ನ್ಯಾ. ಭಾಸ್ಕರ್ ರಾವ್ ನೂತನ ಲೋಕಾಯುಕ್ತಕ್ಕೆ ಅಸ್ತು

State Cabinet recommends Justice Y Bhaskar Rao new Karnataka Lokayukta
ಬೆಂಗಳೂರು, ಜ.31: ಒಂದೂವರೆ ವರ್ಷದಿಂದ ಖಾಲಿ ಬಿದ್ದಿದ್ದ ಲೋಕಾಯುಕ್ತ ಸ್ಥಾನಕ್ಕೆ ಕೊನೆಗೂ ಮುಕ್ತಿ ಸಿಗುವಂತಿದೆ. ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರ ಹೆಸರನ್ನು ಲೋಕಾಯುಕ್ತ ಸ್ಥಾನಕ್ಕೆ ಶಿಫಾರಸ್ಸು ಮಾಡಲು ಇಂದು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ನ್ಯಾ. ಭಾಸ್ಕರ್ ರಾವ್ (74) ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ಸೋದರ ಸಂಬಂಧಿ. ಆಗಸ್ಟ್ 2, 2011ರಂದು ನ್ಯಾ. ಸಂತೋಷ್ ಹೆಗ್ಡೆ ಅವರು ನಿವೃತ್ತಿಯಾದ ನಂತರ ಕರ್ನಾಟಕ ಲೋಕಾಯುಕ್ತ ಸ್ಥಾನ ಬಹುತೇಕ ಖಾಲಿಬಿದ್ದಿದೆ. ಈ ಮಧ್ಯೆ, ಆಂಧ್ರದ ಕರೀಂನಗರದವರಾದ ನ್ಯಾ. ಭಾಸ್ಕರ್ ರಾವ್ (74) ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವುದಕ್ಕೆ ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

'ಭಾಸ್ಕರ್ ರಾವ್ ಅವರು ಬಿಡಿಎ ನಿವೇಶನ ಪಡೆದುಕೊಂಡಿದ್ದಾರೆ. ಅವರಿಗೆ ಕನ್ನಡ ಬರುವುದಿಲ್ಲ. ಅವರಿಗೆ ವಯಸ್ಸಾಗಿದೆ. ಪ್ರಸ್ತುತ, ರಾಜ್ಯ ಹೈಕೋರ್ಟಿನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಯಂ ನ್ಯಾಯಮೂರ್ತಿ ನೇಮಕವಾಗುವವರೆಗೂ ನೂತನ ಲೋಕಾಯುಕ್ತ ನೇಮಕಾತಿಗೆ ಕಾಯಬೇಕಿತ್ತು ಎಂದು ನ್ಯಾ. ಭಾಸ್ಕರ್ ರಾವ್ ಅವರ ನೇಮಕಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ತಮ್ಮ ಆಕ್ಷೇಪ ಮಂಡಿಸಿದ್ದಾರೆ.

ನ್ಯಾ. ಭಾಸ್ಕರ್ ರಾವ್ ಅವರು 1999ರ ಜನವರಿ 17ರಿಂದ ಮಾರ್ಚ್ 9ರವರೆಗೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯೂ ಆಗಿದ್ದರು. 1999ರ ಮಾ. 9 ರಿಂದ 2000ನೇ ಜೂನ್ 26ರವರೆಗೆ ಕಾಯಂ ಮುಖ್ಯ ನ್ಯಾಯಮೂರ್ತಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು. 2000ರ ಜೂ. 26 ರಂದು ನಿವೃತ್ತರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+