ಯುದ್ಧಕಾಲದಲ್ಲಿ ಠಾಕ್ರೆ ಹುಲಿಗಳು ಒಂದಾಗಲಿದ್ದಾರೆ
ಮುಂಬೈ, ಜ.30: ಯುದ್ಧಕಾಲದಲ್ಲಿ ಸಂಧಿ ಸಂಧಾನಗಳು ನಡೆಯುವುದು ಮಾಮೂಲಿ, ಚುನಾವಣೆ ಎಂಬ ಮಹಾ ಯುದ್ಧದಲ್ಲಿ ಎದುರಾಳಿಗಳನ್ನು ಸೋಲಿಸಲು ಸಮರ್ಥವಾಗಿ ಕಾದಾಡಲು ಶಿವಸೇನೆ ನಿರ್ಧರಿಸಿದೆ. ಹೀಗಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಅವರ ಕಸಿನ್ ರಾಜ್ ಠಾಕ್ರೆ ಮತ್ತೆ ಒಂದಾಗುವ ಸೂಚನೆ ಸಿಕ್ಕಿದೆ.
ಶಿವಸೇನಾದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸಹೋದರ ಸಂಬಂಧಿ ರಾಜ್ ಠಾಕ್ರೆ ಅವರೊಡನೆ ಇರುವ ಭಿನ್ನಭಿಪ್ರಾಯಕ್ಕೆ ಇಷ್ಟರಲ್ಲೇ ಅಂತ್ಯ ಹಾಡಲಾಗುವುದು. ಇಬ್ಬರು ಕೈಜೋಡಿಸಿ ಮಹಾರಾಷ್ಟ್ರದಲ್ಲಿ ಹೊಸ ಇತಿಹಾಸ ಬರೆಯಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಬುಧವಾರ(ಜ.30) ಸಂದರ್ಶನವೊಂದರಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಅವರಿಗೆ ಮೈತ್ರಿಯಾಗಲು ಇಚ್ಚೆಯಿದ್ದರೆ ಅವರಿಗೆ ಸುಸ್ವಾಗತ ಎಂದು ಪರೋಕ್ಷವಾಗಿ ಶಿವಸೇನಾಗೆ ಆಹ್ವಾನ ನೀಡಿದ್ದಾರೆ. ಈ ಸಂಬಂಧ ರಾಜ್ ಠಾಕ್ರೆ ಮತ್ತು ನಾವು ಪರಸ್ಪರ ಮಾತಕತೆ ನಡೆಸಿ ನಿರ್ಧಾರ ತೆಗೆದು ಕೊಳ್ಳಬೇಕಾಗಿದೆ ಎಂದು ಉದ್ದವ್ ಠಾಕ್ರೆ ಹೇಳಿದ್ದಾರೆ.
2006ರಲ್ಲಿ ರಾಜ್ ಠಾಕ್ರೆ ಅವರು ಶಿವಸೇನಾ ಮುಖ್ಯಸ್ಥರಾಗಿದ್ದ ದಿವಂಗತ ಬಾಳಾ ಠಾಕ್ರೆ ಅವರೊಡನೆ ಸಿಟ್ಟು ಮಾಡಿಕೊಂಡು ಶಿವಸೇನಾ ತೊರೆದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಸಂಘಟನೆ ಸ್ಥಾಪಿಸಿದ್ದರು. ಶಿವಸೇನಾ ಮತ್ತು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಸಂಘಟನೆಗಳು ಮೈತ್ರಿಯಾದರೆ ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಭಯ ಹುಟ್ಟುತ್ತದೆ. ಮಹಾರಾಷ್ಟ್ರದಲ್ಲಿ ಎರಡು ಪಕ್ಷಗಳು ಪ್ರಬಲವಾಗಿದ್ದವು.
ರಾಜ್ ಠಾಕ್ರೆ ಹಾಗೂ ಉದ್ಧವ್ ಠಾಕ್ರೆ ಒಂದಾಗುವ ಬಗ್ಗೆ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಕೂಡಾ ಬರೆಯಲಾಗಿದೆ. ಇಬ್ಬರ ಸಂಗಮದಿಂದ ಕುಟುಂಬ ಹಾಗೂ ರಾಜಕೀಯ ಎರಡರಲ್ಲೂ ಶಕ್ತಿ ಹೆಚ್ಚಿಸಿಕೊಳ್ಳಬಹುದು. ಮರಾಠಿ ಮಾನೂಸ್ ಗಳಿಗಾಗಿ ಹೆಚ್ಚಿನ ಹೋರಾಟ ನಡೆಸಬಹುದು ಎನ್ನಲಾಗಿದೆ.ಎರಡು ಸಂಘಟನೆಗಳು ಮೈತ್ರಿಯಾಗುವುದರಿಂದ ರಾಜಕೀಯ ಪಕ್ಷಗಳಿಗೆ ಚುನಾವಣೆ ಬಗ್ಗೆ ಆತಂಕ ಹುಟ್ಟಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications