ಮಂಗಳೂರು :ಬಜರಂಗದಳದಿಂದ ಪಬ್ ಮೇಲೆ ದಾಳಿ

ಅತ್ತಾವರದಲ್ಲಿರುವ ರಾಕ್ಸ್ ಕೆಫೆ ಮೇಲೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿ ನಂತರ ಸಮೀಪದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಫೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ ದಾಳಿ ನಡೆಸಬೇಕಾಯಿತು ಎಂದು ಬಜರಂಗ ದಳ ಕಾರ್ಯಕರ್ತರು ಹೇಳಿದ್ದಾರೆ.
ದಾಳಿ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಪೊಲೀಸರು ಕೆಫೆಯಲ್ಲಿದ್ದ ಮೂವರು ಹುಡುಗರು, ನಾಲ್ಕು ಯುವತಿಯರು ಸೇರಿ ಒಟ್ಟು 7 ಜನ ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧನದ ವೇಳೆ ಎಲ್ಲರೂ ಸಹಜವಾದ ಉಡುಪು ಧರಿಸಿದ್ದರು. ಬಂಧಿತರಲ್ಲಿ ಒಬ್ಬ ಅನ್ಯಧರ್ಮದ ಹುಡುಗ ಎಂದು ತಿಳಿದು ಬಂದಿದೆ.
ರಾಕ್ ಕೆಫೆ ಐಸ್ ಕ್ರೀಮ್ ಪಾರ್ಲರ್ ಆಗಿದೆ. ಇಲ್ಲಿ ಯುವಕ, ಯುವತಿಯರು ಬಂದು ಗಂಟೆಗಟ್ಟಲೇ ಹರಟೆ ಹೊಡೆಯುತ್ತಾ ಕೂರುವುದು ಸಾಮಾನ್ಯ ಸಂಗತಿಯಾಗಿದೆ. ಇದುವರೆವಿಗೂ ಇಲ್ಲಿ ಯಾವುದೇ ಅನೈತಿಕ ಚಟುವಟಿಕೆ ನಡೆದ ಆರೋಪ ಕೇಳಿ ಬಂದಿಲ್ಲ ಎಂದು ಸ್ಪಂದನ ಟಿವಿ ಪ್ರತಿನಿಧಿ ರಾಮದಾಸ್ ಅವರು ಒನ್ ಇಂಡಿಯಾ ಕನ್ನಡ ತಾಣಕ್ಕೆ ತಿಳಿಸಿದ್ದಾರೆ.
ಫ್ಲ್ಯಾಶ್ ಬ್ಯಾಕ್: 2009 ಜನವರಿ ತಿಂಗಳು ಶ್ರೀರಾಮಸೇನೆಯ 40 ಕಾರ್ಯಕರ್ತರು ಮಂಗಳೂರಿನ ಅಮ್ನೇಶಿಯಾ ಪಬ್ ಗೆ ದಾಳಿಯಿಟ್ಟು ಹುಡುಗಿಯರ ಮೇಲೆ ದೌರ್ಜನ್ಯ ನಡೆಸಿದ್ದರು. ಇದಾದ ನಂತರ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ಇದೇ ರೀತಿ ದಾಳಿ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
2009ರ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದ ಸಂಘಟನೆ ಮುಖ್ಯಸ್ಥ ಮುತಾಲಿಕ್, 'ಸಂಘಟನೆಯ ಮೇಲೆ ಇದೊಂದು ಕಪ್ಪು ಚುಕ್ಕೆ ಎಂದಿದ್ದರು. ಮಂಗಳೂರು ಪಬ್ ದಾಳಿಯಿಂದ ಶ್ರೀರಾಮಸೇನೆಯ ಮೇಲೆ ಕೆಲ ಜನರಿಗೆ ಕೆಟ್ಟ ಅಭಿಪ್ರಾಯ ಮೂಡಿದೆ. ಹುಡುಗಿಯರ ನಡೆದ ದಾಳಿಯನ್ನು ಅಂದು ಎಲ್ಲರೂ ಖಂಡಿಸಿದರು. ಇದರಿಂದ ಕೆಲ ವರ್ಗದ ಮಹಿಳೆಯರು ಸಂಘಟನೆಯನ್ನು ನೋಡುವ ದೃಷ್ಟಿಯೇ ಬೇರೆಯಾಗಿದೆ ಎಂದಿದ್ದರು.
ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ತಮ್ಮ ತಪ್ಪಿನ ಅರಿವಾಗಿತ್ತು. ಮಂಗಳೂರಿನಲ್ಲಿ ಸೇನೆಯ ಕಾರ್ಯಕರ್ತರು ನಡೆಸಿದ ಪಬ್ ಮೇಲಿನ ದಾಳಿ ಸಂಪೂರ್ಣ ತಪ್ಪು. ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸುವ ಪ್ರಕರಣ ಇದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.
ರಾಕ್ಸ್ ಕೆಫೆ ದಾಳಿ ಬಗ್ಗೆ ಬಜರಂಗ ದಳ ಮುಖ್ಯಸ್ಥರಾಗಲಿ, ಶ್ರೀರಾಮಸೇನೆ ಮುಖ್ಯಸ್ಥರಾಗಲಿ ಪ್ರತಿಕ್ರಿಯೆ ನೀಡಿಲ್ಲ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಆದರೆ, ದಾಳಿ ಮಾಡಿದ ಬಜರಂಗ ದಳ ಕಾರ್ಯಕರ್ತರ ಮೇಲೆ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ ಎಂಬ ವಿಷಯ ತಿಳಿದು ಬಂದಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications