ಈಜಿಪುರ ನಿವಾಸಿಗಳ ಗೋಳು ಕೇಳೋರು ಯಾರು?

ಆರ್ಥಿಕವಾಗಿ ದುರ್ಬಲವಾಗಿರುವ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಮನೆಗಳನ್ನು ವಾಣಿಜ್ಯ ಮಳಿಗೆ ನಿರ್ಮಿಸಲು ನೆಲಸಮ ಮಾಡಿರುವ ಹಿನ್ನೆಲೆಯಲ್ಲಿ ನೂರಾರು ದುರ್ಬಲ ವರ್ಗದವರು ಮನೆಮಠ ಕಳೆದುಕೊಂಡು ರಸ್ತೆಪಾಲಾಗಿದ್ದಾರೆ. ಆ ಜಾಗ ಬಿಟ್ಟು ಕದಲುವುದಿಲ್ಲ ಎಂದು ಹಠಹಿಡಿದಿರುವ ಅವರು ಅಲ್ಲೇ ತಾತ್ಕಾಲಿಕ ಟೆಂಟ್ ಹಾಕಿಕೊಂಡು ದಿನರಾತ್ರಿ ಕಳೆಯುತ್ತಿದ್ದಾರೆ.
ಅಂಥವರಲ್ಲಿ ವಿಜಯಲಕ್ಷ್ಮಿ ಎಂಬವರು ಕೂಡ. ಮನೆಗೆಲಸ ಮಾಡಿಕೊಂಡು ಆಸ್ತಮಾದಿಂದ ಬಳಲುತ್ತಿರುವ ಕೆಲಸವಿಲ್ಲದ ಗಂಡ, ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳನ್ನು ಸಾಕುತ್ತಿದ್ದಾರೆ. ಆ ಗಂಡು ಮಕ್ಕಳಲ್ಲಿ ಒಬ್ಬ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾನೆ. ಸದ್ಯಕ್ಕೆ ಪ್ಲಾಸ್ಟಿಕ್ ಶೀಟನ್ನೇ ಸೂರನ್ನಾಗಿ ಮಾಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಆ ಪ್ರದೇಶದಲ್ಲಿ ಅರ್ಧ ಭಾಗ ವಾಣಿಜ್ಯ ಮಳಿಗೆ ಮತ್ತು ಅರ್ಧ ಭಾಗ ವಸತಿ ಸಂಕೀರ್ಣ ನಿರ್ಮಿಸುತ್ತಿರುವ ಕಂಪನಿಯ ಕೆಲಸಗಾರರು ವಿಜಯಲಕ್ಷ್ಮಿ ಮತ್ತು ಕುಟುಂಬವನ್ನು ಜಾಗ ಖಾಲಿ ಮಾಡೆಂದು ಹೇಳಿದಾಗ, ಕೈಯಲ್ಲಿ ಸೀಮೆಎಣ್ಣೆ ಬಾಟಲಿ ಹಿಡಿದುಕೊಂಡು ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದರು. ಬೇರೆ ದಾರಿಯಿಲ್ಲದೆ ಕೆಲಸಗಾರರು ಅಲ್ಲಿಂದ ತೊಲಗಬೇಕಾಯಿತು.
"ನನ್ನ ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾನೆ. ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾನೆ. ಮಗಳು 9ನೇ ಕ್ಲಾಸಿನಲ್ಲಿ ಓದುತ್ತಿದ್ದಾಳೆ. ನಾನು ಮನೆಗೆಲಸ ಮಾಡಿ ಜೀವನ ಸಾಗಿಸಬೇಕು. ಈಗ ಬೇರೆಡೆ ಹೋಗೆಂದರೆ ಎಲ್ಲಿ ಹೋಗಬೇಕು?" ಎಂದು ಕೇಳುತ್ತಾಳೆ ವಿಜಯಲಕ್ಷ್ಮಿ. ತಮಿಳುನಾಡಿನ ಮೂಲದವಳಾದ ವಿಜಯಲಕ್ಷ್ಮಿ ಮತ್ತು ಕುಟುಂಬ ಬೆಂಗಳೂರಿನಲ್ಲಿ ಕಳೆದ 22 ವರ್ಷಗಳಿಂದ ನೆಲೆಸುತ್ತಿದೆ.
ಇದು ಇವರೊಬ್ಬರ ಕಥೆಯಲ್ಲ. ಸೂರಿಲ್ಲದೆ ಬಿಸಿಲು ಚಳೆಯೆನ್ನದೆ ಅಲ್ಲೇ ಜೀವನ ದೂಡುತ್ತಿರುವ ಅನೇಕ ಕುಟುಂಬಗಳು ಈಗ ಬೀದಿಪಾಲಾಗಿವೆ. ಅಸಹನೀಯ ಬದುಕು ಕಾಣುತ್ತಿರುವ ಜನರಿಗಾಗಿ ಅನೇಕ ಸಂಘ ಸಂಸ್ಥೆಗಳು ಸಹಾಯಕ್ಕಾಗಿ ಮುಂದೆ ಬಂದಿವೆ, ಊಟ ಬಟ್ಟೆಬರೆಗಳನ್ನು ನೀಡುತ್ತಿವೆ. ಇಲ್ಲಿನ ಜನರಿಗೆ ಪರಿಹಾರ ಒದಗಿಸಲೆಂದು ಫೇಸ್ ಬುಕ್ ಪುಟ ತೆರೆಯಲಾಗಿದೆ. ಆದರೆ, ಸರಕಾರ ಮಾತ್ರ ಇತ್ತ ಸುಳಿಯುತ್ತಿಲ್ಲ ಎಂಬ ಕೊರಗು ಜನರದು.
ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಆರ್ ಅಶೋಕ್ ಅವರು, ಮನೆ ಕಳೆದುಕೊಂಡವರಿಗೆಲ್ಲ ಗುರುತಿನ ಚೀಟಿ ನೀಡಿ, ವಸತಿಗೆ ಬೇರೆ ವ್ಯವಸ್ಥೆ ಮಾಡುವುದಾಗಿ ವಾಗ್ದಾನ ನೀಡಿದ್ದಾರೆ. ಆದರೆ, ಇನ್ನೂ ಬೇರೆ ವ್ಯವಸ್ಥೆ ಮಾಡಿಲ್ಲ ಎನ್ನುವುದು ಅವರ ಕೊರಗು. ಈ ಜನರ ಕೊರಗು, ಕೂಗು ಅಶೋಕ್ ಅವರಿಗೆ ಕೇಳುವುದೆ?
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications