ಗ್ಯಾಂಗ್ ಮನ್ ಗಳನ್ನು ಜಜ್ಜಿ ಮಾಡಿದ ರೈಲುಗಳು

ರೈಲ್ವೆ ಹಳಿಗಳ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದ 57 ವರ್ಷದ ಕದಿರೆಪ್ಪ ಹಾಗೂ ಅವರ ಸಹಾಯಕ ಬಿಹಾರ ಮೂಲದ 24 ವರ್ಷದ ಅರುಣ್ ಕುಮಾರ್ ಅವರ ಸಾವು ಇಲಾಖೆ ಪಾಠವಾಗಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ರೈಲ್ವೆ ನಿಲ್ದಾಣದ ಕೆಲವೆ ಮೀಟರ್ ಗಳ ಅಂತರದಲ್ಲಿ ಈ ರೀತಿ ದುರಂತ ಸಂಭವಿಸಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಪ್ಯಾಸೆಂಜರ್ ರೈಲು ಕಂಡ ಕಾರ್ಮಿಕರು ಪಕ್ಕದ ಹಳಿಗೆ ಬಂದು ನಿಂತಿದ್ದಾರೆ.
ಆದರೆ, ಅವರ ಲಕ್ ಚೆನ್ನಾಗಿರಲಿಲ್ಲ. ಅದೇ ಹಳಿ ಮೇಲೆ ಬೆಂಗಳೂರಿನಿಂದ ಬರುತ್ತಿದ್ದ ಮತ್ತೊಂದು ರೈಲು ಕಾಣಿಸಿಕೊಂಡಿದೆ. ಎರಡು ಹಳಿಗಳ ಮೇಲೆ ರೈಲು ಬರುತ್ತಿದ್ದರಿಂದ ಬೇರೆ ಮಾರ್ಗವಿಲ್ಲದೆ ಒಂದು ದಿಕ್ಕು ಹಿಡಿದು ಓಡಿದ್ದಾರೆ.
ಆದರೆ, ಎರಡು ಬದಿ ರೈಲು ಚಾಲಕರು ರೈಲು ನಿಯಂತ್ರಿಸಲು ಸಾಧ್ಯವಾಗದೆ ಇಬ್ಬರು ದುರ್ದೈವಿಗಳಿಗೆ ಡಿಕ್ಕಿ ಹೊಡೆಸಿದ್ದಾರೆ. ಹಳಿ ಬಿಟ್ಟು ಮಧ್ಯದಲ್ಲಿ ನಿಂತಿದ್ದರೆ ಇಬ್ಬರು ಬದುಕುಳಿಯುವ ಸಾಧ್ಯತೆ ಇತ್ತು. ಆದರೆ, ಎರಡು ಕಡೆ ಒಮ್ಮೆಗೆ ರೈಲು ಬರುತ್ತಿದ್ದರಿಂದ ಗಾಬರಿಗೊಂಡು ಪ್ರಾಣ ತೆತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಗರ ರೈಲ್ವೆ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೊಮ್ಮೆ ವಿರುದ್ಧ ದಿಕ್ಕಿನಿಂದ ಒಂದೆ ಹಳಿಯ ಮೇಲೆ ಬರುತ್ತಿದ್ದ ಎರಡು ರೈಲುಗಳು ಅದೃಷ್ಟವಶಾತ್ ಡಿಕ್ಕಿ ಹೊಡೆಯದೆ ಭಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದು, ಆಗ ಚಾಲಕರ ಸಮಯಪ್ರಜ್ಞೆ ಕಾಪಾಡಿತ್ತು. ಆದರೆ, ಈಗ ಇಬ್ಬರು ಕಾರ್ಮಿಕರು ದುರಂತ ಸಾವಿಗೀಡಾಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications