ಬಾಲಕಿಯ ಮುಖವನ್ನು ಕಿತ್ತು ತಿಂದ ಬೀದಿ ನಾಯಿಗಳು

6 ವರ್ಷದ ಸಂಜನಾ ಎಂಬ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದು ಆಕೆಯನ್ನು ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪುಟ್ಟ ಬಾಲಕಿಯ ಗಲ್ಲ ಮತ್ತು ಕಣ್ಣುಗಳನ್ನು ಬೀದಿ ನಾಯಿಗಳು ಕಿತ್ತುಹಾಕಿವೆ. ಆರಂಭದಲ್ಲಿ ಚಿನ್ಮಯಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದ್ದು, ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಸಂಜನಾಳನ್ನು ದಾಖಲಿಸಲಾಗಿತ್ತು.
ಗುರುವಾರ ಸಂಜೆ 5 ಗಂಟೆಯ ಹೊತ್ತಿಗೆ ಮನೆಪಾಠಕ್ಕೆಂದು ಸಂಜನಾ ಮನೆಯಿಂದ ಹೊರಗೆ ಕಾಲಿಡುತ್ತಿದ್ದಂತೆ ಆಕೆಯ ಮೇಲೆ ಬೀದಿ ನಾಯಿಗಳು ಎರಗಿವೆ. ಆಕೆಯ ಕಿರುಚಾಟ ಕೇಳಿ ದಾರಿಹೋಕರು ನಾಯಿಗಳನ್ನು ಓಡಿಸಿದ್ದಾರೆ. ಆದರೆ, ಅಷ್ಟರಲ್ಲಿ ಸಂಜನಾಳ ಬಲಭಾಗದ ಗಲ್ಲ ಮತ್ತು ಎಡಭಾಗದ ಕಣ್ಣಿನ ಕೆಳಗಿನ ಭಾಗವನ್ನು ನಾಯಿಗಳು ಹರಿದು ತಿಂದಿದ್ದವು.
ಚಿನ್ಮಯಿ ಆಸ್ಪತ್ರೆಯ ನಂತರ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಲ್ಲಿ ಚಿಕಿತ್ಸೆ ಆರಂಭಿಸಲು ಮೂರು ಗಂಟೆ ತೆಗೆದುಕೊಂಡರು ಎಂದು ಪೋಷಕರು ಆರೋಪಿಸುತ್ತಾರೆ. ಅಲ್ಲದೆ, ಈ ಪ್ರದೇಶದಲ್ಲಿ ಬೀದಿ ನಾಯಿಗಳ ಉಪಟಳ ವಿಪರೀತ ಹೆಚ್ಚಾಗಿದ್ದು, ದೂರು ನೀಡಿದರೂ ಪ್ರಯೋಜನಕ್ಕೆ ಬಂದಿಲ್ಲ. ಈ ಘಟನೆ ನಡೆದ ಬಳಿಕವೂ ಪಾಲಿಕೆಯ ಯಾರು ಕೂಡ ಇತ್ತ ಸುಳಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸುತ್ತಾರೆ.
ನಗರದಲ್ಲಿ ಕಸ ವಿಲೇವಾರಿ ಸರಿಯಾದ ರೀತಿಯಲ್ಲಿ ಆಗದಿರುವುದು ಬೀದಿ ನಾಯಿಗಳ ಸಂಖ್ಯೆ ಮತ್ತು ಹಾವಳಿ ಹೆಚ್ಚಾಗುವಂತೆ ಮಾಡಿದೆ. ಬೆಳಗಿನ ಜಾವ ಮತ್ತು ರಾತ್ರಿಯ ಹೊತ್ತು ಜನರು ನಿರಾತಂಕವಾಗಿ ಅಡ್ಡಾಡದಂತಾಗಿದೆ. ಈ ಬಗ್ಗೆ ಪಾಲಿಕೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಹೀಗೆ ಅನಾಹುತಗಳು ಸಂಭವಿಸಿದ ಮೇಲೆಯೇ ಎಚ್ಚೆತ್ತುಕೊಂಡರೆ ಏನು ಪ್ರಯೋಜನ ಎಂದು ಸ್ಥಳೀಯ ನಾಗರಿಕರು ಪಾಲಿಕೆ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications