ಮುಂಬೈ ದಾಳಿ ರುವಾರಿ ಹೆಡ್ಲಿಗೆ 35 ವರ್ಷ ಶಿಕ್ಷೆ

ನಾನೀಗ ಸಂಪೂರ್ಣ ಬದಲಾಗಿದ್ದೇನೆ. ಬಾಂಬ್ ಸ್ಫೋಟದ ಸಂಚಿನಲ್ಲಿ ಭಾಗಿಯಾಗಿದ್ದು ನಿಜ ಎಂದು ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ ತಪ್ಪೊಪ್ಪಿಗೆ ನೀಡಿದ್ದರು. ಆದರೆ, ಹೆಡ್ಲಿ ಹೇಳಿಕೆ ವಿಶ್ವಾಸಕ್ಕೆ ಅರ್ಹವಲ್ಲ ಎಂದು ಪರಿಗಣಿಸಿದ ಶಿಕಾಗೋ ಫೆಡರಲ್ ನ್ಯಾ. ಹ್ಯಾರಿ ಲೆಯಿನ್ವೆಬರ್ ಅವರು ಮೇಲ್ಕಂಡ ಶಿಕ್ಷೆ ಪ್ರಕಟಿಸಿದರು.
ಈತ ಅಪರಾಧ ಎಸಗಿದ್ದಾನೆ, ಉಗ್ರರಿಗೆ ಸಹಾಯ ಮಾಡಿದ್ದಾನೆ, ಆತ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಾನೆ. ಈತ ಭಯೋತ್ಪಾದಕ ಎಂಬುದರಲ್ಲಿ ಸಂಶಯವಿಲ್ಲ ಎಂದು ನ್ಯಾ. ಹ್ಯಾರಿ ತಮ್ಮ ಆದೇಶದಲ್ಲಿ ಹೇಳಿದ್ದಾರೆ. ಆದರೆ, ಮರಣದಂಡನೆ ಹಾಗೂ ಜೀವಾವಧಿ ಶಿಕ್ಷೆಯಿಂದ ಹೆಡ್ಲಿ ಪಾರಾಗಿದ್ದಾರೆ.
ಹೆಡ್ಲಿಗೆ 12 ಅಪರಾಧಗಳ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಲಷ್ಕರ್ ಎ ತೋಯ್ಬಾಗೆ ಸಹಾಯ ಮಾಡಿದ ಆರೋಪವೂ ಸೇರಿದೆ. ಇದರೊಂದಿಗೆ ಸೇರಿ ಮುಂಬೈ ಮೇಲೆ ದಾಳಿ ನಡೆಸಿದ್ದ ಎಂಬ ಅಪರಾಧವೂ ಸೇರಿದೆ.
ಮುಂಬೈ ದಾಳಿ ಸಂಚು ರೂಪಿಸಲು ವ್ಯಾಪಾರಿ ವೇಷದಲ್ಲಿ ಹೆಡ್ಲಿ 5 ಬಾರಿ ಭಾರತಕ್ಕೆ ಬಂದಿದ್ದ. ಈತ ಉದ್ಯಮಿಯ ವೇಷ ಹಾಕಿಕೊಂಡು ದೇಶದೆಲ್ಲೆಡೆ ಸುತ್ತಾಡಿದ್ದ. ಇದನ್ನು ಆಧಾರವಾಗಿಟ್ಟುಕೊಂಡೇ ಉಗ್ರರು 2008ರ ನವೆಂಬರ್ 26 ರಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಇದರಲ್ಲಿ 166 ಮಂದಿ ಸಾವನ್ನಪ್ಪಿದ್ದರು. ಸೆರೆ ಹಿಡಿದಿದ್ದ ಕಸಬ್ನನ್ನು ಕಳೆದ ವರ್ಷ ನೇಣಿಗೇರಿಸಲಾಗಿತ್ತು.
2009ರಲ್ಲಿ ಹೆಡ್ಲಿ ಮತ್ತು ರಾಣಾನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. ಇವರಿಬ್ಬರ ಮೇಲೆ ಮುಂಬೈ ದಾಳಿ, ಡೆನ್ಮಾರ್ಕ್ನ ಕಾರ್ಟೂನಿಸ್ಟ್ ಮೇಲಿನ ದಾಳಿ ಆರೋಪದ ಮೇಲೆ ಬಂಧಿಸಲಾಗಿತ್ತು. ಇವರಿಬ್ಬರಲ್ಲಿ ಹೆಡ್ಲಿ ತಪ್ಪೊಪ್ಪಿಕೊಂಡ. ಶಿಕ್ಷೆ ಕಡಿಮೆಗೊಳಿಸಿದಲ್ಲಿ ಎಲ್ಲಾ ವಿವರ ನೀಡುವುದಾಗಿ ಹೇಳಿದ್ದ. ಈ ಸಂದರ್ಭದಲ್ಲಿ ಭಾರತಕ್ಕೆ ಹಸ್ತಾಂತರ ಮಾಡಬಾರದು ಎಂಬ ಷರತ್ತನ್ನೂ ವಿಧಿಸಿದ್ದ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications