಕರು ಬಿಜೆಪಿಯನ್ನು ಬಿಟ್ಟರೆ ಬಿಜೆಪಿ ಸರಕಾರ ತೊಂದರೆಗೆ ಸಿಲುಕುವುದು ಖಚಿತ. ಇದೂ ಕೂಡ ಉಳಿದ ಪಕ್ಷಗಳು ಯಾವ ಪಕ್ಷದ ಪರ ಮತ ಹಾಕಲಿವೆ ಎಂಬುದರ ಮೇಲೆ ಅವಲಂಬಿತವಾಗುತ್ತದೆ. ಬಿಜೆಪಿ ಸರಕಾರವನ್ನು ಬೀಳಿಸುವ ಯಡಿಯೂರಪ್ಪ ಯತ್ನಕ್ಕೆ ಜೆಡಿಎಸ್ ಸಹಕಾರ ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಕಾಂಗ್ರೆಸ್ ನಡೆ ಇನ್ನೂ ನಿಗೂಢ. ಜೆಡಿಎಸ್ಸನ್ನು ನಂಬುವಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ಖಂಡಿತ ಇಲ್ಲ.
ಫೆ.4ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆ.8ಕ್ಕೆ ಶೆಟ್ಟರ್ ಅವರು ಬಜೆಟ್ ಮಂಡಿಸುವುದು ಶತಃಸಿದ್ಧ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಸರಕಾರ ಬಹುಮತ ಕಳೆದುಕೊಂಡಿದೆ ಎಂಬುದು ರಾಜ್ಯಪಾಲರಿಗೆ ಮನವರಿಕೆಯಾದರೆ ಈ ಅಧಿವೇಶನದಲ್ಲಿ ಬಿಜೆಪಿ ಸರಕಾರಕ್ಕೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಕೋರಬಹುದು. ಈ ಸಂಖ್ಯಾಬಲ ಇಷ್ಟೇ ಇರುತ್ತದೆ ಎಂದು ಹೇಳಲಾಗುವುದಿಲ್ಲ.
ಸದ್ಯಕ್ಕೆ 13 ಶಾಸಕರು ರಾಜೀನಾಮೆ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಅನೇಕರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇಂಥ ಸಮಯದಲ್ಲಿ ಸ್ಪೀಕರ್ ವಿದೇಶ ಪ್ರವಾಸಕ್ಕೆ ಮತ್ತು ಮುಖ್ಯಮಂತ್ರಿ ಉತ್ತರ ಕರ್ನಾಟಕ ಪ್ರವಾಸಕ್ಕೆ ತೆರಳಿದ್ದಾರೆ. ಅತ್ತಕಡೆ ಬಿಜೆಪಿ ಹೈಕಮಾಂಡ್ ತನಗೂ ಕರ್ನಾಟಕದ ಬಿಜೆಪಿ ವಿದ್ಯಮಾನಕ್ಕೂ ಸಂಬಂಧವಿಲ್ಲವೆಂಬಂತೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಇತ್ತಕಡೆ ರಾಜಕೀಯ ಪಂಡಿತರು ಮತ್ತು ಕಾನೂನು ತಜ್ಞರು ತಮ್ಮದೇ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications