ಸರಕಾರಕ್ಕೇನೂ ಧಕ್ಕೆಯಿಲ್ಲ: ರಾಜನಾಥ್ ಗೆ ಮನವರಿಕೆ

No crisis in Karnataka BJP government asserts Jagadish Shettar
ನವದೆಹಲಿ, ಜ.28: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಕಳೆದ ವಾರ ಆಯ್ಕೆಗೊಂಡ ರಾಜನಾಥ್ ಸಿಂಗ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಅಭಿನಂದಿಸಿದ್ದಾರೆ. ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಇಂದು ಬೆಳಗ್ಗೆ ಇಬ್ಬರೂ ನಾಯಕರ ಸಮಾಗಮ ನಡೆಯಿತು.

'ಕರ್ನಾಕದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಜಗದೀಶ್ ಶೆಟ್ಟರ್ ಒಬ್ಬ ಅನುಭವಿ ರಾಜಕಾರಣಿ. ಈ ಹಂತದಲ್ಲಿ ನಾನು ಅವರಿಗೆ ಸಲಹೆ ನೀಡುವ ಅಗತ್ಯ ಕಂಡುಬರುತ್ತಿಲ್ಲ' ಎಂದು ಶೆಟ್ಟರ್ ಭೇಟಿಯ ಬಳಿಕ ರಾಜನಾಥ್ ಸುದ್ದಿಗಾರರಿಗೆ ತಿಳಿಸಿದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯಿಸಿದ ಶೆಟ್ಟರ್ 'ನಮ್ಮ ಸರಕಾರ ಪೂರ್ಣಾವಧಿ ಪೂರೈಸಲಿದೆ. ಯಾವುದೇ ಆತಂಕವಿಲ್ಲ' ಎಂದು ಸಮರ್ಥಿಸಿಕೊಂಡರು.

ಅಕ್ರಮ ಗಣಿಗಾರಿಕೆ ಭ್ರಷ್ಟಾಚಾರದ ಆರೋಪದಲ್ಲಿ ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಿಎಸ್ ಯಡಿಯೂರಪ್ಪ ಅವರು ನಿರಂತರವಾಗಿ ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಉರುಳಿಸುವ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ಆಗಾಗ ಸಂಕಷ್ಟಕ್ಕೀಡಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+